AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಯಕ್ಷಗಾನ ನೋಡಲು ಬಂದ ವಿಶೇಷ ಅತಿಥಿ; ಆ ಗೆಸ್ಟ್‌ ಯಾರೆಂದು ನೀವೇ ನೋಡಿ

ಕರಾವಳಿ ಗಂಡು ಕಲೆ ಯಕ್ಷಗಾನ ಎಂದರೇನೇ ಎಲ್ಲರ ಕಿವಿ ನೆಟ್ಟಗಾಗುತ್ತದೆ. ಸೋಶಿಯಲ್ ಮೀಡಿಯಾದಲ್ಲಿ ಯಕ್ಷಗಾನ ಕಲಾವಿದರ ತಮಾಷೆಭರಿತ ಮಾತುಕತೆಯ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಆದರೆ ಇದೀಗ ಆಟ ನೋಡಲು ವಿಶೇಷ ಅತಿಥಿ ಚೌಕಿಗೆ ಧಾವಿಸಿದ್ದು, ಈ ಅಪರೂಪದ ಅತಿಥಿಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Video: ಯಕ್ಷಗಾನ ನೋಡಲು ಬಂದ ವಿಶೇಷ ಅತಿಥಿ; ಆ ಗೆಸ್ಟ್‌ ಯಾರೆಂದು ನೀವೇ ನೋಡಿ
ವೈರಲ್‌ ವಿಡಿಯೋ
ಸಾಯಿನಂದಾ
|

Updated on:Nov 21, 2025 | 2:40 PM

Share

ಯಕ್ಷಗಾನವನ್ನು (Yakshagana) ನೋಡುವುದೇ ಚಂದ. ಹೀಗಾಗಿ ಈ ಕಲೆಗೆ ಬಹುದೊಡ್ಡ ಅಭಿಮಾನಿ ಬಳಗವಿದೆ. ಹೌದು, ಪೌರಾಣಿಕ ಪ್ರಸಂಗದ ಜತೆಗೆ ಪ್ರಸಕ್ತ ವಿದ್ಯಮಾನಗಳ ಕುರಿತ ಹಾಸ್ಯಮಯ ಸಂಭಾಷಣೆಗಳ ಕುರಿತಾದ ವಿಡಿಯೋ ವೈರಲ್ ಆಗುವುದನ್ನು ನೀವು ನೋಡಿರುತ್ತೀರಿ. ಆದರೆ ಇದೀಗ ಸ್ಪೆಷಲ್‌ ಗೆಸ್ಟ್‌ನ ಆಗಮನದಿಂದಲೇ ಈ ದೃಶ್ಯ ಹರಿದಾಡುತ್ತಿದೆ.  ಈ ಪ್ರಾಣಿಗಳಿಗೂ ಯಕ್ಷಗಾನವೆಂದರೆ ಎಷ್ಟು ಪ್ರೀತಿಯಿದೆ ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ. ಹೌದು, ಕಮಲಶಿಲೆ ಮೇಳದವರ ಸೇವೆಯಾಟದ ಸಂದರ್ಭದಲ್ಲಿ ಆಟ ಆಸ್ವಾದಿಸಲು ಜಿಂಕೆಯೊಂದು ಚೌಕಿಗೆ ಆಗಮಿಸಿದೆ. ಯಕ್ಷಗಾನ ನೋಡಲು ಬಂದ ವಿಶೇಷ ಅತಿಥಿಯಾದ ಜಿಂಕೆಯ (deer) ಈ ವಿಡಿಯೋ ಸದ್ಯ ವೈರಲ್ ಆಗಿದ್ದು, ನೆಟ್ಟಿಗರು ಈ ದೃಶ್ಯ ನೋಡಿ ಖುಷಿ ಪಟ್ಟಿದ್ದಾರೆ.

jpbadakere ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಂಡಿದ್ದು, ಯಕ್ಷಗಾನವೆಂದರೆ ಈ ಪ್ರಾಣಿಗಳಿಗೂ ಪ್ರೀತಿ! ಹೌದು ನಿನ್ನೆ ರಾತ್ರಿ ಕಮಲಶಿಲೆ ಮೇಳದವರ ಸೇವೆಯಾಟದ ಸಂದರ್ಭದಲ್ಲಿ ಚೌಕಿಗೆ ಬಂದ ಈ ಜಿಂಕೆ ಆದಿಪೂಜಿತ ಗಣಪತಿಗೆ ಮೊದಲೊಂದಿಸಿ. ನಂತರ ಆಟ ಆಸ್ವಾದಿಸಲು ರಂಗಸ್ಥಳದೆಡೆಗೆ ಧಾವಿಸಿದಂತಿದೆ ಎಂದು ಶೀರ್ಷಿಕೆಯಲ್ಲಿ ಬರೆಯಲಾಗಿದೆ. ಈ ವಿಡಿಯೋದಲ್ಲಿ ಜಿಂಕೆಯೊಂದು ಚೌಕಿಗೆ ಬಂದು ಆ ಬಳಿಕ ಯಕ್ಷಗಾನ ನೋಡಲು ರಂಗಸ್ಥಳದೆಡೆಗೆ ಹೋಗುತ್ತಿರುವ ದೃಶ್ಯವನ್ನು ನೀವಿಲ್ಲಿ ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಇದನ್ನೂ ಓದಿ:ದೈಹಿಕ ಅಂಗವೈಕಲ್ಯತೆಯನ್ನು ಮೀರಿ ಪ್ರತಿಭೆ ಪ್ರದರ್ಶಿಸಿದ ಕಲಾವಿದರು

ಈ ವಿಡಿಯೋ ಮೂವತ್ತು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಬೇಕು ಅಂತ ಬಂದದ್ದಲ್ಲ, ದಾರಿ ತಪ್ಪಿ ಬಂದದ್ದು ಎಂದು ಹೇಳಿದ್ದಾರೆ. ಇನ್ನೊಬ್ಬರು, ವಾವ್ಹ್ ಯಕ್ಷಗಾನ ನೋಡಲು ಬಂದೇ ಬಿಟ್ರು ಸ್ಪೆಷಲ್ ಗೆಸ್ಟ್ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನು ಕೆಲವರು ಹಾರ್ಟ್ ಸಿಂಬಲ್ ಕಳುಹಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:19 pm, Fri, 21 November 25

ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ
ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ
ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಗೆ ನಾಯಕಿಯಾದ ‘ರಾಮಾಚಾರಿ’ ಮೌನ
ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಗೆ ನಾಯಕಿಯಾದ ‘ರಾಮಾಚಾರಿ’ ಮೌನ
ಡೆಲಿವರಿ ಬಾಯ್ಸ್ಗೆ ಹೆಲ್ಮೆಟ್​ನಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು
ಡೆಲಿವರಿ ಬಾಯ್ಸ್ಗೆ ಹೆಲ್ಮೆಟ್​ನಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು
ಸ್ಕೂಟರ್​​ಗೆ ಡಿಕ್ಕಿ ತಪ್ಪಿಸಲು ಹೋಗಿ ರಿಕ್ಷಾ ಪಲ್ಟಿ; ವಿಡಿಯೋ ವೈರಲ್
ಸ್ಕೂಟರ್​​ಗೆ ಡಿಕ್ಕಿ ತಪ್ಪಿಸಲು ಹೋಗಿ ರಿಕ್ಷಾ ಪಲ್ಟಿ; ವಿಡಿಯೋ ವೈರಲ್
ಚಿನ್ನಾಭರಣ ಕದ್ದಿದ್ದ ನೇಪಾಳಿ ಜೋಡಿ ಮಹಾರಾಷ್ಟ್ರಕ್ಕೆ ಎಸ್ಕೇಪ್!
ಚಿನ್ನಾಭರಣ ಕದ್ದಿದ್ದ ನೇಪಾಳಿ ಜೋಡಿ ಮಹಾರಾಷ್ಟ್ರಕ್ಕೆ ಎಸ್ಕೇಪ್!
ಶೋಗಾಗಿ ಮತ್ತೆ ಒಂದಾದ ಗಿಲ್ಲಿ ನಟ ಹಾಗೂ ಕಾವ್ಯಾ ಶೈವ
ಶೋಗಾಗಿ ಮತ್ತೆ ಒಂದಾದ ಗಿಲ್ಲಿ ನಟ ಹಾಗೂ ಕಾವ್ಯಾ ಶೈವ
ಒಪ್ಪಂದ ಆಗಿದೆ, ನಾವು ಡಿಕೆಶಿಗಾಗಿ ಪ್ರಾಣ ಕೊಡಲೂ ಸಿದ್ಧ: ಬಸವರಾಜ ಶಿವಗಂಗಾ
ಒಪ್ಪಂದ ಆಗಿದೆ, ನಾವು ಡಿಕೆಶಿಗಾಗಿ ಪ್ರಾಣ ಕೊಡಲೂ ಸಿದ್ಧ: ಬಸವರಾಜ ಶಿವಗಂಗಾ
T20 World Cup 2026: ಇಟಲಿ ಮುಂದೆ ಯುಎಇ ಪಲ್ಟಿ!
T20 World Cup 2026: ಇಟಲಿ ಮುಂದೆ ಯುಎಇ ಪಲ್ಟಿ!
ಶಾಸಕರು, ರಾಜ್ಯದ ಜನರಿಗೆ ನಾನೇ ಸಿಎಂ ಆಗಬೇಕೆಂದಿದೆ: ಡಿಕೆ ಶಿವಕುಮಾರ್
ಶಾಸಕರು, ರಾಜ್ಯದ ಜನರಿಗೆ ನಾನೇ ಸಿಎಂ ಆಗಬೇಕೆಂದಿದೆ: ಡಿಕೆ ಶಿವಕುಮಾರ್
ಎರಡಂಕಿ ಮೊತ್ತಕ್ಕೆ ನಮೀಬಿಯ ಆಲೌಟ್: ಭಾರತಕ್ಕೆ ಭರ್ಜರಿ ಜಯ
ಎರಡಂಕಿ ಮೊತ್ತಕ್ಕೆ ನಮೀಬಿಯ ಆಲೌಟ್: ಭಾರತಕ್ಕೆ ಭರ್ಜರಿ ಜಯ