AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪ್ರತಿನಿತ್ಯ ಆತನ ಬರುವಿಕೆಗಾಗಿ ಕಾಯುವ ಶ್ವಾನ: ಇದು ಲೋಕೋ ಪೈಲಟ್ ಮತ್ತು ಬೀದಿನಾಯಿಯ ಸುಂದರ ಸ್ನೇಹ

ನಿಯತ್ತಿಗೆ ಇನ್ನೊಂದು ಹೆಸರೇ ನಾಯಿ ಎಂಬ ಮಾತಿದೆ.  ಮನುಷ್ಯರಿಗೆ ನಾಯಿಗಿಂತ ಹೆಚ್ಚು ಆಪ್ತರು ಬೇರಾರೂ ಇಲ್ಲ.  ಇದಕ್ಕೆ ಸೂಕ್ತ ನಿದರ್ಶನದಂತಿರುವ ವಿಡಿಯೋವೊಂದು ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಲೋಕೋ ಪೈಲಟ್ ಮತ್ತು ಬೀದಿ ನಾಯಿಯ ಸುಂದರ ಸ್ನೇಹವನ್ನು ಕಂಡು ನೋಡುಗರು ಭಾವುಕರಾಗಿದ್ದಾರೆ. 

Viral Video: ಪ್ರತಿನಿತ್ಯ ಆತನ ಬರುವಿಕೆಗಾಗಿ ಕಾಯುವ ಶ್ವಾನ: ಇದು ಲೋಕೋ ಪೈಲಟ್ ಮತ್ತು ಬೀದಿನಾಯಿಯ ಸುಂದರ ಸ್ನೇಹ
ಮಾಲಾಶ್ರೀ ಅಂಚನ್​
| Edited By: |

Updated on: May 09, 2024 | 12:28 PM

Share

ಈ ಆಧುನಿಕ ಯುಗದಲ್ಲಿ ಮನುಷ್ಯತ್ವಕ್ಕೆ, ಸಂಬಂಧಗಳಿಗೆ ಬೆಲೆಯೇ ಇಲ್ಲದಂತಾಗಿದೆ. ಆದರೆ ಮನುಷ್ಯನಿಗೆ ಇಲ್ಲದ ಮಾನವೀಯತೆ, ಸ್ನೇಹ ಮನೋಭಾವವನ್ನು ಪ್ರಾಣಿಗಳಲ್ಲಿ ಕಾಣಬಹುದು. ಅದರಲ್ಲೂ ಶ್ವಾನಗಳಿಗೆ ತುಸು ಹೆಚ್ಚೇ ನಿಯತ್ತು ಇದೆ. ಹೌದು ಅವುಗಳಿಗೆ ಒಂದು ತುತ್ತು ಅನ್ನ ನೀಡಿದರೆ ಸಾಕು ಅದರ ಕೊನೆಯುಸಿರು ಇರುವವವರೆಗೂ ಅನ್ನ ಹಾಕಿದವರಿಗೆ ನಿಯತ್ತಿನಿಂದ ಇರುತ್ತದೆ. ಜೊತೆಗೆ ಅನ್ನ ಹಾಕಿದವರೊಂದಿಗೆ ಸ್ನೇಹಪೂರ್ವಕವಾಗಿಗೂ ಇರುತ್ತವೆ. ಅಂತಹದ್ದೇ ಸುಂದರ ಸ್ನೇಹ ಬಾಂಧವ್ಯದ ಹೃದಯಸ್ಪರ್ಶಿ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ಲೋಕೋ ಪೈಲಟ್ ಮತ್ತು ಬೀದಿ ನಾಯಿಯ ಸುಂದರ ಸ್ನೇಹವನ್ನು ಕಂಡು ನೋಡುಗರು ಭಾವುಕರಾಗಿದ್ದಾರೆ.

ಈ ಹೃದಯಸ್ಪರ್ಶಿ ವಿಡಿಯೋವನ್ನು @1hakankapucu ಎಂಬ ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ರೈಲು ಚಾಲಕ ನೀಡುವ ಆಹಾರಕ್ಕಾಗಿ ಪ್ರತಿನಿತ್ಯ ರೈಲ್ವೆ ನಿಲ್ದಾಣದಲ್ಲಿ ಕಾದು ಕುಳಿತಿರುವ ಶ್ವಾನ. ಸ್ನೇಹಿತನ ರೈಲು ಬರುವಾಗ ಶ್ವಾನದ ಸಂತೋಷವನ್ನು ನೋಡುವುದೇ ನಮಗೊಂದು ಭಾಗ್ಯ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ:

ವೈರಲ್ ವಿಡಿಯೋದಲ್ಲಿ ಯಾವುದೋ ಒಂದು ರೈಲ್ವೆ ನಿಲ್ದಾಣದಲ್ಲಿ ಬೀದಿ ನಾಯಿಯೊಂದು ತನಗೆ ಪ್ರತಿನಿತ್ಯ ಊಟ ಹಾಕುವಂತಹ  ಲೋಕೋ ಪೈಲಟ್ ಗಾಗಿ  ಕಾದು ಕುಳಿತಿರುವ ದೃಶ್ಯವನ್ನು ಕಾಣಬಹುದು.  ರೈಲು ಬರುತ್ತಿದ್ದಂತೆಯೇ ಅರೇ ನನ್ನ ಸ್ನೇಹಿತ ನನಗಾಗಿ ಊಟವನ್ನು ತಂದ ಎಂದು ಶ್ವಾನವು ಖುಷಿಯಿಂದ ರೈಲಿನ ಜೊತೆ ಜೊತೆಗೆ ಓಡಿಕೊಂಡು ಹೋಗುತ್ತದೆ. ನಂತರ ರೈಲು ನಿಲ್ಲಿಸಿ ಆ ಲೋಕೋ ಪೈಲಟ್  ಶ್ವಾನಕ್ಕೆ ತಾನು ತಂದಿರುವ  ಊಟವನ್ನು ಹಾಕ್ತಾನೆ. ಆ ಸಂದರ್ಭದಲ್ಲಿ ಶ್ವಾನ ತನ್ನ ಮನುಷ್ಯ ಸ್ನೇಹಿತನನ್ನು ಕಂಡು ಖುಷಿಯಿಂದ ಕುಣಿದಾಡಿದೆ.

ಇದನ್ನೂ ಓದಿ: ಆಸ್ಪತ್ರೆಯಲ್ಲಿ ಗುಡಿಸುವ ಶೈಲಿ ನೋಡಿ ಹೌಸ್​​​​ ಕೀಪರ್ ಪ್ರೀತಿಗೆ ಬಿದ್ದು ಮದುವೆಯಾದ ಲೇಡಿ ಡಾಕ್ಟರ್ 

ಮೇ 01 ರಂದು ಹಂಚಿಕೊಳ್ಳಲಾದ ಈ ವಿಡಿಯೋ 2.7 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಲೋಕೋ ಪೈಲಟ್ ಮತ್ತು  ಬೀದಿ ನಾಯಿಯ ನಿಸ್ವಾರ್ಥ ಸ್ನೇಹವನ್ನು ಕಂಡು ಭಾವುಕರಾಗಿದ್ದಾರೆ.

ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!