Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಮಗಳು ರಾಖಿ ಕಟ್ಟಲು ಸಹೋದರ ಬೇಕು ಎಂದು ಕೇಳಿದ್ದಕ್ಕೆ ದಂಪತಿಗಳು ಮಾಡಿದ್ದೇನು ಗೊತ್ತಾ?

ಮಗುವೊಂದು ತನಗೆ ರಾಖಿ ಕಟ್ಟಲು ತಮ್ಮ ತಂಗಿ ಬೇಕು ಎಂದು ಹಠ ಮಾಡಲು ಶುರು ಮಾಡಿದೆ. ಮಗುವಿನ ಆಸೆಯನ್ನು ನೆರವೇರಿಸಲು ದಂಪತಿಗಳು ಸಖತ್​​​​ ಆಗಿ ಪ್ಲಾನ್​​ ಮಾಡಿದ್ದಾರೆ. ಇಲ್ಲಿದೆ ಇಂಟರೆಸ್ಟಿಂಗ್​​ ಸ್ಟೋರಿ.

Viral News: ಮಗಳು ರಾಖಿ ಕಟ್ಟಲು ಸಹೋದರ ಬೇಕು ಎಂದು ಕೇಳಿದ್ದಕ್ಕೆ ದಂಪತಿಗಳು ಮಾಡಿದ್ದೇನು ಗೊತ್ತಾ?
ಸಾಂದರ್ಬಿಕ ಚಿತ್ರ
Follow us
ಅಕ್ಷತಾ ವರ್ಕಾಡಿ
|

Updated on:Aug 27, 2023 | 12:20 PM

ಭಾರತದ ಸಾಂಪ್ರದಾಯಿಕ ಹಬ್ಬಗಳಲ್ಲೊಂದಾದ ರಕ್ಷಾ ಬಂಧನದ ಇನ್ನೇನು ಸಮೀಪಿಸುತ್ತಿದೆ. ಹಬ್ಬ ಬಂತೆಂದರೆ ಸಾಕು ಪ್ರೀತಿಯ ಸೋದರರಿಗೆ ರಾಖಿ ಕಟ್ಟಿ ಆರ್ಶೀವಾದ ಪಡೆದುಕೊಳ್ಳುವ ಸಂಪ್ರದಾಯ ಭಾರತೀಯರಲ್ಲಿ ಹಿಂದಿನಿಂದಲೂ ನಡೆದುಕೊಂಡ ಬಂದ ಪದ್ಧತಿ. ಆದರೆ ಇಲ್ಲೊಂದು ಮನೆಯಲ್ಲಿ ಮಗುವೊಂದು ತನಗೆ ರಾಖಿ ಕಟ್ಟಲು ತಮ್ಮ ತಂಗಿ ಬೇಕು ಎಂದು ಹಠ ಮಾಡಲು ಶುರು ಮಾಡಿದೆ. ಮಗುವಿನ ಆಸೆಯನ್ನು ನೆರವೇರಿಸಲು ದಂಪತಿಗಳು ಮಾಡಿದ್ದೇನು ಗೊತ್ತಾ? ಇಲ್ಲಿದೆ ಇಂಟರೆಸ್ಟಿಂಗ್​​ ಸ್ಟೋರಿ.

ಗುರುವಾರ(ಆ. 24) ಮುಂಜಾನೆ 4.34ಕ್ಕೆ ವಿಕಲಚೇತನ ಮಹಿಳೆಯರೊಬ್ಬರ ಮಗು ನಾಪತ್ತೆಯಾಗಿರುವ ಕುರಿತು ದೆಹಲಿಯ ಪೊಲೀಸ್​​​ ಠಾಣೆಯಲ್ಲಿ ದೂರು ದಾಖಲಾಗಿದೆ. ಛಟ್ಟಾ ರೈಲ್ ಚೌಕ್‌ನ ಫುಟ್‌ಪಾತ್‌ನಲ್ಲಿ ನಾನು ನನ್ನ ಮಗು ಮಲಗಿದ್ದೆವು, ಆದರೆ 3ಗಂಟರೆಯ ಹೊತ್ತಿಗೆ ನನಗೆ ಎಚ್ಚರವಾಗಿದೆ. ಆಗ ಮಗು ನನ್ನ ಬಳಿ ಇರಲಿಲ್ಲ. ಮಗುವನ್ನು ಯಾರೋ ಅಪಹರಿಸಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಬರೆದುಕೊಂಡಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಪೊಲೀಸರು ತನಿಖೆ ಪ್ರಾರಂಭಿಸಿದ್ದು, ಸಮೀಪದ ಪ್ರದೇಶದ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ, ಇಬ್ಬರು ಬೈಕ್‌ನಲ್ಲಿ ಆ ಪ್ರದೇಶದಲ್ಲಿ ತಿರುಗಾಡುತ್ತಿರುವುದು ಕಂಡುಬಂದಿದೆ. ಅವರು ಸುಮಾರು 400 ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿ ಆರೋಪಿಗಳನ್ನು ಸೆರೆಹಿಡಿಯಲಾಗಿದೆ. ಟ್ಯಾಗೋರ್ ಗಾರ್ಡನ್‌ನ ರಘುಬೀರ್ ನಗರದ ನಿವಾಸಿಗಳಾದ ಸಂಜಯ್ ಗುಪ್ತಾ (41) ಮತ್ತು ಅನಿತಾ ಗುಪ್ತಾ (36) ಆರೋಪಿಗಳು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಸರ್ಕಾರಿ ಬಸ್​​​ ಮೇಲ್ಛಾವಣಿ ಸೋರಿಕೆ; ಕೊಡೆ ಹಿಡಿದು ಡ್ರೈವಿಂಗ್ ಮಾಡುತ್ತಿರುವ ಚಾಲಕ

ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದಂತೆ ಇಂಟರೆಸ್ಟಿಂಗ್​​​​ ವಿಚಾರವೊಂದು ಪೊಲೀಸರಿಗೆ ತಿಳಿದುಬಂದಿದೆ. “ಕಳೆದ ವರ್ಷ ಆಗಸ್ಟ್ 17 ರಂದು ತಮ್ಮ ಹದಿಹರೆಯದ ಮಗ ಟೆರೇಸ್‌ನಿಂದ ಬಿದ್ದು ಸಾವನ್ನಪ್ಪಿದ್ದರಿಂದ, ಈ ವರ್ಷದ ರಾಖಿ ಹಬ್ಬದಂದು ಮಗಳು ಸಹೋದರ ಬೇಕೆಂದು ಹಠ ಮಾಡುತ್ತಿದ್ದಳು. ಹಾಗಾಗಿ ಬೀದಿ ಬದಿಯಲ್ಲಿ ಮಲಗಿದ್ದ ಮಗುವನ್ನು ಅಪಹರಿಸಲು ನಿರ್ಧರಿಸಿದೆವು ಎಂದು ದಂಪತಿಗಳಾದ ಸಂಜಯ್ ಮತ್ತು ಅನಿತಾ ಹೇಳಿಕೊಂಡಿದ್ದಾರೆ. ವೃತ್ತಿಯಲ್ಲಿ ಟ್ಯಾಟೂ ಆರ್ಟಿಸ್ಟ್ ಆಗಿರುವ ಸಂಜಯ್ ಈ ಹಿಂದೆ ಮೂರು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಅನಿತಾ ಮೆಹಂದಿ ಕಲಾವಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಅಪಹರಣಕ್ಕೆ ಒಳಗಾದ ಮಗುವಿನ ತಾಯಿ ಅಂಗವಿಕಲರಾಗಿದ್ದು, ಮಗುವಿನ ತಂದೆ ಗುಜುರಿ ಅಂಗಡಿಯಲ್ಲಿ ಕೆಲಸಮಾಡುತ್ತಿದ್ದು ಫುಟ್‌ಪಾತ್‌ನಲ್ಲಿ ವಾಸಿಸುತ್ತಿದ್ದಾರೆ ಎಂದು ಪೊಲೀಸರಿಂದ ತಿಳಿದುಬಂದಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 5:51 pm, Sat, 26 August 23

ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು
ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಸೀರೆಯುಟ್ಟು, ಚಪ್ಪಲಿ ಧರಿಸಿ ಲಂಡನ್​ನ ಪಾರ್ಕ್​ನಲ್ಲಿ ಮಮತಾ ಜಾಗಿಂಗ್
ಸೀರೆಯುಟ್ಟು, ಚಪ್ಪಲಿ ಧರಿಸಿ ಲಂಡನ್​ನ ಪಾರ್ಕ್​ನಲ್ಲಿ ಮಮತಾ ಜಾಗಿಂಗ್
ದಾವಣಗೆರೆ: ನೋಡ ನೋಡ್ತಿದ್ದಂತೆಯೇ ಸುಟ್ಟು ಕರಕಲಾದ ಕಾರುಗಳು
ದಾವಣಗೆರೆ: ನೋಡ ನೋಡ್ತಿದ್ದಂತೆಯೇ ಸುಟ್ಟು ಕರಕಲಾದ ಕಾರುಗಳು