AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೇಜಾನ್‌ ಪಾರ್ಸೆಲ್​​ನಲ್ಲಿ ಬಂದ ನಾಗಪ್ಪ, ಬುಸುಗುಟ್ಟುತ್ತಿರುವ ಹಾವು ಕಂಡು ಬೆಚ್ಚಿಬಿದ್ದ ದಂಪತಿ

ಸಾಫ್ಟ್‌ವೇರ್ ಉದ್ಯೋಗದಲ್ಲಿರುವ ಬೆಂಗಳೂರಿನ ದಂಪತಿಗಳಿಬ್ಬರು ವಾರದ ಹಿಂದೆಯಷ್ಟೇ ಅಮೆಜಾನ್‌ನಲ್ಲಿ ಎಕ್ಸ್‌ಬಾಕ್ಸ್‌ ಕಂಟ್ರೋಲರ್ ಆರ್ಡರ್​ ಮಾಡಿದ್ದರು. ಅದರಂತೆ ಪಾರ್ಸೆಲ್​​ ಮನೆ ಬಾಗಿಲಿಗೆ ಬಂದು ತಲುಪಿದೆ. ಪಾರ್ಸೆಲ್​​ ಓಪನ್​​ ಮಾಡುತ್ತಿದ್ದಂತೆ ಅದರೊಳಗೆ ಎಕ್ಸ್‌ಬಾಕ್ಸ್‌ ಕಂಟ್ರೋಲರ್ ಬದಲಾಗಿ ನಾಗರಹಾವೊಂದು ಜಡೆ ಎತ್ತಿ ನಿಂತಿದೆ.

ಅಮೇಜಾನ್‌ ಪಾರ್ಸೆಲ್​​ನಲ್ಲಿ ಬಂದ ನಾಗಪ್ಪ, ಬುಸುಗುಟ್ಟುತ್ತಿರುವ ಹಾವು ಕಂಡು ಬೆಚ್ಚಿಬಿದ್ದ ದಂಪತಿ
ಅಕ್ಷತಾ ವರ್ಕಾಡಿ
|

Updated on:Jun 19, 2024 | 12:02 PM

Share

ಬೆಂಗಳೂರು: ಅಮೆಜಾನ್ ನಲ್ಲಿ ಎಕ್ಸ್‌ಬಾಕ್ಸ್‌ ಕಂಟ್ರೋಲರ್ ಬುಕ್ ಮಾಡಿದ್ದ ದಂಪತಿಗಳು ಪಾರ್ಸೆಲ್​​ ತೆರೆಯುತ್ತಿದ್ದಂತೆ ಬೆಚ್ಚಿ ಬಿದ್ದಿದ್ದಾರೆ. ಪಾರ್ಸೆಲ್​​​ ತೆರೆಯುತ್ತಿದ್ದಂತೆ ​ ಬುಸುಗುಟ್ಟುತ್ತಿರುವ ಹಾವು ದಂಗಾದ ದಂಪತಿಗಳು ತಮ್ಮ ಅನುಭವವನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ. ಈ ಘಟನೆ ಬೆಂಗಳೂರಿನ ಸರ್ಜಾಪುರದಲ್ಲಿ ನಡೆದಿದೆ.

ಸಾಫ್ಟ್‌ವೇರ್ ಉದ್ಯೋಗದಲ್ಲಿರುವ ಈ ದಂಪತಿ ವಾರದ ಹಿಂದೆಯಷ್ಟೇ ಅಮೆಜಾನ್‌ನಲ್ಲಿ ಎಕ್ಸ್‌ಬಾಕ್ಸ್‌ ಕಂಟ್ರೋಲರ್ ಆರ್ಡರ್​ ಮಾಡಿದ್ದರು. ಅದರಂತೆ ಪಾರ್ಸೆಲ್​​ ಮನೆ ಬಾಗಿಲಿಗೆ ಬಂದು ತಲುಪಿದೆ. ಪಾರ್ಸೆಲ್​​ ಓಪನ್​​ ಮಾಡುತ್ತಿದ್ದಂತೆ ಅದರೊಳಗೆ ಎಕ್ಸ್‌ಬಾಕ್ಸ್‌ ಕಂಟ್ರೋಲರ್ ಬದಲಾಗಿ ನಾಗರಹಾವೊಂದು ಜಡೆ ಎತ್ತಿ ನಿಂತಿದೆ. ತಕ್ಷಣ ಬಾಕ್ಸ್​ ಅನ್ನು ಮುಚ್ಚಿ ತಮಗಾದ ಕರಾಳ ಅನುಭವವನ್ನು ವಿಡಿಯೋ ಮಾಡಿ ಸೋಶಿಯಲ್​ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ಪ್ಯಾಕೇಜಿಂಗ್ ಟೇಪ್‌ನಲ್ಲಿ ಸಿಲುಕಿಕೊಂಡಿದ್ದ ನಾಗರಹಾವು ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ತನ್ನ ಮದುವೆಯಲ್ಲಿ ಡಾನ್ಸ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಯುವತಿ ಸಾವು

ಈ ಘಟನೆಯ ಬಳಿಕ ಅಮೇಜಾನ್ ಕಂಪೆನಿ ದಂಪತಿಗೆ ಎಕ್ಸ್‌ಬಾಕ್ಸ್‌ ಕಂಟ್ರೋಲರ್‌ಗೆ ನೀಡಿದ್ದ ಹಣವನ್ನು ಸಂಪೂರ್ಣವಾಗಿ ಮರುಪಾವತಿ ಮಾಡಿದೆ. ಆದರೆ, ವಿಷಪೂರಿತ ಹಾವಿನ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಬದಲಾಗಿ ತಪ್ಪಾಗಿ ಪಾರ್ಸೆಲ್​​​ ಬಂದಿರುವುದಕ್ಕೆ ವಿಷಾದ ವ್ಯಕ್ತಪಡಿಸುವುದಾಗಿ ಹೇಳಿಕೊಂಡಿದೆ. ಆದರೆ ಪಾರ್ಸೆಲ್​​ ಒಳಗಡೆ ಜೀವಂತ ಹಾವು ಹೇಗೆ ಬಂತು? ಎಂಬುದು ಪ್ರಶ್ನೆಯಾಗಿ ಉಳಿದುಕೊಂಡಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 11:44 am, Wed, 19 June 24

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ