AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಕನಾಯಿ; ಹಿಮಪ್ರದೇಶದಲ್ಲಿ ಹಸುಗಳಿಗೆ ದಾರಿ ಮಾಡಿಕೊಡುತ್ತಿರುವ ನಾಯಿಯ ವಿಡಿಯೋ ವೈರಲ್

Dog : ನಮ್ಮ ದೇಶಕ್ಕೆ ಹೀಗೆ ಸ್ವತಃ ಚಲಿಸಿ ದಾರಿಯನ್ನು ತೆರೆದು ಕೊಡುವವರು ಬೇಕು, ನಿಷ್ಠೆ ಮತ್ತು ಸಹಾಯಕ್ಕೆ ಹೆಸರುವಾಸಿಯಾಗಿರುವ ಈ ನಾಯಿಯಂಥ ನಾಯಕರು ನಮಗೆ ಬೇಕು ಎನ್ನುತ್ತಿದ್ದಾರೆ ನೆಟ್ಟಿಗರು. ನೋಡಿ ವಿಡಿಯೋ.

ನಾಯಕನಾಯಿ; ಹಿಮಪ್ರದೇಶದಲ್ಲಿ ಹಸುಗಳಿಗೆ ದಾರಿ ಮಾಡಿಕೊಡುತ್ತಿರುವ ನಾಯಿಯ ವಿಡಿಯೋ ವೈರಲ್
A Dog Making Way For A Herd Of Cattle In Snow watch viral video
TV9 Web
| Updated By: ಶ್ರೀದೇವಿ ಕಳಸದ|

Updated on:Nov 19, 2022 | 5:27 PM

Share

Viral Video : ಈಗಾದರೂ ಒಪ್ಪುತ್ತೀರಾ? ನಿಮಗಿಂತ ಪ್ರಾಣಿಗಳೇ ಹೆಚ್ಚು ಸಂವೇದನೆಯುಳ್ಳಂಥವು ಅಂತ. ನೋಡಿ ಹಿಮಪ್ರದೇಶದಲ್ಲಿ ನಾಯಿಯೊಂದು ಹಸುಗಳ ಹಿಂಡಿಗೆ ದಾರಿ ಮಾಡಿಕೊಡುತ್ತಿದೆ. ನಾಯಿಯನ್ನು ಈ ಹಿಂಡು ಎಂಥ ವಿಧೇಯತೆಯಿಂದ ಹಿಂಬಾಲಿಸುತ್ತಿದೆ ನೋಡಿ. ಈ ವಿಡಿಯೋ ಅನ್ನು ಜಾರ್ಖಂಡ್​ನ ಜಿಲ್ಲಾಧಿಕಾರಿ ಸಂಜಯ್​ ಕುಮಾರ್ ಟ್ವೀಟ್ ಮಾಡಿದ್ದಾರೆ. ನೆಟ್ಟಿಗರು ಈ ಮುದ್ದಾದ ವಿಡಿಯೋ ಅನ್ನು ಕೊಂಡಾಡುತ್ತಿದ್ದಾರೆ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ನಾಯಕ ಎನ್ನಿಸಿಕೊಂಡವನು ಇನ್ನೊಬ್ಬರಿಗಾಗಿ ದಾರಿಯನ್ನು ತೆರೆಯುತ್ತಾನೆ, ಅದು ಚಿಕ್ಕದೇ ಆಗಿರಲಿ ದೊಡ್ಡದೇ ಆಗಿರಲಿ ಎಂಬ ಶೀರ್ಷಿಕೆಯೊಂದಿಗೆ ಈ ವಿಡಿಯೋ ಪೋಸ್ಟ್​ ಮಾಡಲಾಗಿದೆ. ಎಂಥ ಅರ್ಥಪೂರ್ಣವಾಗಿದೆಯಲ್ಲವೆ? ಈತನಕ ಸುಮಾರು 60,000 ಜನರು ಈ ವಿಡಿಯೋ ನೋಡಿದ್ದಾರೆ. ನಿಜಕ್ಕೂ ಇದು ನಾಯಕತ್ವಕ್ಕೆ ಒಳ್ಳೆಯ ಉದಾಹರಣೆ ಎಂದಿದ್ದಾರೆ ನೆಟ್ಟಿಗರು. ನಾನು ಇಂದು ನೋಡಿದ ವಿಡಿಯೋಗಳಲ್ಲಿ ಇದು ಅತ್ಯಂತ ನೈಜ ಮತ್ತು ಅದ್ಭುತವಾದದ್ದು ಎಂದಿದ್ದಾರೆ ಕೆಲವರು. ನಾಯಿಯ ಸಹಾಯಗುಣ, ನಿಷ್ಠೆ ವಿವರಿಸಲಸಾಧ್ಯ ಎಂದಿದ್ದಾರೆ ಒಬ್ಬರು.

ನಮ್ಮ ದೇಶಕ್ಕೆ ಹೀಗೆ ಸ್ವತಃ ತೊಡಗಿಕೊಳ್ಳುವ, ಜನರೊಂದಿಗೆ ಒಳಗೊಳ್ಳುವ ನಾಯಕರು ಬೇಕಿದ್ದಾರೆ ಎನ್ನುತ್ತಿದ್ಧಾರೆ ನೆಟ್ಟಿಗರು. ನಿಜವಾದ ನಾಯಕರಿಗೆ ಆಪತ್ತು, ಅಪಾಯ, ಸವಾಲನ್ನು ಎದುರಿಸುವ ಚಾಣಾಕ್ಷತೆ ಇರುತ್ತದೆ ಜೊತೆಗೆ ತನ್ನೊಂದಿಗಿರುವವರಿಗೆ ಸಹಾಯ ಮಾಡುವ ಗುಣವೂ ಇರುತ್ತದೆ ಎನ್ನುವುದನ್ನು ನೀವು ನಂಬುತ್ತೀರಲ್ಲವೆ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:22 pm, Sat, 19 November 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ