Viral Video: ಪ್ರತಿನಿತ್ಯ ಆತನ ಬರುವಿಕೆಗಾಗಿ ಕಾಯುವ ಶ್ವಾನ: ಇದು ಲೋಕೋ ಪೈಲಟ್ ಮತ್ತು ಬೀದಿನಾಯಿಯ ಸುಂದರ ಸ್ನೇಹ

ನಿಯತ್ತಿಗೆ ಇನ್ನೊಂದು ಹೆಸರೇ ನಾಯಿ ಎಂಬ ಮಾತಿದೆ.  ಮನುಷ್ಯರಿಗೆ ನಾಯಿಗಿಂತ ಹೆಚ್ಚು ಆಪ್ತರು ಬೇರಾರೂ ಇಲ್ಲ.  ಇದಕ್ಕೆ ಸೂಕ್ತ ನಿದರ್ಶನದಂತಿರುವ ವಿಡಿಯೋವೊಂದು ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಲೋಕೋ ಪೈಲಟ್ ಮತ್ತು ಬೀದಿ ನಾಯಿಯ ಸುಂದರ ಸ್ನೇಹವನ್ನು ಕಂಡು ನೋಡುಗರು ಭಾವುಕರಾಗಿದ್ದಾರೆ. 

Viral Video: ಪ್ರತಿನಿತ್ಯ ಆತನ ಬರುವಿಕೆಗಾಗಿ ಕಾಯುವ ಶ್ವಾನ: ಇದು ಲೋಕೋ ಪೈಲಟ್ ಮತ್ತು ಬೀದಿನಾಯಿಯ ಸುಂದರ ಸ್ನೇಹ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: May 09, 2024 | 12:28 PM

ಈ ಆಧುನಿಕ ಯುಗದಲ್ಲಿ ಮನುಷ್ಯತ್ವಕ್ಕೆ, ಸಂಬಂಧಗಳಿಗೆ ಬೆಲೆಯೇ ಇಲ್ಲದಂತಾಗಿದೆ. ಆದರೆ ಮನುಷ್ಯನಿಗೆ ಇಲ್ಲದ ಮಾನವೀಯತೆ, ಸ್ನೇಹ ಮನೋಭಾವವನ್ನು ಪ್ರಾಣಿಗಳಲ್ಲಿ ಕಾಣಬಹುದು. ಅದರಲ್ಲೂ ಶ್ವಾನಗಳಿಗೆ ತುಸು ಹೆಚ್ಚೇ ನಿಯತ್ತು ಇದೆ. ಹೌದು ಅವುಗಳಿಗೆ ಒಂದು ತುತ್ತು ಅನ್ನ ನೀಡಿದರೆ ಸಾಕು ಅದರ ಕೊನೆಯುಸಿರು ಇರುವವವರೆಗೂ ಅನ್ನ ಹಾಕಿದವರಿಗೆ ನಿಯತ್ತಿನಿಂದ ಇರುತ್ತದೆ. ಜೊತೆಗೆ ಅನ್ನ ಹಾಕಿದವರೊಂದಿಗೆ ಸ್ನೇಹಪೂರ್ವಕವಾಗಿಗೂ ಇರುತ್ತವೆ. ಅಂತಹದ್ದೇ ಸುಂದರ ಸ್ನೇಹ ಬಾಂಧವ್ಯದ ಹೃದಯಸ್ಪರ್ಶಿ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ಲೋಕೋ ಪೈಲಟ್ ಮತ್ತು ಬೀದಿ ನಾಯಿಯ ಸುಂದರ ಸ್ನೇಹವನ್ನು ಕಂಡು ನೋಡುಗರು ಭಾವುಕರಾಗಿದ್ದಾರೆ.

ಈ ಹೃದಯಸ್ಪರ್ಶಿ ವಿಡಿಯೋವನ್ನು @1hakankapucu ಎಂಬ ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ರೈಲು ಚಾಲಕ ನೀಡುವ ಆಹಾರಕ್ಕಾಗಿ ಪ್ರತಿನಿತ್ಯ ರೈಲ್ವೆ ನಿಲ್ದಾಣದಲ್ಲಿ ಕಾದು ಕುಳಿತಿರುವ ಶ್ವಾನ. ಸ್ನೇಹಿತನ ರೈಲು ಬರುವಾಗ ಶ್ವಾನದ ಸಂತೋಷವನ್ನು ನೋಡುವುದೇ ನಮಗೊಂದು ಭಾಗ್ಯ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ:

ವೈರಲ್ ವಿಡಿಯೋದಲ್ಲಿ ಯಾವುದೋ ಒಂದು ರೈಲ್ವೆ ನಿಲ್ದಾಣದಲ್ಲಿ ಬೀದಿ ನಾಯಿಯೊಂದು ತನಗೆ ಪ್ರತಿನಿತ್ಯ ಊಟ ಹಾಕುವಂತಹ  ಲೋಕೋ ಪೈಲಟ್ ಗಾಗಿ  ಕಾದು ಕುಳಿತಿರುವ ದೃಶ್ಯವನ್ನು ಕಾಣಬಹುದು.  ರೈಲು ಬರುತ್ತಿದ್ದಂತೆಯೇ ಅರೇ ನನ್ನ ಸ್ನೇಹಿತ ನನಗಾಗಿ ಊಟವನ್ನು ತಂದ ಎಂದು ಶ್ವಾನವು ಖುಷಿಯಿಂದ ರೈಲಿನ ಜೊತೆ ಜೊತೆಗೆ ಓಡಿಕೊಂಡು ಹೋಗುತ್ತದೆ. ನಂತರ ರೈಲು ನಿಲ್ಲಿಸಿ ಆ ಲೋಕೋ ಪೈಲಟ್  ಶ್ವಾನಕ್ಕೆ ತಾನು ತಂದಿರುವ  ಊಟವನ್ನು ಹಾಕ್ತಾನೆ. ಆ ಸಂದರ್ಭದಲ್ಲಿ ಶ್ವಾನ ತನ್ನ ಮನುಷ್ಯ ಸ್ನೇಹಿತನನ್ನು ಕಂಡು ಖುಷಿಯಿಂದ ಕುಣಿದಾಡಿದೆ.

ಇದನ್ನೂ ಓದಿ: ಆಸ್ಪತ್ರೆಯಲ್ಲಿ ಗುಡಿಸುವ ಶೈಲಿ ನೋಡಿ ಹೌಸ್​​​​ ಕೀಪರ್ ಪ್ರೀತಿಗೆ ಬಿದ್ದು ಮದುವೆಯಾದ ಲೇಡಿ ಡಾಕ್ಟರ್ 

ಮೇ 01 ರಂದು ಹಂಚಿಕೊಳ್ಳಲಾದ ಈ ವಿಡಿಯೋ 2.7 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಲೋಕೋ ಪೈಲಟ್ ಮತ್ತು  ಬೀದಿ ನಾಯಿಯ ನಿಸ್ವಾರ್ಥ ಸ್ನೇಹವನ್ನು ಕಂಡು ಭಾವುಕರಾಗಿದ್ದಾರೆ.

ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ