AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮೂರು ಟ್ರೇ ಮೊಟ್ಟೆಗಳನ್ನು ತಂದಿಟ್ಟು ಟ್ರಿಪ್‌ಗೆ ಹೋಗಿದ್ದ ಫ್ಯಾಮಿಲಿ, ಮುಂದೆ ಆಗಿದ್ದೇ ಬೇರೆ

ಸಾಮಾನ್ಯವಾಗಿ ಕೆಲವರು ತಿಂಗಳಲ್ಲಿ ಒಂದು ಅಥವಾ ಎರಡು ಟ್ರೇ ಮೊಟ್ಟೆಗಳನ್ನು ತಂದು ಇಟ್ಟುಕೊಳ್ತಾರೆ. ಈ ಕುಟುಂಬವು ಕೂಡ ಮೂರು ಟ್ರೇ ಮೊಟ್ಟೆಗಳನ್ನು ಮನೆಯಲ್ಲಿ ತಂದು ಇಟ್ಟಿದೆ. ಆ ಬಳಿಕ ಒಂದಲ್ಲ ಬರೋಬ್ಬರಿ ಎರಡು ಟ್ರಿಪ್‌ಗೆಂದು ತೆರಳಿದೆ. ಪ್ರವಾಸ ಮುಗಿಸಿ ಮನೆಗೆ ಬಂದ ಸದಸ್ಯರು ಮನೆ ತುಂಬಾ ಓಡಾಡುತ್ತಿದ್ದ ಕೋಳಿ ಮರಿಗಳನ್ನು ಕಂಡು ಶಾಕ್ ಆಗಿದ್ದಾರೆ. ಈ ಕುರಿತಾದ ವಿಡಿಯೋ ವೈರಲ್ ಆಗಿದೆ.

Video: ಮೂರು ಟ್ರೇ ಮೊಟ್ಟೆಗಳನ್ನು ತಂದಿಟ್ಟು ಟ್ರಿಪ್‌ಗೆ ಹೋಗಿದ್ದ ಫ್ಯಾಮಿಲಿ, ಮುಂದೆ ಆಗಿದ್ದೇ ಬೇರೆ
ವೈರಲ್‌ ವಿಡಿಯೋImage Credit source: Twitter
ಸಾಯಿನಂದಾ
|

Updated on: Dec 02, 2025 | 12:59 PM

Share

ಸೋಶಿಯಲ್ ಮೀಡಿಯಾದಲ್ಲಿ(social media) ವೈರಲ್ ಆಗುವ ಕೆಲ ವಿಡಿಯೋಗಳನ್ನು ಕಂಡಾಗ ಅಚ್ಚರಿಯಾಗುತ್ತದೆ. ಇದೇನಪ್ಪಾ ಹೀಗೆ ಎಂದೇನಿಸುತ್ತದೆ. ಈ ವಿಡಿಯೋ ನೋಡಿದ ಮೇಲೂ ನಿಮಗೂ ಹಾಗೆಯೇ ಅನಿಸದೇ ಇರದು. ಹೌದು, ಕುಟುಂಬವೊಂದು ಮೂರು ಟ್ರೇನಷ್ಟು ಮೊಟ್ಟೆಗಳನ್ನು ತಂದು ಮನೆಯಲ್ಲಿಟ್ಟಿದ್ದು, ಎರಡು ತಿಂಗಳ ಕಾಲ ಟ್ರಿಪ್‌ಗೆ (trip) ಹೋಗಿದೆ. ಮನೆಗೆ ಬಂದು ನೋಡಿದ್ರೆ ಅಚ್ಚರಿಯೊಂದು ಕಾದಿತ್ತು. ಅಷ್ಟಕ್ಕೂ ಆಗಿದ್ದೇನು, ಈ ಕುರಿತಾದ ಮಾಹಿತಿ ಇಲ್ಲಿದೆ.

ಟ್ರಿಪ್‌ಗೆ ಹೊರಡುವ ಮುನ್ನ ಮೂರು ಟ್ರೇ ಮೊಟ್ಟೆಗಳನ್ನು ತಂದಿಟ್ಟಿದ್ದರಂತೆ. ಈ ಮೊಟ್ಟೆಗಳಿಂದ ಮರಿಗಳು ಹೊರಬಂದಿವೆ. ಹೌದು, ಪ್ರವಾಸ ಮುಗಿಸಿ ಬರುವ ವೇಳೆಗೆ  ಮನೆ ತುಂಬಾ ಓಡಾಡುತ್ತಿದ್ದ ಕೋಳಿ ಮರಿಗಳನ್ನು ಕಂಡು ಮನೆ ಮಂದಿ ಶಾಕ್ ಆಗಿದ್ದಾರೆ.

ವೈರಲ್‌ ವಿಡಿಯೋ ಇಲ್ಲಿದೆ ನೋಡಿ

@RanjanSingh ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಈ ವಿಡಿಯೋದಲ್ಲಿ ಮನೆ ತುಂಬಾ ಕೋಳಿ ಮರಿಗಳು ಓಡಾಡುತ್ತಿರುವುದನ್ನು ನೋಡಬಹುದು.

ಇದನ್ನೂ ಓದಿ:ಟಿಫಿನ್ ಬಾಕ್ಸ್ ಕಂಡೊಡನೆ ಓಡೋಡಿ ಬಂದ ಅಳಿಲು, ಮುಂದೇನಾಯ್ತು ನೋಡಿ

ಈ ವಿಡಿಯೋ ಒಂದು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ಇದು ನಿಜವೇ ಎಂದು ಕೇಳಿದ್ದಾರೆ. ಇನ್ನೊಬ್ಬರು, ತುಂಬಾ ದುಃಖಕರವಾದ ಸಂಗತಿ ಎಂದರೆ, ಮತ್ತೊಬ್ಬರು ಮನೆಯಲ್ಲಿ ಫ್ರಿಡ್ಜ್ ಇರಲಿಲ್ಲವೇ ಎಂದು ಕೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!