AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಫ್ಟ್​​​ನಲ್ಲಿ ಬಾಲಕಿಯ ಮೇಲೆ ದಾಳಿ ಮಾಡಿದ ನಾಯಿ, ನಿಮಗೆ ನಿಯಂತ್ರಣ ಮಾಡಲು ಸಾಧ್ಯವಾಗದಿದ್ದರೆ ಸಾಕಬೇಡಿ

ನೋಯ್ಡಾದಲ್ಲಿ ಬಾಲಕಿಯ ಮೇಲೆ ಸಾಕು ಶ್ವಾನವೊಂದು ದಾಳಿ ಮಾಡಿದೆ. ಈ ದಾಳಿಯಿಂದ ಬಾಲಕಿಗೆ ಆಘಾತವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಇದರ ಜತೆಗೆ ಅಕ್ಕ-ಪಕ್ಕದ ಜನರು ಕೂಡ ಅಕ್ರೋಶ ವ್ಯಕ್ತಪಡಿಸಿದ್ದಾರೆ. ನಾಯಿಯನ್ನು ನಿಯಂತ್ರಣ ಮಾಡಲು ಸಾಧ್ಯವಾಗದಿದ್ದರೆ, ಸಾಕಬೇಡಿ ಎಂದು ಹೇಳಿದ್ದಾರೆ

ಲಿಫ್ಟ್​​​ನಲ್ಲಿ ಬಾಲಕಿಯ ಮೇಲೆ ದಾಳಿ ಮಾಡಿದ ನಾಯಿ, ನಿಮಗೆ ನಿಯಂತ್ರಣ ಮಾಡಲು ಸಾಧ್ಯವಾಗದಿದ್ದರೆ ಸಾಕಬೇಡಿ
ಅಕ್ಷಯ್​ ಪಲ್ಲಮಜಲು​​
|

Updated on: May 08, 2024 | 10:03 AM

Share

ಸಾಕು ನಾಯಿಗಳ ದಾಳಿ ಮಾಡುವ ಪ್ರಕರಣ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ, ಅದರಲ್ಲೂ ಅಪಾರ್ಟ್ಮೆಂಟ್​​ಗಳಲ್ಲಿ ಇಂತಹ ಘಟನೆ ಹೆಚ್ಚು ಕಂಡು ಬರುತ್ತಿದೆ. ಇದೀಗ ನೋಯ್ಡಾದ ಲೋಟಸ್​ 300 ರೆಸಿಡಿನ್ಶಿಯಲ್​​ ಸೊಸೈಟ್​​​ನಲ್ಲಿ ಆಘತಕಾರಿ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಲಿಫ್ಟ್​​​ನಲ್ಲಿ ಬಾಲಕಿಯೊಬ್ಬಳ ಮೇಲೆ ಅನೀರಿಕ್ಷಿತವಾಗಿ ನಾಯಿಯೊಂದು ದಾಳಿ ಮಾಡಿದೆ. ಇದೀಗ ಈ ವಿಡಿಯೋ ಎಕ್ಸ್​​​ನಲ್ಲಿ ವೈರಲ್​​​ ಆಗುತ್ತಿದೆ. ಮೇ 3ರಂದು ಈ ಘಟನೆ ನಡೆದಿದೆ. ಬಾಲಕಿಯೊಬ್ಬಳು ಲಿಫ್ಟ್​​​ನ ಒಳಗೆ ಇರುವುದನ್ನು ಈ ವಿಡಿಯೋದಲ್ಲಿ ಕಾಣಬಹುದು. ಲಿಫ್ಟ್​​​​​ ಓಪನ್​​​ ಆಗುತ್ತಿದ್ದಂತೆ ಶ್ವಾನ ಲಿಫ್ಟ್​​​​ನ ಒಳಗೆ ಬಂದು ಬಾಲಕಿಯ ಮೇಲೆ ದಾಳಿ ಮಾಡಿದೆ.

ಶ್ವಾನ ದಾಳಿ ಮಾಡಿದಾಗ ಬಾಲಕಿ ಮೇಲಕ್ಕೆ ನೆಗೆದಿದ್ದಾಳೆ. ಈ ವೇಳೆ ನಾಯಿ ಕಚ್ಚಿದೆ ಎಂದು ಹೇಳಲಾಗಿದೆ. ಇದೇ ವೇಳೆ ವ್ಯಕ್ತಿಯೊಬ್ಬರು ಬಂದು ಬಾಲಕಿಯನ್ನು ನಾಯಿಯಿಂದ ಕಾಪಾಡಿದ್ದಾರೆ. ಇನ್ನು ಕಾಪಾಡಲು ಬಂದ ವ್ಯಕ್ತಿಯನ್ನು ನಾಯಿಯ ಮಾಲೀಕ ಎಂದು ಹೇಳಲಾಗಿದೆ. ನಾಯಿ ಬಾಲಕಿಯ ಮೇಲೆ ದಾಳಿ ಮಾಡಿದಾಗ ಈ ವ್ಯಕ್ತಿ ನಾಯಿಯನ್ನು ಒದ್ದು ಹೊರಗೆ ಕಳುಹಿಸಿದ್ದಾರೆ. ಆದರೆ ಬಾಲಕಿ ಇದೀಗ ನಾಯಿ ದಾಳಿಯಿಂದ ತುಂಬಾ ಭಯಗೊಂಡಿದ್ದಾಳೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಕೇರಳದಲ್ಲಿ ಐವರಿಗೆ ವೆಸ್ಟ್ ನೈಲ್ ಜ್ವರ ಪತ್ತೆ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇನ್ನು ಈ ಘಟನೆಯಿಂದ ಅಕ್ಕ ಪಕ್ಕದ ಜನರು ಅಕ್ರೋಶಗೊಂಡಿದ್ದು. ಸಾಕು ನಾಯಿಗಳನ್ನು ಹೀಗೆ ಸಾರ್ವಜನಿಕ ಪ್ರದೇಶದಲ್ಲಿ ಬಿಡುವುದು ಸರಿಯಲ್ಲ, ಇದನ್ನು ನಿಮಗೆ ನಿಯಂತ್ರಣ ಮಾಡಲು ಸಾಧ್ಯವಾಗದಿದ್ದರೆ. ಯಾಕೆ ಸಾಕಬೇಕು ಎಂದು ಕೇಳಿದ್ದಾರೆ. ಇದೀಗ ಬಾಲಕಿಯ ಪೋಷಕರು ಈ ಘಟನೆ ಬಗ್ಗೆ ನೋಯ್ಡಾ ಪೊಲೀಸರಿಗೆ ದೂರು ಕೂಡ ನೀಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶ್ರೇಯಾ ಘೋಷಾಲ್ ಹಾಡಬೇಕಿದ್ದ ಸಾಂಗ್ ಈಗ ಲಹರಿ ಮಹೇಶ್ ಪಾಲಾಯ್ತು
ಶ್ರೇಯಾ ಘೋಷಾಲ್ ಹಾಡಬೇಕಿದ್ದ ಸಾಂಗ್ ಈಗ ಲಹರಿ ಮಹೇಶ್ ಪಾಲಾಯ್ತು
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ