AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಇದು ರೈತನ ವಿಭಿನ್ನ ರಾಮನವಮಿ ಸೆಲೆಬ್ರೇಶನ್; ಹೂಕೋಸಿನಲ್ಲಿ ಮೂಡಿ ಬಂದ ರಾಮ, ಸೀತೆ, ಹನುಮಂತ

ಯುಗಾದಿ ನಂತರ ಬರುವ ಹಬ್ಬವೇ ರಾಮನವಮಿ. ಹಿಂದೂಗಳ ಪ್ರಮುಖ ಹಬ್ಬವಾದ ರಾಮನವಮಿಯನ್ನು ದೇಶದಾದ್ಯಂತ ಅದ್ದೂರಿಯಿಂದ ಆಚರಿಸಲಾಗಿದೆ. ಈ ಆದರೆ ಇಲ್ಲೊಬ್ಬ ಯುವ ರೈತ ವಿಭಿನ್ನವಾಗಿ ರಾಮನವಮಿ ಆಚರಿಸಿದ್ದಾನೆ. ತಾನು ಬೆಳೆದ ಹೂಕೋಸಿನಲ್ಲಿ ರಾಮ, ಸೀತೆ ಹಾಗೂ ಹನುಮಂತ ಚಿತ್ರ ಬಿಡಿಸಿ ಹಬ್ಬವನ್ನು ಸಂಭ್ರಮಿಸಿದ್ದಾನೆ, ಈ ಕುರಿತಾದ ಸ್ಟೋರಿ ಇಲ್ಲಿದೆ.

Viral: ಇದು ರೈತನ ವಿಭಿನ್ನ ರಾಮನವಮಿ ಸೆಲೆಬ್ರೇಶನ್; ಹೂಕೋಸಿನಲ್ಲಿ ಮೂಡಿ ಬಂದ ರಾಮ, ಸೀತೆ, ಹನುಮಂತ
ಹೂಕೋಸಿನಲ್ಲಿ ಮೂಡಿಬಂದ ರಾಮ, ಸೀತೆ, ಹನುಮಂತImage Credit source: Twitter
ಸಾಯಿನಂದಾ
|

Updated on:Mar 28, 2026 | 10:43 AM

Share

ಮರ್ಯಾದಾ ಪುರುಷ, ಪುರುಷೋತ್ತಮ ಭಗವಾನ್ ಶ್ರೀ ರಾಮನ (Shri Rama) ಜನ್ಮದಿನವನ್ನು ದೇಶದೆಲ್ಲೆಡೆ ಶ್ರದ್ಧಾಭಕ್ರಿಯಿಂದ ಆಚರಿಸಲಾಗಿದೆ. ಹಿಂದೂಗಳಿಗೆ ಯುಗಾದಿ (Ugadi festival) ವರುಷದ ಮೊದಲ ಹಬ್ಬವಾದರೆ, ತದನಂತರ ಬರುವುದೇ ಈ ರಾಮನವಮಿ (Rama Navami). ಈ ಹಬ್ಬದಂದು ಕೋಟ್ಯಾಂತರ ಭಕ್ತರು ರಾಮನನ್ನು ಪೂಜಿಸಿ, ಆರಾಧಿಸುತ್ತಾರೆ. ಆದರೆ ಇಲ್ಲೊಬ್ಬ ರೈತನು ತಾನು ಬೆಳೆದ ಹೂಕೋಸಿನಲ್ಲಿ ರಾಮ, ಸೀತೆ ಹನುಮಂತನ ಚಿತ್ರ ಬಿಡಿಸಿದ ರಾಮನವಮಿಯನ್ನು ಸಂಭ್ರಮಿಸಿದ್ದಾನೆ. ಈ ಪೋಸ್ಟ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಮೆಚ್ಚುಗೆಗೆ ಪಾತ್ರವಾಗಿದೆ.

ನಂದಿನಿ ವೆಂಕಟಾದ್ರಿ (Nandini Venkatadri) ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಯುವ ರೈತನೊಬ್ಬ ತಾನು ಬೆಳೆದ ಹೂಕೋಸಿನಲ್ಲಿ ರಾಮ, ಸೀತೆ, ಹನುಮಂತನ ಚಿತ್ರ ಬಿಡಿಸಿದ ರಾಮನವಮಿಯನ್ನು ವಿಭಿನ್ನವಾಗಿ ಆಚರಿಸುವುದನ್ನು ಕಾಣಬಹುದು. ಹೊಲದಲ್ಲಿ ಹೂಕೋಸಿನ ರಾಶಿಯನ್ನು ಕಾಣಬಹುದು. ಮೂವರು ಮಹಿಳೆಯರು ಕೆಲಸದಲ್ಲಿ ತೊಡಗಿಕೊಂಡಿದ್ದು, ಯುವ ರೈತನೊಬ್ಬ ಹೂಕೋಸನ್ನು ಜೋಡಿಸಿ ರಾಮ, ಸೀತೆ, ಹನುಮಂತನ ಚಿತ್ರ ಬಿಡಿಸಿ ಅದರ ಪಕ್ಕ ಕುಳಿತಿರುವುದನ್ನು ನೀವು ನೋಡಬಹುದು.

ವೈರಲ್ ಪೋಸ್ಟ್‌ ಇಲ್ಲಿದೆ

ಇದನ್ನೂ ಓದಿ: ಮಾಡಿದ್ದುಣ್ಣೋ ಮಹಾರಾಯ, ಹೋಳಿ ಆಚರಿಸುತ್ತಿದ್ದವರ ಮೇಲೆ ಕಸ ಸುರಿಯಲು ಹೋಗಿ ಏನಾಯ್ತು ನೋಡಿ

ಮಾರ್ಚ್ 27 ರಂದು ಹಂಚಿಕೊಳ್ಳಲಾದ ಈ ಪೋಸ್ಟ್ ತೊಂಭತ್ತು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ನಮ್ಮ ಭಕ್ತಿಯ ಭಾವನೆಯನ್ನು ವ್ಯಕ್ತಪಡಿಸಲು ಹಲವಾರು ಮಾರ್ಗಗಳಿವೆ, ಆದ್ದರಿಂದ, ಇದು ನೈಸರ್ಗಿಕ ಹೂವಿನ ಗೌರವವಾದ ಹೂಕೋಸು ಮೂಲಕ ಭಕ್ತಿಯನ್ನು ವ್ಯಕ್ತಪಡಿಸುವ ಅತ್ಯಂತ ವಿಶಿಷ್ಟ ಮಾರ್ಗವಾಗಿದೆ ಎಂದಿದ್ದಾರೆ. ಇನ್ನೊಬ್ಬರು, ಇದು ತುಂಬಾ ಸುಂದರ ಹಾಗೂ ಹೃದಯ ಸ್ಪರ್ಶಿಯಾಗಿದೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಜೈ ಶ್ರೀರಾಮ್ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:42 am, Sat, 28 March 26

Follow Us
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ