AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಫ್ಟ್​​​ನಲ್ಲಿ ಬಾಲಕಿಯ ಮೇಲೆ ದಾಳಿ ಮಾಡಿದ ನಾಯಿ, ನಿಮಗೆ ನಿಯಂತ್ರಣ ಮಾಡಲು ಸಾಧ್ಯವಾಗದಿದ್ದರೆ ಸಾಕಬೇಡಿ

ನೋಯ್ಡಾದಲ್ಲಿ ಬಾಲಕಿಯ ಮೇಲೆ ಸಾಕು ಶ್ವಾನವೊಂದು ದಾಳಿ ಮಾಡಿದೆ. ಈ ದಾಳಿಯಿಂದ ಬಾಲಕಿಗೆ ಆಘಾತವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಇದರ ಜತೆಗೆ ಅಕ್ಕ-ಪಕ್ಕದ ಜನರು ಕೂಡ ಅಕ್ರೋಶ ವ್ಯಕ್ತಪಡಿಸಿದ್ದಾರೆ. ನಾಯಿಯನ್ನು ನಿಯಂತ್ರಣ ಮಾಡಲು ಸಾಧ್ಯವಾಗದಿದ್ದರೆ, ಸಾಕಬೇಡಿ ಎಂದು ಹೇಳಿದ್ದಾರೆ

ಲಿಫ್ಟ್​​​ನಲ್ಲಿ ಬಾಲಕಿಯ ಮೇಲೆ ದಾಳಿ ಮಾಡಿದ ನಾಯಿ, ನಿಮಗೆ ನಿಯಂತ್ರಣ ಮಾಡಲು ಸಾಧ್ಯವಾಗದಿದ್ದರೆ ಸಾಕಬೇಡಿ
ಅಕ್ಷಯ್​ ಪಲ್ಲಮಜಲು​​
|

Updated on: May 08, 2024 | 10:03 AM

Share

ಸಾಕು ನಾಯಿಗಳ ದಾಳಿ ಮಾಡುವ ಪ್ರಕರಣ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ, ಅದರಲ್ಲೂ ಅಪಾರ್ಟ್ಮೆಂಟ್​​ಗಳಲ್ಲಿ ಇಂತಹ ಘಟನೆ ಹೆಚ್ಚು ಕಂಡು ಬರುತ್ತಿದೆ. ಇದೀಗ ನೋಯ್ಡಾದ ಲೋಟಸ್​ 300 ರೆಸಿಡಿನ್ಶಿಯಲ್​​ ಸೊಸೈಟ್​​​ನಲ್ಲಿ ಆಘತಕಾರಿ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಲಿಫ್ಟ್​​​ನಲ್ಲಿ ಬಾಲಕಿಯೊಬ್ಬಳ ಮೇಲೆ ಅನೀರಿಕ್ಷಿತವಾಗಿ ನಾಯಿಯೊಂದು ದಾಳಿ ಮಾಡಿದೆ. ಇದೀಗ ಈ ವಿಡಿಯೋ ಎಕ್ಸ್​​​ನಲ್ಲಿ ವೈರಲ್​​​ ಆಗುತ್ತಿದೆ. ಮೇ 3ರಂದು ಈ ಘಟನೆ ನಡೆದಿದೆ. ಬಾಲಕಿಯೊಬ್ಬಳು ಲಿಫ್ಟ್​​​ನ ಒಳಗೆ ಇರುವುದನ್ನು ಈ ವಿಡಿಯೋದಲ್ಲಿ ಕಾಣಬಹುದು. ಲಿಫ್ಟ್​​​​​ ಓಪನ್​​​ ಆಗುತ್ತಿದ್ದಂತೆ ಶ್ವಾನ ಲಿಫ್ಟ್​​​​ನ ಒಳಗೆ ಬಂದು ಬಾಲಕಿಯ ಮೇಲೆ ದಾಳಿ ಮಾಡಿದೆ.

ಶ್ವಾನ ದಾಳಿ ಮಾಡಿದಾಗ ಬಾಲಕಿ ಮೇಲಕ್ಕೆ ನೆಗೆದಿದ್ದಾಳೆ. ಈ ವೇಳೆ ನಾಯಿ ಕಚ್ಚಿದೆ ಎಂದು ಹೇಳಲಾಗಿದೆ. ಇದೇ ವೇಳೆ ವ್ಯಕ್ತಿಯೊಬ್ಬರು ಬಂದು ಬಾಲಕಿಯನ್ನು ನಾಯಿಯಿಂದ ಕಾಪಾಡಿದ್ದಾರೆ. ಇನ್ನು ಕಾಪಾಡಲು ಬಂದ ವ್ಯಕ್ತಿಯನ್ನು ನಾಯಿಯ ಮಾಲೀಕ ಎಂದು ಹೇಳಲಾಗಿದೆ. ನಾಯಿ ಬಾಲಕಿಯ ಮೇಲೆ ದಾಳಿ ಮಾಡಿದಾಗ ಈ ವ್ಯಕ್ತಿ ನಾಯಿಯನ್ನು ಒದ್ದು ಹೊರಗೆ ಕಳುಹಿಸಿದ್ದಾರೆ. ಆದರೆ ಬಾಲಕಿ ಇದೀಗ ನಾಯಿ ದಾಳಿಯಿಂದ ತುಂಬಾ ಭಯಗೊಂಡಿದ್ದಾಳೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಕೇರಳದಲ್ಲಿ ಐವರಿಗೆ ವೆಸ್ಟ್ ನೈಲ್ ಜ್ವರ ಪತ್ತೆ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇನ್ನು ಈ ಘಟನೆಯಿಂದ ಅಕ್ಕ ಪಕ್ಕದ ಜನರು ಅಕ್ರೋಶಗೊಂಡಿದ್ದು. ಸಾಕು ನಾಯಿಗಳನ್ನು ಹೀಗೆ ಸಾರ್ವಜನಿಕ ಪ್ರದೇಶದಲ್ಲಿ ಬಿಡುವುದು ಸರಿಯಲ್ಲ, ಇದನ್ನು ನಿಮಗೆ ನಿಯಂತ್ರಣ ಮಾಡಲು ಸಾಧ್ಯವಾಗದಿದ್ದರೆ. ಯಾಕೆ ಸಾಕಬೇಕು ಎಂದು ಕೇಳಿದ್ದಾರೆ. ಇದೀಗ ಬಾಲಕಿಯ ಪೋಷಕರು ಈ ಘಟನೆ ಬಗ್ಗೆ ನೋಯ್ಡಾ ಪೊಲೀಸರಿಗೆ ದೂರು ಕೂಡ ನೀಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ