AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸ್ವಾಮಿ ನಿಷ್ಠೆ ಶ್ವಾನ: ಮಾಲೀಕನಿಗಾಗಿ ಪ್ರಾಣ ನೀಡಲು ಸಿದ್ಧ  

ಶ್ವಾನಗಳು ಅತ್ಯಂತ ನಂಬಿಕೆಯ ಪ್ರಾಣಿಗಳಾಗಿವೆ. ಇದೀಗ ಅದು ಮತ್ತೊಮ್ಮೆ ಸಾಬೀದಾಗಿದೆ. ಹೌದು ಮಾಲೀಕನು ನೀರಿನಲ್ಲಿ ಮುಳುಗುತ್ತಿದ್ದಂತ ದೃಶ್ಯವನ್ನು ಕಂಡು ಶ್ವಾನವೊಂದು ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಮಾಲೀಕನ ಜೀವವನ್ನು ರಕ್ಷಣೆ ಮಾಡಿದೆ.  ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು,  ನಿಜವಾಗಿಯೂ ಗುಣದಲಿ ಪ್ರಾಣಿಗಳೇ ಮೇಲು ಅನ್ನುತ್ತಿದ್ದಾರೆ ನೆಟ್ಟಿಗರು. 

Viral Video: ಸ್ವಾಮಿ ನಿಷ್ಠೆ ಶ್ವಾನ: ಮಾಲೀಕನಿಗಾಗಿ ಪ್ರಾಣ ನೀಡಲು ಸಿದ್ಧ  
ಮಾಲಾಶ್ರೀ ಅಂಚನ್​
| Edited By: |

Updated on: Jan 22, 2024 | 5:20 PM

Share

ನಿಷ್ಠೆ, ನಿಯತ್ತು, ನಿಷ್ಕಲ್ಮಶ ಪ್ರೀತಿ  ಎಂದಾಕ್ಷಣ ಮೊದಲು ನೆನಪಿಗೆ ಬರುವುದೇ ಶ್ವಾನಗಳು. ಹೌದು ಶ್ವಾನಗಳು ಸ್ವಾಮಿ ನಿಷ್ಠೆಗೆ ಹರುವಾಸಿಯಾದ ಪ್ರಾಣಿ. ಮನುಷ್ಯನ ಉತ್ತಮ ಸ್ನೇಹಿತನಾಗಿರುವ ನಾಯಿಗಳು ಎಷ್ಟೋ ಬಾರಿ ತನ್ನ ಪ್ರಾಣವನ್ನೇ ಒತ್ತೆಯಿಟ್ಟು ತನ್ನ ಮಾಲೀಕನ, ಮಕ್ಕಳ ಪ್ರಾಣವನ್ನು ರಕ್ಷಿಸಿದ ಉದಾಹರಣೆಗಳಿವೆ. ಇನ್ನೂ ಕೆಲವರು ನಿಜವಾಗಿಯೂ ಶ್ವಾನಗಳು ನಮ್ಮನ್ನು  ರಕ್ಷಿಸುತ್ತವೆಯೇ ಎಂದು ತಿಳಿಯಲು ಶ್ವಾನಗಳ ಮುಂದೆ  ಅಪಾಯದಲ್ಲಿ ಸಿಳುಕಿರುವಂತೆ  ನಾಟಕವಾಡುತ್ತಾರೆ. ಅದೇ ರೀತಿ ಇಲ್ಲೊಬ್ಬ ವ್ಯಕ್ತಿ ಸಾಕು ಶ್ವಾನದ ಎದುರು ನೀರಿನಲ್ಲಿ ಮುಳುಗುತ್ತಿರುವಂತೆ ನಾಟಕವಾಡಿದ್ದಾನೆ. ಈ ದೃಶ್ಯವನ್ನು ಕಂಡ ಶ್ವಾನ  ತನ್ನ ಮಾಲೀಕ  ನಿಜವಾಗಿಯು ಅಪಾಯದಲ್ಲಿ ಸಿಳುಕಿದ್ದಾನೆ ಎಂದು ತಿಳಿದು, ತನ್ನ ಪ್ರಾಣವನ್ನೇ ಒತ್ತೆಯಿಟ್ಟು, ಮಾಲೀಕನ್ನು ನೀರಿನಿಂದ ಎಳೆದುಕೊಂಡು ಬಂದು, ರಕ್ಷಿಸಿದೆ.  ಈ ವಿಡಿಯೋ ಇದೀಗ ಸಖತ್ ವೈರಲ್ ಆಗಿದ್ದು, ನಿಜವಾಗಿಯೂ ಗುಣದಲಿ ಪ್ರಾಣಿಗಳೆ ಮೇಲು ಎನ್ನುತ್ತಿದ್ದಾರೆ ನೆಟ್ಟಿಗರು.

ಮಾನ್ ದಾಮೋರ್ (@maamdamor) ಎಂಬವರು ಈ ವಿಡಿಯೋವನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ಇದುವೇ ನಿಷ್ಕಲ್ಮಶ ಪ್ರೀತಿ ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವಿಡಿಯೋದಲ್ಲಿ ಶ್ವಾನವೊಂದು ನೀರಿನಲ್ಲಿ ಮುಳುಗುತ್ತಿದ್ದಂತಹ ತನ್ನ ಮಾಲೀಕನ ಪ್ರಾಣ ರಕ್ಷಣೆಯನ್ನು ಮಾಡುತ್ತಿರುವುದನ್ನು ಕಾಣಬಹುದು.

View this post on Instagram

A post shared by Maan Damor (@maandamor)

ವೈರಲ್ ವಿಡಿಯೋದಲ್ಲಿ ವ್ಯಕ್ತಿಗಳಿಬ್ಬರು ನದಿ ನೀರಿನಲ್ಲಿ ಆಟವಾಡುತ್ತಿರುತ್ತಾರೆ, ಮತ್ತು ಅಲ್ಲೇ ದಡದ ಬದಿಯಲ್ಲಿ ನಿಂತಿದ್ದ ಸಾಕು ನಾಯಿಯ ಜೊತೆ ಸ್ವಲ್ಪ ತಮಾಷೆ ಮಾಡೋಣ, ಆ ಶ್ವಾನ ಹೇಗೆ ಪ್ರತಿಕ್ರಿಯಿಸುತ್ತೆ ನೋಡೋಣ ಅಂತ ಹೇಳಿ, ಆ ವ್ಯಕ್ತಿ ನೀರಿನಲ್ಲಿ ಮುಳುಗಿ ಹೋದಂತೆ ನಾಟಕವಾಡುತ್ತಾನೆ. ಇದರಿಂದ ಗಾಬರಿಗೊಂಡ ಶ್ವಾನ, ನನ್ನ ಮಾಲೀಕನನ್ನು ಹೇಗಾದರೂ ಮಾಡಿ ರಕ್ಷಿಸಲೇಬೇಕು ಅಂತ ಬೌ ಬೌ ಎಂದು ಬೊಗಳುತ್ತಾ, ತನ್ನ ಪ್ರಾಣವನ್ನು ಲೆಕ್ಕಿಸದೆ ನೀರಿಗೆ ಹಾರಿ, ಮಾಲೀಕನ್ನು ಎಳೆದುಕೊಂಡು ಬರುವ ಭಾವನಾತ್ಮಕ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಅಕ್ಕಿಯಲ್ಲಿ ಅರಳಿದ ಸೀತಾ ರಾಮ

ಡಿಸೆಂಬರ್ 21 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1.1 ಮಿಲಿಯನ್ ವೀಕ್ಷಣೆಗಳನ್ನು ಹಾಗೂ ಒಂದು ಲಕ್ಷಕ್ಕೂ ಅಧಿಕ ಲೈಕ್ಸ್ಗಳನ್ನು ಪಡೆದುಕೊಂಡಿದೆ. ಹಾಗೂ ಹಲವಾರು ಕಮೆಂಟ್ಸ್ಗಳೂ ಹರಿದುಬಂದಿವೆ.  ಒಬ್ಬ ಬಳಕೆದಾರರು ʼನಿಜವಾಗಿಯೂ ಮಾನವನಿಗಿಂತ ಶ್ವಾನಗಳೇ ಮೇಲುʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼಪ್ರಾಣಿಗಳಲ್ಲಿರುವ ಮಾನವೀಯ ಗುಣ ಮನುಷ್ಯರಲ್ಲಿ ಯಾಕಿಲ್ಲʼ ಅಂತ ಕೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ಪ್ರಾಣಿಗಳೇ ಗುಣದಲಿ ಮೇಲು ಅಂತ ಕಮೆಂಟ್ ಮಾಡಿದ್ದಾರೆ. ಇನ್ನೂ ಅನೇಕರು ಈ ಭಾವನಾತ್ಮಕ ವಿಡಿಯೋಗೆ ಮೆಚ್ಚುಗೆಯನ್ನು ಸೂಚಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಾಲಾಶ್ರೀ ಅಂಚನ್​
ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!