ಅಮೇಜಾನ್‌ ಪಾರ್ಸೆಲ್​​ನಲ್ಲಿ ಬಂದ ನಾಗಪ್ಪ, ಬುಸುಗುಟ್ಟುತ್ತಿರುವ ಹಾವು ಕಂಡು ಬೆಚ್ಚಿಬಿದ್ದ ದಂಪತಿ

ಸಾಫ್ಟ್‌ವೇರ್ ಉದ್ಯೋಗದಲ್ಲಿರುವ ಬೆಂಗಳೂರಿನ ದಂಪತಿಗಳಿಬ್ಬರು ವಾರದ ಹಿಂದೆಯಷ್ಟೇ ಅಮೆಜಾನ್‌ನಲ್ಲಿ ಎಕ್ಸ್‌ಬಾಕ್ಸ್‌ ಕಂಟ್ರೋಲರ್ ಆರ್ಡರ್​ ಮಾಡಿದ್ದರು. ಅದರಂತೆ ಪಾರ್ಸೆಲ್​​ ಮನೆ ಬಾಗಿಲಿಗೆ ಬಂದು ತಲುಪಿದೆ. ಪಾರ್ಸೆಲ್​​ ಓಪನ್​​ ಮಾಡುತ್ತಿದ್ದಂತೆ ಅದರೊಳಗೆ ಎಕ್ಸ್‌ಬಾಕ್ಸ್‌ ಕಂಟ್ರೋಲರ್ ಬದಲಾಗಿ ನಾಗರಹಾವೊಂದು ಜಡೆ ಎತ್ತಿ ನಿಂತಿದೆ.

ಅಮೇಜಾನ್‌ ಪಾರ್ಸೆಲ್​​ನಲ್ಲಿ ಬಂದ ನಾಗಪ್ಪ, ಬುಸುಗುಟ್ಟುತ್ತಿರುವ ಹಾವು ಕಂಡು ಬೆಚ್ಚಿಬಿದ್ದ ದಂಪತಿ
Follow us
|

Updated on:Jun 19, 2024 | 12:02 PM

ಬೆಂಗಳೂರು: ಅಮೆಜಾನ್ ನಲ್ಲಿ ಎಕ್ಸ್‌ಬಾಕ್ಸ್‌ ಕಂಟ್ರೋಲರ್ ಬುಕ್ ಮಾಡಿದ್ದ ದಂಪತಿಗಳು ಪಾರ್ಸೆಲ್​​ ತೆರೆಯುತ್ತಿದ್ದಂತೆ ಬೆಚ್ಚಿ ಬಿದ್ದಿದ್ದಾರೆ. ಪಾರ್ಸೆಲ್​​​ ತೆರೆಯುತ್ತಿದ್ದಂತೆ ​ ಬುಸುಗುಟ್ಟುತ್ತಿರುವ ಹಾವು ದಂಗಾದ ದಂಪತಿಗಳು ತಮ್ಮ ಅನುಭವವನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ. ಈ ಘಟನೆ ಬೆಂಗಳೂರಿನ ಸರ್ಜಾಪುರದಲ್ಲಿ ನಡೆದಿದೆ.

ಸಾಫ್ಟ್‌ವೇರ್ ಉದ್ಯೋಗದಲ್ಲಿರುವ ಈ ದಂಪತಿ ವಾರದ ಹಿಂದೆಯಷ್ಟೇ ಅಮೆಜಾನ್‌ನಲ್ಲಿ ಎಕ್ಸ್‌ಬಾಕ್ಸ್‌ ಕಂಟ್ರೋಲರ್ ಆರ್ಡರ್​ ಮಾಡಿದ್ದರು. ಅದರಂತೆ ಪಾರ್ಸೆಲ್​​ ಮನೆ ಬಾಗಿಲಿಗೆ ಬಂದು ತಲುಪಿದೆ. ಪಾರ್ಸೆಲ್​​ ಓಪನ್​​ ಮಾಡುತ್ತಿದ್ದಂತೆ ಅದರೊಳಗೆ ಎಕ್ಸ್‌ಬಾಕ್ಸ್‌ ಕಂಟ್ರೋಲರ್ ಬದಲಾಗಿ ನಾಗರಹಾವೊಂದು ಜಡೆ ಎತ್ತಿ ನಿಂತಿದೆ. ತಕ್ಷಣ ಬಾಕ್ಸ್​ ಅನ್ನು ಮುಚ್ಚಿ ತಮಗಾದ ಕರಾಳ ಅನುಭವವನ್ನು ವಿಡಿಯೋ ಮಾಡಿ ಸೋಶಿಯಲ್​ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ಪ್ಯಾಕೇಜಿಂಗ್ ಟೇಪ್‌ನಲ್ಲಿ ಸಿಲುಕಿಕೊಂಡಿದ್ದ ನಾಗರಹಾವು ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ತನ್ನ ಮದುವೆಯಲ್ಲಿ ಡಾನ್ಸ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಯುವತಿ ಸಾವು

ಈ ಘಟನೆಯ ಬಳಿಕ ಅಮೇಜಾನ್ ಕಂಪೆನಿ ದಂಪತಿಗೆ ಎಕ್ಸ್‌ಬಾಕ್ಸ್‌ ಕಂಟ್ರೋಲರ್‌ಗೆ ನೀಡಿದ್ದ ಹಣವನ್ನು ಸಂಪೂರ್ಣವಾಗಿ ಮರುಪಾವತಿ ಮಾಡಿದೆ. ಆದರೆ, ವಿಷಪೂರಿತ ಹಾವಿನ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಬದಲಾಗಿ ತಪ್ಪಾಗಿ ಪಾರ್ಸೆಲ್​​​ ಬಂದಿರುವುದಕ್ಕೆ ವಿಷಾದ ವ್ಯಕ್ತಪಡಿಸುವುದಾಗಿ ಹೇಳಿಕೊಂಡಿದೆ. ಆದರೆ ಪಾರ್ಸೆಲ್​​ ಒಳಗಡೆ ಜೀವಂತ ಹಾವು ಹೇಗೆ ಬಂತು? ಎಂಬುದು ಪ್ರಶ್ನೆಯಾಗಿ ಉಳಿದುಕೊಂಡಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 11:44 am, Wed, 19 June 24

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್