AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಕಿಯಿಂದ ಪಾರಾಗಲು ಮೂರು ವರ್ಷದ ಮಗುವನ್ನು ಕಟ್ಟಡದಿಂದ ಕೆಳಗೆ ಎಸೆದ ತಂದೆ; ಕ್ಯಾಮೆರಾದಲ್ಲಿ ಭಯಾನಕ ದೃಶ್ಯ ಸೆರೆ

ಸೌತ್ ಬ್ರನ್ಸ್​ವಿಕ್ ಪಿಡಿ ತನ್ನ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದೆ. ಅಧಿಕಾರಿಗಳ ಬಾಡಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಹಿಡಿಯಲಾಗಿದೆ. ತಂದೆ ತನ್ನ ಮಗುವನ್ನು 2ನೇ ಮಹಡಿಯ ಕಿಟಕಿಯಿಂದ ಅಧಿಕಾರಿಗಳು ಕಡೆ ಎಸೆದಿದ್ದಾರೆ.

ಬೆಂಕಿಯಿಂದ ಪಾರಾಗಲು ಮೂರು ವರ್ಷದ ಮಗುವನ್ನು ಕಟ್ಟಡದಿಂದ ಕೆಳಗೆ ಎಸೆದ ತಂದೆ; ಕ್ಯಾಮೆರಾದಲ್ಲಿ ಭಯಾನಕ ದೃಶ್ಯ ಸೆರೆ
ಕಟ್ಟಡಕ್ಕೆ ಬೆಂಕಿ ತಗುಲಿದೆ, ಕಟ್ಟಡದಿಂದ ಜಿಗಿದ ವ್ಯಕ್ತಿ
TV9 Web
| Edited By: sandhya thejappa|

Updated on:Mar 14, 2022 | 10:47 AM

Share

ಬೆಂಕಿಯಿಂದ (Fire) ಪಾರಾಗಲು ವ್ಯಕ್ತಿಯೊಬ್ಬ ತನ್ನ 3 ವರ್ಷದ ಮಗುವನ್ನು (Baby) ಕಟ್ಟಡದ ಎರಡನೇ ಮಹಡಿಯಿಂದ ಎಸೆದು, ತಾನೂ ಕಿಟಕಿಯಿಂದ ಜಿಗಿದಿದ್ದಾನೆ. ಮಗುವನ್ನು ಎಸೆದು ತಾನು ಜಿಗಿದಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಘಟನೆ ಅಮೆರಿಕದ ನ್ಯೂಜೆರ್ಸಿಯದಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. ಸೌತ್ ಬ್ರನ್ಸ್​ವಿಕ್ ಟೌನ್​ಶಿಪ್​ ಪೊಲೀಸ್ ಡಿಪಾರ್ಟ್ಮೆಂಟ್​ನ ಸಾರ್ವಜನಿಕ ಸಂಪರ್ಕ ಕಛೇರಿ ಈ ವಿಡಿಯೋವನ್ನು ಹಂಚಿಕೊಂಡಿದೆ.

ಕಟ್ಟಡವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ, ದಟ್ಟ ಹೊಗೆಯಿಂದ ಆವರಿಸಿಕೊಂಡಿತ್ತು. ಈ ವೇಳೆ ಅಪ್ಪ- ಮಗು ಕಟ್ಟಡದಲ್ಲಿ ಸಿಲುಕಿಕೊಂಡಿದ್ದರು. ಕೆಳಗಿ ನಿಂತಿದ್ದ ಅಧಿಕಾರಿಗಳು ಎರಡನೆ ಮಹಡಿಯಲ್ಲಿ ಸಿಕ್ಕಿಬಿದ್ದ ವ್ಯಕ್ತಿಗೆ ತನ್ನ ಮಗುವನ್ನು ಕೆಳಗೆ ಎಸೆಯಲು ಸೂಚಿಸುತ್ತಾರೆ. ಮಗುವನ್ನು ಕೆಳಕ್ಕೆ ಎಸೆಯಿರಿ ಅಂತ ಅಧಿಕಾರಿಗಳು ಕೂಗುತ್ತಾರೆ. ನಂತರ ವ್ಯಕ್ತಿ ತನ್ನ ಮಗುವನ್ನು ಹೊರಗೆ ಎಸೆದು ಜಿಗಿಯುತ್ತಾರೆ. ಕಳೆದ ವಾರ ಈ ಘಟನೆ ನಡೆದಿದ್ದು, ಅಧಿಕಾರಿಯೊಬ್ಬರ ಬಾಡಿ ಕ್ಯಾಮೆರಾದಲ್ಲಿ ಈ ಭಯಾನಕ ದೃಶ್ಯ ಸೆರೆಯಾಗಿದೆ.

ಸೌತ್ ಬ್ರನ್ಸ್​ವಿಕ್ ಪಿಡಿ ತನ್ನ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದೆ. ಅಧಿಕಾರಿಗಳ ಬಾಡಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಹಿಡಿಯಲಾಗಿದೆ. ತಂದೆ ತನ್ನ ಮಗುವನ್ನು 2ನೇ ಮಹಡಿಯ ಕಿಟಕಿಯಿಂದ ಅಧಿಕಾರಿಗಳು ಕಡೆ ಎಸೆದಿದ್ದಾರೆ. ನಂತರ ಬೆಂಕಿಯಿಂದ ತಪ್ಪಿಸಿಕೊಳ್ಳಲು ಜಿಗಿದಿದ್ದಾರೆ ಅಂತ ಶೀರ್ಷಿಕೆ ಮೂಲಕ ತಿಳಿಸಿದೆ. ಸದ್ಯ ಈ ವಿಡಿಯೋ 7,500 ಕ್ಕೂ ಹೆಚ್ಚು ವೀಕ್ಷಣೆ ಗಳಿಸಿದೆ.

ಈ ವಿಡಿಯೋ ವೀಕ್ಷಿಸಿದ ಹಲವರು ಅಧಿಕಾರಿಗಳ ಕಾರ್ಯಕ್ಕೆ ಮತ್ತು ತಂದೆ ದೈರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ

ಬೀದರ್: ಸಕ್ಕರೆ ಕಾರ್ಖಾನೆ ತ್ಯಾಜ್ಯ ಹಳ್ಳದ ನೀರಿಗೆ; ನಾಲ್ಕೈದು ಗ್ರಾಮದ ಜನರಿಗೆ ಕುಡಿಯುವ ನೀರಿನ ಸಮಸ್ಯೆ

Health Tips: ಈ 5 ಕೆಟ್ಟ ಅಭ್ಯಾಸಗಳು ನಿಮ್ಮನ್ನು ಬೇಗ ವಯಸ್ಸಾದವರಂತೆ ಮಾಡಬಹುದು, ಅವುಗಳಿಂದ ದೂರವಿರಿ

Published On - 10:45 am, Mon, 14 March 22

Follow Us
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು