AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಗನಿಗಾಗಿ ಉರುಳು ಸೇವೆ ಮೂಲಕ ಚಾಮುಂಡಿ ಬೆಟ್ಟ ಹತ್ತಿದ ವೃದ್ಧ ತಂದೆ

ಇಲ್ಲೊಬ್ಬರು ವಯಸ್ಸಾದ ತಂದೆ ತನ್ನ ಅನಾರೋಗ್ಯ ಪೀಡಿತ ಮಗ ಆದಷ್ಟು ಬೇಗ ಗುಣಮುಖವಾಗಬೇಕೆಂದು ಉರುಳು ಸೇವೆಯ ಮೂಲಕ ಚಾಮುಂಡಿ ಬೆಟ್ಟ ಹತ್ತಿ ಚಾಮುಂಡೇಶ್ವರಿ ತಾಯಿಯ  ದರ್ಶನ ಪಡೆದಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು,  ಹೃದಯಸ್ಪರ್ಶಿ  ದೃಶ್ಯವನ್ನು ಕಂಡು ನೆಟ್ಟಿಗರು ಭಾವುಕರಾಗಿದ್ದಾರೆ. 

Viral Video: ಮಗನಿಗಾಗಿ ಉರುಳು ಸೇವೆ ಮೂಲಕ ಚಾಮುಂಡಿ ಬೆಟ್ಟ ಹತ್ತಿದ ವೃದ್ಧ ತಂದೆ
ಮಾಲಾಶ್ರೀ ಅಂಚನ್​
| Edited By: |

Updated on: Apr 09, 2024 | 11:40 AM

Share

ಮಕ್ಕಳಿಗೆ ಹೆತ್ತವರೇ ಆಸರೆ.  ನಮ್ಮ ಕಷ್ಟ ಕಾಲದಲ್ಲಿ ಸ್ನೇಹಿತರು ಹಾಗೂ ಸಂಬಂಧಿಕರು ನಮ್ಮ ಕೈ ಬಿಡಬಹುದು ಆದರೆ ಹೆತ್ತ ತಂದೆ ತಾಯಿ ಯಾವತ್ತು ನಮ್ಮ ಕೈ ಬಿಡಲ್ಲ. ಎಂತಹ ಕಷ್ಟದ ಪರಿಸ್ಥಿತಿ ಎದುರಾದರೂ ಅವರು ಸದಾ ನಮ್ಮ ಏಳಿಗೆಯನ್ನೇ ಬಯಸುತ್ತಾರೆ. ಇದಕ್ಕೆ ಸೂಕ್ತ ಉದಾಹರಣೆಯಂತಿರುವ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ವೃದ್ಧ ತಂದೆಯೊಬ್ಬರು ತನ್ನ ಅನಾರೋಗ್ಯ ಪೀಡಿತ ಮಗ ಆದಷ್ಟು ಬೇಗ ಗುಣಮುಖವಾಗಲಿ ಎಂದು ಉರುಳು ಸೇವೆಯ ಮೂಲಕ ಚಾಮುಂಡಿ ಬೆಟ್ಟ ಹತ್ತಿ, ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ.

ಈ ಹೃದಯಸ್ಪರ್ಶಿ ವಿಡಿಯೋವನ್ನು @askmysuru_official ಎಂಬ ಹೆಸರಿನ ಇನ್ಸ್ಟಾಗ್ರಾಮ್ ಪೇಜ್ ಒಂದರಲ್ಲಿ ಹಂಚಿಕೊಳ್ಳಲಾಗಿದ್ದು, “ಹುಷಾರಿಲ್ಲದ ಮಗನಿಗಾಗಿ ತಂದೆಯ ಉರುಳು ಸೇವೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ವೈರಲ್ ವಿಡಿಯೋದಲ್ಲಿ ವೃದ್ಧ ದಂಪತಿಗಳಿಬ್ಬರು ತಮ್ಮ ಅನಾರೋಗ್ಯ ಪೀಡಿತ ಮಗ ಆದಷ್ಟು ಬೇಗ ಗುಣಮುಖವಾಗಲಿ ಎಂದು  ಚಾಮುಂಡಿ ಬೆಟ್ಟ ಹತ್ತುವ ದೃಶ್ಯವನ್ನು ಕಾಣಬಹುದು. ಅದರಲ್ಲಿ ವೃದ್ಧ ತಂದೆ ತನ್ನ ಮಗನಿಗಾಗಿ ಉರುಳು ಸೇವೆಯ ಮೂಲಕವೇ ಬೆಟ್ಟ ಹತ್ತಿದ್ದಾರೆ. ಈ ದೃಶ್ಯ ಎಂತಹ ಕಲ್ಲು ಹೃದಯವನ್ನು ಸಹ ಕರಗಿಸುವಂತಿದೆ.

ಇದನ್ನೂ ಓದಿ: ಚಿತ್ರದಲ್ಲಿ 2Bಗಳ ನಡುವೆ ಅಡಗಿರುವ ಸಂಖ್ಯೆ ’28’ ಗುರುತಿಸಬಹುದೇ?

ಏಪ್ರಿಲ್ 02 ರಂದು ಹಂಚಿಕೊಳ್ಳಲಾದ ಈ ವಿಡಿಯೋ ನಾಲ್ಕು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡದುಕೊಂಡಿದ್ದು,  ಮಕ್ಕಳಿಗಾಗಿ ಹೆತ್ತ ತಂದೆ ತಾಯಿಯ ತ್ಯಾಗವನ್ನು ಕಂಡು ನೆಟ್ಟಿಗರು ಭಾವುಕರಾಗಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​