AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಒಂದು ಕೈಯಲ್ಲಿ ಸ್ಟೇರಿಂಗ್, ಇನ್ನೊಂದು ಕೈಯಲ್ಲಿ ನೀರಿನ ಚೊಂಬು; ಮೈ ಮೇಲೆ ತಣ್ಣೀರು ಸುರಿದ ಟ್ರಕ್ ಚಾಲಕ

ಅಬ್ಬಬ್ಬಾ ಈ ಸುಡು ಬೇಸಿಗೆಯ ಕಾಲದಲ್ಲಿ ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಜನರು ಏನಾದರೊಂದು ಸರ್ಕಸ್ ಮಾಡುತ್ತಲೇ ಇರುತ್ತಾರೆ. ಕೆಲವರಂತೂ ಸೆಕೆ ತಡೆಯಲಾರದೆ ನೀರಿನ ಬಕೆಟ್ ಅಲ್ಲೇ ಕುಳಿತು ಬಿಡುತ್ತಾರೆ. ಅದೇ ರೀತಿ ಸೆಕೆಯನ್ನು ತಡೆಯಲಾರದೆ ಇಲ್ಲೊಬ್ಬ ಟ್ರಕ್ ಚಾಲಕ ಮೈಗೆ ತಣ್ಣೀರು ಸುರಿಯುತ್ತಲೇ ಟ್ರಕ್ ಚಲಾಯಿಸುತ್ತಾ ಹೋಗಿದ್ದಾನೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಸೆಕೆಯಿಂದ ಮುಕ್ತಿ ಪಡೆಯಲು ಇದಂತೂ ಒಳ್ಳೆಯ ಉಪಾಯ ಎಂದು ನೆಟ್ಟಿಗರು ತಮಾಷೆ ಮಾಡಿದ್ದಾರೆ. 

Viral Video: ಒಂದು ಕೈಯಲ್ಲಿ ಸ್ಟೇರಿಂಗ್, ಇನ್ನೊಂದು ಕೈಯಲ್ಲಿ ನೀರಿನ ಚೊಂಬು; ಮೈ ಮೇಲೆ ತಣ್ಣೀರು ಸುರಿದ ಟ್ರಕ್ ಚಾಲಕ
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Apr 26, 2024 | 4:32 PM

Share

ಬೇಸಿಗೆಯ ಬಿಸಿ ಏರುತ್ತಿದೆ. ಸೆಕೆ ತಡೆಯಲಾರದೆ ಜನರು ಎಸಿ, ಫ್ಯಾನ್ ಮೊರೆ ಹೋಗುತ್ತಿದ್ದಾರೆ. ಇನ್ನೂ ಹೊರಗಡೆ  ಕೆಲಸಕ್ಕೆ ಹೋಗುವವರ ಪಾಡಂತೂ ಕೇಳುವುದೇ ಬೇಡ. ಅವರುಗಳು ಎಷ್ಟೇ ಉರಿ ಬಿಸಿಲು ಇದ್ದರೂ ಬಿಸಿಲಲ್ಲಿ ಬೇಯುತ್ತಾ ಕಷ್ಟಪಟ್ಟು ಕೆಲಸ ಮಾಡಲೇಬೇಕಾಗುತ್ತದೆ. ಆದ್ರೆ ಇಲ್ಲೊಬ್ಬ ಟ್ರಕ್ ಡ್ರೈವರ್ ಇನ್ನಂತೂ ಈ ಬಿಸಿಲ ಬೇಗೆಯಲ್ಲಿ ಗಾಡಿ ಓಡಿಸಿದ್ರೆ ನಾನು ಸತ್ತೇ ಹೋಗ್ತಿನಪ್ಪಾ ಎಂದು ಒಂದೊಳ್ಳೆ ಉಪಾಯ ಮಾಡಿ ಒಂದು ಕೈಯಲ್ಲಿ ಸ್ಟೇರಿಂಗ್ ಹಿಡಿದು, ಇನ್ನೊಂದು ಕೈಯಲ್ಲಿ ನೀರಿನ ಚೆಂಬು ಹಿಡಿದು ಮೈಗೆ ತಣ್ಣೀರು ಸುರಿಯುತ್ತಾ ಟ್ರಕ್ ಚಲಾಯಿಸಿದ್ದಾನೆ. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಈ ವಿಡಿಯೋವನ್ನು @fewsecl8r ಎಂಬ ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವಿಡಿಯೋದಲ್ಲಿ ಟ್ರಕ್ ಡ್ರೈವರ್ ಸೆಕೆಯನ್ನು ತಡೆಯಲಾರದೆ, ಹೇಗಪ್ಪಾ ಮೈಯನ್ನು ತಣ್ಣಗಿರಿಸುವುದು ಎಂದು ಒಂದೊಳ್ಳೆ ಉಪಾಯ ಮಾಡಿ, ಟ್ರಕ್ ಒಳಗಡೆ ಒಂದು ಬಕೆಟ್ ನೀರನ್ನು ಇಟ್ಟು, ಮೈಗೆ ಈ ತಣ್ಣೀರನ್ನು ಸುರಿಯುತ್ತಲೇ ಟ್ರಕ್ ಚಲಾಯಿಸುತ್ತಾ ಹೋಗುತ್ತಿರುವಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಈ ಮಕ್ಕಳ ರೀಲ್ಸ್ ಮಾಡೋದು ಎಷ್ಟು ಕಷ್ಟ, ಈ ಟೀಚರಮ್ಮನ ಸಾಹಸಕ್ಕೆ ಒಂದು ಸಲಾಂ 

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಎರಡು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 9 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ ಗಳನ್ನು ಪಡೆದುಕೊಂಡಿದೆ.  ಒಬ್ಬ ಬಳಕೆದಾರರು ʼಸೆಕೆಯಿಂದ ತಪ್ಪಿಸಿಕೊಳ್ಳಲು ಇದಂತೂ ಒಳ್ಳೆಯ ಉಪಾಯʼ ಎಂದು ಕಾಮೆಂಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ