AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಮಗಳು ರಾಖಿ ಕಟ್ಟಲು ಸಹೋದರ ಬೇಕು ಎಂದು ಕೇಳಿದ್ದಕ್ಕೆ ದಂಪತಿಗಳು ಮಾಡಿದ್ದೇನು ಗೊತ್ತಾ?

ಮಗುವೊಂದು ತನಗೆ ರಾಖಿ ಕಟ್ಟಲು ತಮ್ಮ ತಂಗಿ ಬೇಕು ಎಂದು ಹಠ ಮಾಡಲು ಶುರು ಮಾಡಿದೆ. ಮಗುವಿನ ಆಸೆಯನ್ನು ನೆರವೇರಿಸಲು ದಂಪತಿಗಳು ಸಖತ್​​​​ ಆಗಿ ಪ್ಲಾನ್​​ ಮಾಡಿದ್ದಾರೆ. ಇಲ್ಲಿದೆ ಇಂಟರೆಸ್ಟಿಂಗ್​​ ಸ್ಟೋರಿ.

Viral News: ಮಗಳು ರಾಖಿ ಕಟ್ಟಲು ಸಹೋದರ ಬೇಕು ಎಂದು ಕೇಳಿದ್ದಕ್ಕೆ ದಂಪತಿಗಳು ಮಾಡಿದ್ದೇನು ಗೊತ್ತಾ?
ಸಾಂದರ್ಬಿಕ ಚಿತ್ರ
ಅಕ್ಷತಾ ವರ್ಕಾಡಿ
|

Updated on:Aug 27, 2023 | 12:20 PM

Share

ಭಾರತದ ಸಾಂಪ್ರದಾಯಿಕ ಹಬ್ಬಗಳಲ್ಲೊಂದಾದ ರಕ್ಷಾ ಬಂಧನದ ಇನ್ನೇನು ಸಮೀಪಿಸುತ್ತಿದೆ. ಹಬ್ಬ ಬಂತೆಂದರೆ ಸಾಕು ಪ್ರೀತಿಯ ಸೋದರರಿಗೆ ರಾಖಿ ಕಟ್ಟಿ ಆರ್ಶೀವಾದ ಪಡೆದುಕೊಳ್ಳುವ ಸಂಪ್ರದಾಯ ಭಾರತೀಯರಲ್ಲಿ ಹಿಂದಿನಿಂದಲೂ ನಡೆದುಕೊಂಡ ಬಂದ ಪದ್ಧತಿ. ಆದರೆ ಇಲ್ಲೊಂದು ಮನೆಯಲ್ಲಿ ಮಗುವೊಂದು ತನಗೆ ರಾಖಿ ಕಟ್ಟಲು ತಮ್ಮ ತಂಗಿ ಬೇಕು ಎಂದು ಹಠ ಮಾಡಲು ಶುರು ಮಾಡಿದೆ. ಮಗುವಿನ ಆಸೆಯನ್ನು ನೆರವೇರಿಸಲು ದಂಪತಿಗಳು ಮಾಡಿದ್ದೇನು ಗೊತ್ತಾ? ಇಲ್ಲಿದೆ ಇಂಟರೆಸ್ಟಿಂಗ್​​ ಸ್ಟೋರಿ.

ಗುರುವಾರ(ಆ. 24) ಮುಂಜಾನೆ 4.34ಕ್ಕೆ ವಿಕಲಚೇತನ ಮಹಿಳೆಯರೊಬ್ಬರ ಮಗು ನಾಪತ್ತೆಯಾಗಿರುವ ಕುರಿತು ದೆಹಲಿಯ ಪೊಲೀಸ್​​​ ಠಾಣೆಯಲ್ಲಿ ದೂರು ದಾಖಲಾಗಿದೆ. ಛಟ್ಟಾ ರೈಲ್ ಚೌಕ್‌ನ ಫುಟ್‌ಪಾತ್‌ನಲ್ಲಿ ನಾನು ನನ್ನ ಮಗು ಮಲಗಿದ್ದೆವು, ಆದರೆ 3ಗಂಟರೆಯ ಹೊತ್ತಿಗೆ ನನಗೆ ಎಚ್ಚರವಾಗಿದೆ. ಆಗ ಮಗು ನನ್ನ ಬಳಿ ಇರಲಿಲ್ಲ. ಮಗುವನ್ನು ಯಾರೋ ಅಪಹರಿಸಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಬರೆದುಕೊಂಡಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಪೊಲೀಸರು ತನಿಖೆ ಪ್ರಾರಂಭಿಸಿದ್ದು, ಸಮೀಪದ ಪ್ರದೇಶದ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ, ಇಬ್ಬರು ಬೈಕ್‌ನಲ್ಲಿ ಆ ಪ್ರದೇಶದಲ್ಲಿ ತಿರುಗಾಡುತ್ತಿರುವುದು ಕಂಡುಬಂದಿದೆ. ಅವರು ಸುಮಾರು 400 ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿ ಆರೋಪಿಗಳನ್ನು ಸೆರೆಹಿಡಿಯಲಾಗಿದೆ. ಟ್ಯಾಗೋರ್ ಗಾರ್ಡನ್‌ನ ರಘುಬೀರ್ ನಗರದ ನಿವಾಸಿಗಳಾದ ಸಂಜಯ್ ಗುಪ್ತಾ (41) ಮತ್ತು ಅನಿತಾ ಗುಪ್ತಾ (36) ಆರೋಪಿಗಳು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಸರ್ಕಾರಿ ಬಸ್​​​ ಮೇಲ್ಛಾವಣಿ ಸೋರಿಕೆ; ಕೊಡೆ ಹಿಡಿದು ಡ್ರೈವಿಂಗ್ ಮಾಡುತ್ತಿರುವ ಚಾಲಕ

ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದಂತೆ ಇಂಟರೆಸ್ಟಿಂಗ್​​​​ ವಿಚಾರವೊಂದು ಪೊಲೀಸರಿಗೆ ತಿಳಿದುಬಂದಿದೆ. “ಕಳೆದ ವರ್ಷ ಆಗಸ್ಟ್ 17 ರಂದು ತಮ್ಮ ಹದಿಹರೆಯದ ಮಗ ಟೆರೇಸ್‌ನಿಂದ ಬಿದ್ದು ಸಾವನ್ನಪ್ಪಿದ್ದರಿಂದ, ಈ ವರ್ಷದ ರಾಖಿ ಹಬ್ಬದಂದು ಮಗಳು ಸಹೋದರ ಬೇಕೆಂದು ಹಠ ಮಾಡುತ್ತಿದ್ದಳು. ಹಾಗಾಗಿ ಬೀದಿ ಬದಿಯಲ್ಲಿ ಮಲಗಿದ್ದ ಮಗುವನ್ನು ಅಪಹರಿಸಲು ನಿರ್ಧರಿಸಿದೆವು ಎಂದು ದಂಪತಿಗಳಾದ ಸಂಜಯ್ ಮತ್ತು ಅನಿತಾ ಹೇಳಿಕೊಂಡಿದ್ದಾರೆ. ವೃತ್ತಿಯಲ್ಲಿ ಟ್ಯಾಟೂ ಆರ್ಟಿಸ್ಟ್ ಆಗಿರುವ ಸಂಜಯ್ ಈ ಹಿಂದೆ ಮೂರು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಅನಿತಾ ಮೆಹಂದಿ ಕಲಾವಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಅಪಹರಣಕ್ಕೆ ಒಳಗಾದ ಮಗುವಿನ ತಾಯಿ ಅಂಗವಿಕಲರಾಗಿದ್ದು, ಮಗುವಿನ ತಂದೆ ಗುಜುರಿ ಅಂಗಡಿಯಲ್ಲಿ ಕೆಲಸಮಾಡುತ್ತಿದ್ದು ಫುಟ್‌ಪಾತ್‌ನಲ್ಲಿ ವಾಸಿಸುತ್ತಿದ್ದಾರೆ ಎಂದು ಪೊಲೀಸರಿಂದ ತಿಳಿದುಬಂದಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 5:51 pm, Sat, 26 August 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ