AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಇಷ್ಟವಾದ ತಿಂಡಿಯನ್ನು ಎಗರಿಸಲು ಈ ನಾಯಿ ಮಾಡಿದ ಖತರ್ನಾಕ್ ಪ್ಲಾನ್ ಏನು?; ವಿಡಿಯೊ ನೋಡಿ

ತನಗಿಷ್ಟವಾದ ತಿಂಡಿಯನ್ನು ಹೇಗಾದರೂ ಮಾಡಿ ಪಟಾಯಿಸಬೇಕೆಂದು ತೀರ್ಮಾನಿಸಿದ ಈ ಸೀಕ್ರೆಟ್ ಏಜೆಂಟ್, ಒಂದು ಖತರ್ನಾಕ್ ಉಪಾಯ ಮಾಡಿತು. ಅದೇನು? ನಾಯಿಯ ಮುದ್ದಾದ ವಿಡಿಯೊ ಇಲ್ಲಿದೆ ನೋಡಿ.

Viral Video: ಇಷ್ಟವಾದ ತಿಂಡಿಯನ್ನು ಎಗರಿಸಲು ಈ ನಾಯಿ ಮಾಡಿದ ಖತರ್ನಾಕ್ ಪ್ಲಾನ್ ಏನು?; ವಿಡಿಯೊ ನೋಡಿ
Credits: DoggosbeingDoggos/ Instagram
TV9 Web
| Edited By: |

Updated on: Aug 28, 2021 | 11:21 AM

Share

ಕೆಲವು ಸಾಕು ಪ್ರಾಣಿಗಳು ತಮ್ಮ‌ ಚುರುಕು ಬುದ್ಧಿಮತ್ತೆಯಿಂದ‌ ಎಲ್ಲರ ಗಮನ ಸೆಳೆಯುತ್ತವೆ. ಅದರಲ್ಲೂ ಶ್ವಾನಗಳು ತಮ್ಮ ತುಂಟಾಟದಿಂದ ಮನೆ ಮಂದಿಯನ್ನು ರಂಜಿಸುತ್ತಿರುತ್ತವೆ. ತುಸುವೇ ಪ್ರೀತಿ ತೋರಿದರೂ ಸಾಕು, ಬೆಟ್ಟದಷ್ಟು ಪ್ರೀತಿಯನ್ನು ಅವು ನಮಗೆ ಮರಳಿ‌ ನೀಡುತ್ತವೆ ಎಂದು ಪ್ರಾಣಿ ಪ್ರಿಯರು ಶ್ವಾನಗಳ ಕುರಿತಾಗಿ ಹೆಮ್ಮೆಯಿಂದ ನುಡಿಯುವುದನ್ನು ಕೇಳಿಯೇ ಇರುತ್ತೀರಿ. ಅಂತಹವುಗಳ ತುಂಟಾಟಗಳು ಸಾಮಾಜಿಕ ಜಾಲತಾಣದಲ್ಲೂ ಸಖತ್ ಸುದ್ದಿಯಾಗುತ್ತವೆ. ಅವನ್ನು ಹಂಚಿಕೊಂಡು ಪ್ರಾಣಿಪ್ರಿಯರು ಮನಸಾರೆ ನಗುತ್ತಾರೆ, ಸಂತಸಪಡುತ್ತಾರೆ. ಕೆಲಸದ ಒತ್ತಡದ ಮಧ್ಯೆ ಮನಸ್ಸು ಹಗುರಾಗಲು ಇಂಥವುಗಳು ಸಹಕಾರಿ ಎಂಬುದು ಅವರ ಅಂಬೋಣ.

ಅಂಥದ್ದೇ ಒಂದು ವಿಡಿಯೊ ಇಲ್ಲಿದೆ. ಬಾಯಲ್ಲಿ ನೀರೂರಿಸುವ ತಿಂಡಿಯನ್ನು ಎದುರಿನ ಟೇಬಲ್ ಮೇಲಿಟ್ಟು, ತಿನ್ನಲು ತಯಾರಾಗಿರುವ ಯುವತಿಗೆ ಒಂದು ನಾಯಿ‌ ಬಂದು ಪ್ರೀತಿಯಿಂದ ಮಾತನಾಡಿಸುತ್ತದೆ. ಆಕೆಯೂ ಅದನ್ನು‌ ಮುದ್ದು ಮಾಡಲು ತೊಡಗಿದಾಗ, ಚಾಕಚಕ್ಯತೆಯಿಂದ ಟೇಬಲ್ ಮೇಲಿದ್ದ ತಿಂಡಿಯನ್ನು ಎಗರಿಸಿಕೊಂಡ ನಾಯಿ ಪರಾರಿಯಾಗುತ್ತದೆ. ಎಲ್ಲರನ್ನೂ ನಗೆಗಡಲಲ್ಲಿ ತೇಲಿಸಿರುವ ಈ ವಿಡಿಯೊಕ್ಕೆ ಸುಂದರ ಅಡಿಬರಹವನ್ನೂ ನೀಡಲಾಗಿದೆ.

ನಾಯಿಗೆ ಸೀಕ್ರೆಟ್ ಏಜೆಂಟ್ ಎಂದು ಕರೆಯಲಾಗಿದ್ದು, ಅದು ತನ್ನ ಮಿಷನ್ ಸಾಧನೆಗೋಸ್ಕರ ಏನು‌ ಮಾಡುತ್ತದೆ ನೋಡಿ ಎಂಬರ್ಥದಲ್ಲಿ ಕ್ಯಾಪ್ಶನ್ ನೀಡಿ ವಿಡಿಯೊ ಹಂಚಿಕೊಳ್ಳಲಾಗಿದೆ.

ವಿಡಿಯೊ ಇಲ್ಲಿದೆ:

ವಿಡಿಯೊವನ್ನು ಡಾಗೊಸ್ ಬೀಯಿಂಗ್ ಡಾಗೋಸ್ ಎಂಬ ಖಾತೆಯಿಂದ ಹಂಚಿಕೊಳ್ಳಲಾಗಿದೆ, ಈಗಾಗಲೇ 1.4 ಲಕ್ಷಕ್ಕೂ ಅಧಿಕ ವೀಕ್ಷಣೆ ಈ ವಿಡಿಯೊಗೆ ಲಭ್ಯವಾಗಿದ್ದು, ನೆಟ್ಟಿಗರು ವಿಧವಿಧವಾಗಿ ಕಾಮೆಂಟ್ ಮಾಡುತ್ತಿದ್ದಾರೆ. ‘ಈ ವಿಡಿಯೊ ನೋಡುತ್ತಲೇ ಇರಬೇಕು ಎನಿಸುತ್ತಿದೆ’ ಎಂದು ಒಬ್ಬರು ಬರೆದಿದ್ದರೆ, ಮತ್ತೊಬ್ಬರು, ‘ಈ ನಾಯಿಗೆ ಅದ್ಭುತವಾಗಿ ತರಬೇತಿ ನೀಡಲಾಗಿದೆ’ ಎಂದ ಹೊಗಳಿದ್ದಾರೆ.

ಇದನ್ನೂ ಓದಿ:

ಹಸಿರು ಬಣ್ಣಕ್ಕೆ ತಿರುಗಿದ ತುಂಗಭದ್ರಾ ಜಲಾಶಯ ನೀರು! ಇದು ಇಂದು ನಿನ್ನೆಯ ಕಥೆಯಲ್ಲ

ಕಲಬುರಗಿ ಯುವಕನ ಅಂಗಾಂಗ ದಾನ; ಜಿರೋ ಟ್ರಾಫಿಕ್​ನಲ್ಲಿ ಹೈದರಾಬಾದ್​ಗೆ ರವಾನೆ

(A dog distracts woman and steal food got netizens attention watch video)

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ