AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ತಂದೆಯ ಬರ್ತ್ಡೇಗೆ ಬಾಲ್ಯದ ಸ್ನೇಹಿತರನ್ನೇ ಮನೆಗೆ ಆಹ್ವಾನಿಸಿ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ನೀಡಿದ ಮಗಳು

ಆತ್ಮೀಯರ ಹುಟ್ಟುಹಬ್ಬಕ್ಕೆ ಸ್ಪೆಷಲ್ ಉಡುಗೊರೆ ನೀಡುತ್ತೇವೆ. ಇದೀಗ ಮಗಳೊಬ್ಬಳು ತಂದೆಯ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ಉಡುಗೊರೆ ನೀಡಿದ್ದಾಳೆ. ತಂದೆಯ ಬಾಲ್ಯದ ಸ್ನೇಹಿತರನ್ನು ಹುಟ್ಟುಹಬ್ಬದ ಸ್ಪೆಷಲ್ ದಿನವೇ ಮನೆಗೆ ಆಹ್ವಾನಿಸಿರುವ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತಾದ ಕಂಪ್ಲೀಟ್ ಸ್ಟೋರಿ ಇಲ್ಲಿದೆ.

Video: ತಂದೆಯ ಬರ್ತ್ಡೇಗೆ ಬಾಲ್ಯದ ಸ್ನೇಹಿತರನ್ನೇ ಮನೆಗೆ ಆಹ್ವಾನಿಸಿ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ನೀಡಿದ ಮಗಳು
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Aug 09, 2026 | 1:30 PM

Share

ತಂದೆ ತಾಯಿ ತಮ್ಮ ಮಕ್ಕಳ ಏಳಿಗೆಗಾಗಿ ಹಗಲಿರುಳು ಶ್ರಮಿಸುತ್ತಾರೆ. ಹೀಗಿರುವಾಗ ಮಕ್ಕಳು ತಮ್ಮ ವಿಶೇಷ ದಿನಗಳಲ್ಲಿ ಮರೆಯಲಾಗದ ಉಡುಗೊರೆ (gift) ನೀಡಿದ್ರೆ ಆ ಕ್ಷಣ ಹೇಗಿರಬಹುದು ಎಂದು ಒಮ್ಮೆ ಊಹಿಸಿ. ಇದಕ್ಕೆ ಸಾಕ್ಷಿಯಾಗಿದೆ ಈ ವಿಡಿಯೋ. ಮಗಳೊಬ್ಬಳು ತನ್ನ ತಂದೆಗೆ ಹುಟ್ಟುಹಬ್ಬಕ್ಕೆ (father birthday) ಸರ್ಪ್ರೈಸ್ ನೀಡಿದ್ದಾಳೆ. ಮನೆಗೆ ತನ್ನ ಅಪ್ಪನ ಬಾಲ್ಯದ ಸ್ನೇಹಿತರನ್ನು ಆಹ್ವಾನಿಸಿ  ಖುಷಿ ಪಡಿಸಿದ್ದಾಳೆ. ಈ ಹೃದಯ ಸ್ಪರ್ಶಿ ವಿಡಿಯೋ ನೆಟ್ಟಿಗರ ಗಮನ ಸೆಳೆದಿದೆ.

ಹುಟ್ಟುಹಬ್ಬಕ್ಕೆ ತಂದೆಗೆ ಸರ್ಪ್ರೈಸ್ ನೀಡಿದ ಮಗಳು

ಮೇಘಾ ಎಂ ರಾವ್ (Megha m rao) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್‌ನಲ್ಲಿ ಮಗಳೊಬ್ಬಳು ತನ್ನ ತಂದೆಯ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ನೀಡಿರುವುದನ್ನು ಕಾಣಬಹುದು. ಈ ಸ್ಪೆಷಲ್ ದಿನದಂದು ಮನೆಗೆ ತಂದೆಯ ಬಾಲ್ಯದ ಸ್ನೇಹಿತರನ್ನು ಆಹ್ವಾನಿಸಿದ್ದಾಳೆ. ಒಬ್ಬೊಬ್ಬರು ಮನೆಗೆ ಬರುತ್ತಿದ್ದಂತೆ ತಂದೆ ಖುಷಿಗೆ ಪಾರಾವೇ ಇಲ್ಲದಂತಾಗಿದೆ. ಎಲ್ಲರೂ ಜತೆಗೆ ಸೇರಿ ಬರ್ತ್ಡೇ ಸೆಲೆಬ್ರೇಶನ್ ಮಾಡಿರುವುದನ್ನು ನೀವು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ತನ್ನ ತಾಯಿ ಕೆಲಸ ಮಾಡುತ್ತಿದ್ದ ಮನೆಯನ್ನೇ ಖರೀದಿಸಿ ಸರ್ಪ್ರೈಸ್ ಕೊಟ್ಟ ಮಗ

ಈ ವಿಡಿಯೋ ಇದುವರೆಗೆ ಆರು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ನಿಮ್ಮ ತಂದೆಯ ಪ್ರತಿಕ್ರಿಯೆ ಅದ್ಭುತ ಎಂದಿದ್ದಾರೆ. ಇನ್ನೊಬ್ಬರು, ಈ ದಿನದ ಬೆಸ್ಟ್ ರೀಲ್ಸ್ ಎಂದು ಹೇಳಿದ್ದಾರೆ. ಮತ್ತೊಬ್ಬರು, ನೋಡಿ ಖುಷಿ ಆಯ್ತು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ
ಟೆಕ್ಕಿ ಅದ್ವೈತ್ ಶಿವಗಂಗೆ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆ!
ಟೆಕ್ಕಿ ಅದ್ವೈತ್ ಶಿವಗಂಗೆ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆ!
ಆಗಸ್ಟ್ 10 ರಿಂದ 16 ರವರೆಗಿನ ದ್ವಾದಶ ರಾಶಿಗಳ ಸಂಪೂರ್ಣ ವಾರಭವಿಷ್ಯ ಇಲ್ಲಿದೆ
ಆಗಸ್ಟ್ 10 ರಿಂದ 16 ರವರೆಗಿನ ದ್ವಾದಶ ರಾಶಿಗಳ ಸಂಪೂರ್ಣ ವಾರಭವಿಷ್ಯ ಇಲ್ಲಿದೆ
ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್​​ಡಿಕೆ
ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್​​ಡಿಕೆ
ಇಂದು ಕಾಮಿಕಾ ಏಕಾದಶಿ; ಉಪವಾಸ ವೃತದಿಂದ ಭಗವಂತನ ಕೃಪೆಗೆ ಪಾತ್ರರಾಗುವಿರಿ
ಇಂದು ಕಾಮಿಕಾ ಏಕಾದಶಿ; ಉಪವಾಸ ವೃತದಿಂದ ಭಗವಂತನ ಕೃಪೆಗೆ ಪಾತ್ರರಾಗುವಿರಿ
ದೆಹಲಿಯಲ್ಲಿ ಭಾರೀ ಮಳೆ; ಪಾರ್ಕಿಂಗ್ ಗೋಡೆ ಕುಸಿದು 8 ಕಾರುಗಳು ಪೂರ್ತಿ ಜಖಂ
ದೆಹಲಿಯಲ್ಲಿ ಭಾರೀ ಮಳೆ; ಪಾರ್ಕಿಂಗ್ ಗೋಡೆ ಕುಸಿದು 8 ಕಾರುಗಳು ಪೂರ್ತಿ ಜಖಂ
ಹೈದರಾಬಾದ್​ನ ರಸ್ತೆ ಮಧ್ಯೆ ಬಲೂನ್ ಗ್ಯಾಸ್ ಸಿಲಿಂಡರ್ ಸ್ಫೋಟ
ಹೈದರಾಬಾದ್​ನ ರಸ್ತೆ ಮಧ್ಯೆ ಬಲೂನ್ ಗ್ಯಾಸ್ ಸಿಲಿಂಡರ್ ಸ್ಫೋಟ
ತಿರುವಣ್ಣಾಮಲೈನಲ್ಲಿರುವ ಅರುಣಾಚಲೇಶ್ವರ ದೇವಸ್ಥಾನಕ್ಕೆ ಅಮಿತ್ ಶಾ ಭೇಟಿ
ತಿರುವಣ್ಣಾಮಲೈನಲ್ಲಿರುವ ಅರುಣಾಚಲೇಶ್ವರ ದೇವಸ್ಥಾನಕ್ಕೆ ಅಮಿತ್ ಶಾ ಭೇಟಿ
ಮೂರೇ ವಾರಕ್ಕೆ ಕುಸಿದ 4,700 ಕೋಟಿ ವೆಚ್ಚದ ಲಕ್ನೋ-ಕಾನ್ಪುರ ಹೆದ್ದಾರಿ
ಮೂರೇ ವಾರಕ್ಕೆ ಕುಸಿದ 4,700 ಕೋಟಿ ವೆಚ್ಚದ ಲಕ್ನೋ-ಕಾನ್ಪುರ ಹೆದ್ದಾರಿ
ಒಳ್ಳೆಯ ಸಿನಿಮಾಕ್ಕಾಗಿ ನನ್ನ ಬಳಿ ಸಾಕಷ್ಟು ಹಣ ಇದೆ: ನಿರ್ಮಾಪಕ ವೆಂಕಟ್
ಒಳ್ಳೆಯ ಸಿನಿಮಾಕ್ಕಾಗಿ ನನ್ನ ಬಳಿ ಸಾಕಷ್ಟು ಹಣ ಇದೆ: ನಿರ್ಮಾಪಕ ವೆಂಕಟ್