AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video :ಈ ಭೂಮಿಯ ಘನತೆ ಈಕೆಗೆ ಗೊತ್ತು ನೋಡಿ, ದೇಶಭಕ್ತಿ ಮೆರೆದ ಗೋಮಾತೆ

ರಾಷ್ಟ್ರಗೀತೆ ಪ್ರಸಾರವಾದಾಗ ಎದ್ದು ನಿಂತು ಗೌರವ ಸೂಚಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯಗಳಲ್ಲಿ ಒಂದು. ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಈ ಬಗ್ಗೆ ಖಂಡಿತವಾಗಿ ಹೇಳಿಕೊಟ್ಟಿರುತ್ತಾರೆ. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಹಸುವೊಂದು ರಾಷ್ಟ್ರಗೀತೆಗೆ ಗೌರವ ಸಲ್ಲಿಸಿದ್ದು, ಸ್ವಲ್ಪವು ಅಲುಗಾಡದೇ ತಟಸ್ಥವಾಗಿಯೇ ನಿಂತುಕೊಂಡಿದೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರ ಹೃದಯ ಗೆದ್ದುಕೊಂಡಿದೆ.

ಸಾಯಿನಂದಾ
|

Updated on: Jun 19, 2025 | 6:38 PM

Share

ಜನಗಣಮನ ಈ ನಮ್ಮ ರಾಷ್ಟ್ರಗೀತೆ (national anthem) ಯನ್ನು ಕೇಳುವಾಗ ಮೈಮನವೆಲ್ಲಾ ಒಂದು ಕ್ಷಣ ರೋಮಾಂಚನವಾಗುತ್ತದೆ. ಹೌದು, ರಾಷ್ಟ್ರಗೀತೆಗೆ ಎದ್ದು ನಿಂತು ಗೌರವ ಸೂಚಿಸುವುದು ಪ್ರತಿಯೊಬ್ಬರ ಮೂಲಭೂತ ಕರ್ತವ್ಯವಾಗಿದೆ. ಆದರೆ ಸುಶಿಕ್ಷಿತರೆನಿಸಿಕೊಂಡ ಜನರೇ  ಅಗೌರವ ತೋರುವಂತಹ ಘಟನೆಗಳು ನಡೆಯುತ್ತಿರುತ್ತದೆ.  ಇದೀಗ ಅಪರೂಪದ ವಿಡಿಯೋವೊಂದು ಸೋಶಿಯಲ್ ಮೀಡಿಯಾ (social media) ದಲ್ಲಿ ವೈರಲ್ ಆಗಿದ್ದು, ಗೋಮಾತೆಯೊಂದು ರಾಷ್ಟ್ರಗೀತೆಗೆ ಗೌರವ ಕೊಟ್ಟು ದೇಶಭಕ್ತಿ ಮೆರೆದಿದ್ದು, ಈ ವಿಡಿಯೋ ನೋಡಿ ಬಳಕೆದಾರರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ವೈರಲ್ ವಿಡಿಯೋದಲ್ಲಿ ಏನಿದೆ?

ಇದನ್ನೂ ಓದಿ
Image
14 ದೇಶಗಳನ್ನು ಹಾದು ಹೋಗುವ ವಿಶ್ವದ ಉದ್ದದ ರಸ್ತೆಯಿದು
Image
ಇಂತಹ ಮಗಳನ್ನು ಪಡೆದ ಆ ತಂದೆಯೇ ಪುಣ್ಯವಂತ
Image
ಚಿಲ್ಲರೆ ಕಾಸಿನಲ್ಲಿ ಪತ್ನಿಗೆ ಮಂಗಳಸೂತ್ರ ಖರೀದಿಸಲು ಬಂದ ವೃದ್ಧ
Image
ಅಪರಿಚಿತ ವ್ಯಕ್ತಿಗೆ ಊಟ ಹಾಕಿ ಸತ್ಕರಿಸಿದ ಬೆಂಗಳೂರಿನ ಕುಟುಂಬ

malleshmumulgi ಹೆಸರಿನ ಖಾತೆಯಲ್ಲಿ ಶೇರ್ ಮಾಡಿಕೊಂಡಿರುವ ವಿಡಿಯೋದಲ್ಲಿ ಹಸುವೊಂದು ರಾಷ್ಟ್ರಗೀತೆಗೆ ಗೌರವ ಕೊಟ್ಟು ನಿಂತಿರುವುದನ್ನು ನೋಡಬಹುದು. ಈ ವಿಡಿಯೋಗೆ ಗೋಮಾತೆ ರಾಷ್ಟ್ರಗೀತೆಗೆ ಕೊಟ್ಟ ಸಮ್ಮಾನ ಎಂದು ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದಾರೆ. ಈ ವಿಡಿಯೋದಲ್ಲಿ, ಶಾಲಾ ಆವರಣದಲ್ಲಿ ಸಾಲಾಗಿ ಮಕ್ಕಳು ನಿಂತುಕೊಂಡಿದ್ದು, ಶಿಕ್ಷಕರ ಜೊತೆ ಸೇರಿ ರಾಷ್ಟ್ರಗೀತೆಯನ್ನು ಹಾಡುತ್ತಿರುವುದನ್ನು ನೋಡಬಹುದು. ಈ ವೇಳೆಯಲ್ಲಿ ಅಲ್ಲೇ ಇದ್ದ ಹಸುವೊಂದು ಅತ್ತಿಂದ ಇತ್ತ ಅಲುಗಾಡದೇ ತಟಸ್ಥವಾಗಿ ನಿಂತುಕೊಳ್ಳುವ ಮೂಲಕ ಗೌರವ ಸೂಚಿಸಿದೆ.

ಇದನ್ನೂ ಓದಿ :Video: ರೀಲ್ಸ್‌ ಮಾಡಲು ಬಂದಾಕೆಗೆ ಜಾಡಿಸಿ ಒದ್ದ ಕುದುರೆ; ವಿಡಿಯೋ ವೈರಲ್‌

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಬಳಕೆದಾರರ ಕಾಮೆಂಟ್‌ಗಳು ಹೀಗಿವೆ

ಈ ವಿಡಿಯೋವೊಂದು ಒಂದು ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು, ಬಳಕೆದಾರರು ಈ ವಿಡಿಯೋವನ್ನು ಮೆಚ್ಚಿಕೊಂಡಿದ್ದಾರೆ. ಬಳಕೆದಾರರೊಬ್ಬರು, ಇದು ನಮ್ಮ ದೇಶ ಅಂದ್ರೆ, ಎಷ್ಟು ಚಂದ ನಿಂತಿದೆ ನೋಡ್ರಿ ಗೋಮಾತೆ, ಇದನ್ನು ನೋಡುವ ನಾವು ನಿಜಕ್ಕೂ ಪುಣ್ಯವಂತರು ಎಂದಿದ್ದಾರೆ. ಇನ್ನೊಬ್ಬರು, ನಮ್ಮ ದೇಶ, ನಮ್ಮ ಸಂಸ್ಕೃತಿಯನ್ನು ಯಾವತ್ತೂ ಯಾರು ಮರೆಯಲು ಸಾಧ್ಯವಿಲ್ಲ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಪುಣ್ಯ ಮಾಡಿದ್ದೇವೆ ನಾವು. ಸಂಸ್ಕಾರ, ಸಂಸ್ಕೃತಿ ಇರುವ ಭಾರತ ದೇಶದಲ್ಲಿ ಹುಟ್ಟಿದ್ದೇವೆ ಎಂದು ಕಾಮೆಂಟ್‌ನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ