AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಒಂದು ಕೈಯಲ್ಲಿ ಸ್ಟೇರಿಂಗ್, ಇನ್ನೊಂದು ಕೈಯಲ್ಲಿ ನೀರಿನ ಚೊಂಬು; ಮೈ ಮೇಲೆ ತಣ್ಣೀರು ಸುರಿದ ಟ್ರಕ್ ಚಾಲಕ

ಅಬ್ಬಬ್ಬಾ ಈ ಸುಡು ಬೇಸಿಗೆಯ ಕಾಲದಲ್ಲಿ ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಜನರು ಏನಾದರೊಂದು ಸರ್ಕಸ್ ಮಾಡುತ್ತಲೇ ಇರುತ್ತಾರೆ. ಕೆಲವರಂತೂ ಸೆಕೆ ತಡೆಯಲಾರದೆ ನೀರಿನ ಬಕೆಟ್ ಅಲ್ಲೇ ಕುಳಿತು ಬಿಡುತ್ತಾರೆ. ಅದೇ ರೀತಿ ಸೆಕೆಯನ್ನು ತಡೆಯಲಾರದೆ ಇಲ್ಲೊಬ್ಬ ಟ್ರಕ್ ಚಾಲಕ ಮೈಗೆ ತಣ್ಣೀರು ಸುರಿಯುತ್ತಲೇ ಟ್ರಕ್ ಚಲಾಯಿಸುತ್ತಾ ಹೋಗಿದ್ದಾನೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಸೆಕೆಯಿಂದ ಮುಕ್ತಿ ಪಡೆಯಲು ಇದಂತೂ ಒಳ್ಳೆಯ ಉಪಾಯ ಎಂದು ನೆಟ್ಟಿಗರು ತಮಾಷೆ ಮಾಡಿದ್ದಾರೆ. 

Viral Video: ಒಂದು ಕೈಯಲ್ಲಿ ಸ್ಟೇರಿಂಗ್, ಇನ್ನೊಂದು ಕೈಯಲ್ಲಿ ನೀರಿನ ಚೊಂಬು; ಮೈ ಮೇಲೆ ತಣ್ಣೀರು ಸುರಿದ ಟ್ರಕ್ ಚಾಲಕ
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Apr 26, 2024 | 4:32 PM

Share

ಬೇಸಿಗೆಯ ಬಿಸಿ ಏರುತ್ತಿದೆ. ಸೆಕೆ ತಡೆಯಲಾರದೆ ಜನರು ಎಸಿ, ಫ್ಯಾನ್ ಮೊರೆ ಹೋಗುತ್ತಿದ್ದಾರೆ. ಇನ್ನೂ ಹೊರಗಡೆ  ಕೆಲಸಕ್ಕೆ ಹೋಗುವವರ ಪಾಡಂತೂ ಕೇಳುವುದೇ ಬೇಡ. ಅವರುಗಳು ಎಷ್ಟೇ ಉರಿ ಬಿಸಿಲು ಇದ್ದರೂ ಬಿಸಿಲಲ್ಲಿ ಬೇಯುತ್ತಾ ಕಷ್ಟಪಟ್ಟು ಕೆಲಸ ಮಾಡಲೇಬೇಕಾಗುತ್ತದೆ. ಆದ್ರೆ ಇಲ್ಲೊಬ್ಬ ಟ್ರಕ್ ಡ್ರೈವರ್ ಇನ್ನಂತೂ ಈ ಬಿಸಿಲ ಬೇಗೆಯಲ್ಲಿ ಗಾಡಿ ಓಡಿಸಿದ್ರೆ ನಾನು ಸತ್ತೇ ಹೋಗ್ತಿನಪ್ಪಾ ಎಂದು ಒಂದೊಳ್ಳೆ ಉಪಾಯ ಮಾಡಿ ಒಂದು ಕೈಯಲ್ಲಿ ಸ್ಟೇರಿಂಗ್ ಹಿಡಿದು, ಇನ್ನೊಂದು ಕೈಯಲ್ಲಿ ನೀರಿನ ಚೆಂಬು ಹಿಡಿದು ಮೈಗೆ ತಣ್ಣೀರು ಸುರಿಯುತ್ತಾ ಟ್ರಕ್ ಚಲಾಯಿಸಿದ್ದಾನೆ. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಈ ವಿಡಿಯೋವನ್ನು @fewsecl8r ಎಂಬ ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವಿಡಿಯೋದಲ್ಲಿ ಟ್ರಕ್ ಡ್ರೈವರ್ ಸೆಕೆಯನ್ನು ತಡೆಯಲಾರದೆ, ಹೇಗಪ್ಪಾ ಮೈಯನ್ನು ತಣ್ಣಗಿರಿಸುವುದು ಎಂದು ಒಂದೊಳ್ಳೆ ಉಪಾಯ ಮಾಡಿ, ಟ್ರಕ್ ಒಳಗಡೆ ಒಂದು ಬಕೆಟ್ ನೀರನ್ನು ಇಟ್ಟು, ಮೈಗೆ ಈ ತಣ್ಣೀರನ್ನು ಸುರಿಯುತ್ತಲೇ ಟ್ರಕ್ ಚಲಾಯಿಸುತ್ತಾ ಹೋಗುತ್ತಿರುವಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಈ ಮಕ್ಕಳ ರೀಲ್ಸ್ ಮಾಡೋದು ಎಷ್ಟು ಕಷ್ಟ, ಈ ಟೀಚರಮ್ಮನ ಸಾಹಸಕ್ಕೆ ಒಂದು ಸಲಾಂ 

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಎರಡು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 9 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ ಗಳನ್ನು ಪಡೆದುಕೊಂಡಿದೆ.  ಒಬ್ಬ ಬಳಕೆದಾರರು ʼಸೆಕೆಯಿಂದ ತಪ್ಪಿಸಿಕೊಳ್ಳಲು ಇದಂತೂ ಒಳ್ಳೆಯ ಉಪಾಯʼ ಎಂದು ಕಾಮೆಂಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ