AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕಂಠಪೂರ್ತಿ ಕುಡಿದು ರಸ್ತೆ ಮಧ್ಯೆ ಕಿರುಚಿ, ಕುಣಿದಾಡಿದ ಯುವತಿ; ಅಮಲಿನಲ್ಲಿ ಅವಾಂತರ

ಹುಡುಗಿಯ ಉಪಟಳ ಸಹಿಸಲಾಗದ ಜನ ನಂತರ ಪೊಲೀಸರಿಗೆ ಕರೆ ಮಾಡಿದ್ದರು. ಆದರೆ ಪೊಲೀಸರು ಬರುವುದಕ್ಕೂ ಮೊದಲೇ ಆಕೆಯ ಸ್ನೇಹಿತರ ಕಾರು ಬಂದ ಕಾರಣ ಅವಳು ಕಾರು ಹತ್ತಿ ಕಾಲ್ಕಿತ್ತಿದ್ದಾಳೆ.

Video: ಕಂಠಪೂರ್ತಿ ಕುಡಿದು ರಸ್ತೆ ಮಧ್ಯೆ ಕಿರುಚಿ, ಕುಣಿದಾಡಿದ ಯುವತಿ; ಅಮಲಿನಲ್ಲಿ ಅವಾಂತರ
ಕುಡಿದು ಕೂಗಾಡಿದ ಯುವತಿ
TV9 Web
| Edited By: |

Updated on:Sep 04, 2021 | 1:48 PM

Share

ಮಹಾರಾಷ್ಟ್ರ (Maharashtra)ದ ಅಂಬರ್​ನಾಥ್​ ಫೂರ್ವದಲ್ಲಿರುವ ಗೋವಿಂದ ಸೇತುವೆ ಬಳಿಯ ಡಿಪಿ ರಸ್ತೆ (DP Road)ಯಲ್ಲಿ ಹುಡುಗಿಯೊಬ್ಬಳು ನಿನ್ನೆ ರಾತ್ರಿ ಸಿಕ್ಕಾಪಟೆ ತೊಂದರೆ ನೀಡಿದ್ದಾಳೆ. ಕಂಠಪೂರ್ತಿ ಕುಡಿದು ಬೇಕಾಬಿಟ್ಟಿ ನಡೆದಾಡಿದ್ದಾಳೆ. ರಸ್ತೆ ಮಧ್ಯೆ ನಿಂತು ವಾಹನ ಸವಾರರಿಗೆ ತೊಂದರೆ ಕೊಟ್ಟಿದ್ದಾಳೆ. ಈ ವಿಡಿಯೋ ಇದೀಗ ಸೋಷಿಯಲ್​ ಮೀಡಿಯಾ (Social Media)ಗಳಲ್ಲಿ ಸಿಕ್ಕಾಪಟೆ ವೈರಲ್ ಆಗಿದೆ. ಅಮಲಿನಲ್ಲಿ ಅವಾಂತರ ಸೃಷ್ಟಿಸಿದ ಯುವತಿಯ ವಿಡಿಯೋ ಕಳೆದ ಒಂದು ತಾಸಿನಿಂದಲೂ ಹರಿದಾಡುತ್ತಿದೆ.

ಜೀನ್ಸ್​ಪ್ಯಾಂಟ್​, ಕೆಂಪು ಬಣ್ಣದ ಟಾಪ್​ ಧರಿಸಿರುವ ಯುವತಿ ರಸ್ತೆ ಮಧ್ಯೆ ನಿಂತು ಗಲಾಟೆ ಮಾಡಿದ್ದಾಳೆ. ವಾಹನ ಸವಾರರನ್ನು ತಡೆದು, ಸವಾರರಿಗೆ ಬಾಯಿಗೆ ಬಂದಂತೆ ಬೈದಿದ್ದಾಳೆ. ಆಕೆ ಆಟವನ್ನು ನೋಡಿ ಹಲವರು ತಮ್ಮ ಗಾಡಿ ನಿಲ್ಲಿಸಿದ್ದಾರೆ. ಆಕೆಯ ಬಳಿ ಮಾತನಾಡಲೂ ಕೆಲವರು ಪ್ರಯತ್ನಿಸಿದ್ದಾರೆ. ಆದರೆ ಹುಡುಗಿ ತನ್ನ ಮೇಲೆ ಸಂಪೂರ್ಣವಾಗಿ ನಿಯಂತ್ರಣ ಕಳೆದುಕೊಂಡಿದ್ದಳು. ಅಲ್ಲಿದ್ದವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದನ್ನು ವಿಡಿಯೋದಲ್ಲಿ ನೋಡಬಹುದು.

ಆಕೆಯ ಉಪಟಳ ಸಹಿಸಲಾಗದ ಜನ ನಂತರ ಪೊಲೀಸರಿಗೆ ಕರೆ ಮಾಡಿದ್ದರು. ಆದರೆ ಪೊಲೀಸರು ಬರುವುದಕ್ಕೂ ಮೊದಲೇ ಆಕೆಯ ಸ್ನೇಹಿತರ ಕಾರು ಬಂದ ಕಾರಣ ಅವಳು ಕಾರು ಹತ್ತಿ ಕಾಲ್ಕಿತ್ತಿದ್ದಾಳೆ. ಈ ರೋಡಿನಲ್ಲಿ ಪದೇಪದೆ ಇಂಥ ಘಟನೆ ನಡೆಯುತ್ತಿದೆ. ಪೊಲೀಸರು ಇಲ್ಲಿ ಗಸ್ತು ಹೆಚ್ಚಿಸಬೇಕು. ರಾತ್ರಿ ಕುಡಿದು ಓಡಾಡುವವರು, ಗಲಾಟೆ ಮಾಡುವವರನ್ನು ನಿಯಂತ್ರಿಸಬೇಕು ಎಂದು ಸ್ಥಳೀಯ ನಾಗರಿಕರು ಎಚ್ಚರಿಸಿದ್ದಾರೆ.

ಇಂಥದ್ದೇ ಘಟನೆ ನಡೆದಿತ್ತು ! ಕೆಲವು ದಿನಗಳ ಹಿಂದೆಯೂ ಇಂಥದ್ದೇ ಒಂದು ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿತ್ತು. ಯುವತಿಯೊಬ್ಬಳು ಭರ್ಜರಿ ಕುಡಿದು ಪುಣೆಯ ತಿಲಕ್ ರಸ್ತೆಯ ಹೀರಾಭಾಗ್ ಚೌಕ್​ನಲ್ಲಿ ನೆಲಕ್ಕೆ ಬಿದ್ದು ಹೊರಳಾಡಿದ್ದಳು. ಮಧ್ಯ ರಸ್ತೆಯಲ್ಲಿ ಯೋಗಾಸನ ಮಾಡಿದ ವಿಡಿಯೋ ವೈರಲ್ ಆಗಿತ್ತು. ಆ ಯುವತಿ ಕೂಡ ಜೀನ್ಸ್​ ಮತ್ತು ಕೆಂಪು ಬಣ್ಣದ ಟಾಪ್​ ಧರಿಸಿದ್ದಳು. ಅಂದು ಆ ಯುವತಿ ಉದ್ದಕ್ಕೆ ಮಲಗಿ ವಾಹನಗಳನ್ನು ನೋಡುತ್ತಿದ್ದಳು. ಸ್ಥಳೀಯರು ಏನೂ ಮಾಡಲು ತೋಚದೆ ಪೊಲೀಸರಿಗೆ ದೂರು ನೀಡಿದ್ದರು. ಅಲ್ಲಿಗೆ ಬಂದ ಪೊಲೀಸರು ಯುವತಿಯನ್ನು ಕರೆದುಕೊಂಡು ಹೋಗಿದ್ದರು.

ಇದನ್ನೂ ಓದಿ: ಕುಡಿದು ರೈಲಿನಲ್ಲಿ ಅರೆ ನಗ್ನವಾಗಿ ಓಡಾಡಿದ ಜೆಡಿಯು ಶಾಸಕ ನನ್ನ ಚಿನ್ನದ ಉಂಗುರ ಕಿತ್ತುಕೊಂಡರು; ಸಹ ಪ್ರಯಾಣಿಕ ದೂರು

ಕರ್ನಾಟಕ ಭೂ ಕಂದಾಯ ಕಾಯಿದೆಯಡಿ ಆದಾಯ ಮಿತಿಗೆ ತಿದ್ದುಪಡಿ ತರಲು ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ

Published On - 1:47 pm, Sat, 4 September 21

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್