AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಕಿಯಿಂದ ಪಾರಾಗಲು ಮೂರು ವರ್ಷದ ಮಗುವನ್ನು ಕಟ್ಟಡದಿಂದ ಕೆಳಗೆ ಎಸೆದ ತಂದೆ; ಕ್ಯಾಮೆರಾದಲ್ಲಿ ಭಯಾನಕ ದೃಶ್ಯ ಸೆರೆ

ಸೌತ್ ಬ್ರನ್ಸ್​ವಿಕ್ ಪಿಡಿ ತನ್ನ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದೆ. ಅಧಿಕಾರಿಗಳ ಬಾಡಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಹಿಡಿಯಲಾಗಿದೆ. ತಂದೆ ತನ್ನ ಮಗುವನ್ನು 2ನೇ ಮಹಡಿಯ ಕಿಟಕಿಯಿಂದ ಅಧಿಕಾರಿಗಳು ಕಡೆ ಎಸೆದಿದ್ದಾರೆ.

ಬೆಂಕಿಯಿಂದ ಪಾರಾಗಲು ಮೂರು ವರ್ಷದ ಮಗುವನ್ನು ಕಟ್ಟಡದಿಂದ ಕೆಳಗೆ ಎಸೆದ ತಂದೆ; ಕ್ಯಾಮೆರಾದಲ್ಲಿ ಭಯಾನಕ ದೃಶ್ಯ ಸೆರೆ
ಕಟ್ಟಡಕ್ಕೆ ಬೆಂಕಿ ತಗುಲಿದೆ, ಕಟ್ಟಡದಿಂದ ಜಿಗಿದ ವ್ಯಕ್ತಿ
TV9 Web
| Edited By: sandhya thejappa|

Updated on:Mar 14, 2022 | 10:47 AM

Share

ಬೆಂಕಿಯಿಂದ (Fire) ಪಾರಾಗಲು ವ್ಯಕ್ತಿಯೊಬ್ಬ ತನ್ನ 3 ವರ್ಷದ ಮಗುವನ್ನು (Baby) ಕಟ್ಟಡದ ಎರಡನೇ ಮಹಡಿಯಿಂದ ಎಸೆದು, ತಾನೂ ಕಿಟಕಿಯಿಂದ ಜಿಗಿದಿದ್ದಾನೆ. ಮಗುವನ್ನು ಎಸೆದು ತಾನು ಜಿಗಿದಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಘಟನೆ ಅಮೆರಿಕದ ನ್ಯೂಜೆರ್ಸಿಯದಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. ಸೌತ್ ಬ್ರನ್ಸ್​ವಿಕ್ ಟೌನ್​ಶಿಪ್​ ಪೊಲೀಸ್ ಡಿಪಾರ್ಟ್ಮೆಂಟ್​ನ ಸಾರ್ವಜನಿಕ ಸಂಪರ್ಕ ಕಛೇರಿ ಈ ವಿಡಿಯೋವನ್ನು ಹಂಚಿಕೊಂಡಿದೆ.

ಕಟ್ಟಡವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ, ದಟ್ಟ ಹೊಗೆಯಿಂದ ಆವರಿಸಿಕೊಂಡಿತ್ತು. ಈ ವೇಳೆ ಅಪ್ಪ- ಮಗು ಕಟ್ಟಡದಲ್ಲಿ ಸಿಲುಕಿಕೊಂಡಿದ್ದರು. ಕೆಳಗಿ ನಿಂತಿದ್ದ ಅಧಿಕಾರಿಗಳು ಎರಡನೆ ಮಹಡಿಯಲ್ಲಿ ಸಿಕ್ಕಿಬಿದ್ದ ವ್ಯಕ್ತಿಗೆ ತನ್ನ ಮಗುವನ್ನು ಕೆಳಗೆ ಎಸೆಯಲು ಸೂಚಿಸುತ್ತಾರೆ. ಮಗುವನ್ನು ಕೆಳಕ್ಕೆ ಎಸೆಯಿರಿ ಅಂತ ಅಧಿಕಾರಿಗಳು ಕೂಗುತ್ತಾರೆ. ನಂತರ ವ್ಯಕ್ತಿ ತನ್ನ ಮಗುವನ್ನು ಹೊರಗೆ ಎಸೆದು ಜಿಗಿಯುತ್ತಾರೆ. ಕಳೆದ ವಾರ ಈ ಘಟನೆ ನಡೆದಿದ್ದು, ಅಧಿಕಾರಿಯೊಬ್ಬರ ಬಾಡಿ ಕ್ಯಾಮೆರಾದಲ್ಲಿ ಈ ಭಯಾನಕ ದೃಶ್ಯ ಸೆರೆಯಾಗಿದೆ.

ಸೌತ್ ಬ್ರನ್ಸ್​ವಿಕ್ ಪಿಡಿ ತನ್ನ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದೆ. ಅಧಿಕಾರಿಗಳ ಬಾಡಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಹಿಡಿಯಲಾಗಿದೆ. ತಂದೆ ತನ್ನ ಮಗುವನ್ನು 2ನೇ ಮಹಡಿಯ ಕಿಟಕಿಯಿಂದ ಅಧಿಕಾರಿಗಳು ಕಡೆ ಎಸೆದಿದ್ದಾರೆ. ನಂತರ ಬೆಂಕಿಯಿಂದ ತಪ್ಪಿಸಿಕೊಳ್ಳಲು ಜಿಗಿದಿದ್ದಾರೆ ಅಂತ ಶೀರ್ಷಿಕೆ ಮೂಲಕ ತಿಳಿಸಿದೆ. ಸದ್ಯ ಈ ವಿಡಿಯೋ 7,500 ಕ್ಕೂ ಹೆಚ್ಚು ವೀಕ್ಷಣೆ ಗಳಿಸಿದೆ.

ಈ ವಿಡಿಯೋ ವೀಕ್ಷಿಸಿದ ಹಲವರು ಅಧಿಕಾರಿಗಳ ಕಾರ್ಯಕ್ಕೆ ಮತ್ತು ತಂದೆ ದೈರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ

ಬೀದರ್: ಸಕ್ಕರೆ ಕಾರ್ಖಾನೆ ತ್ಯಾಜ್ಯ ಹಳ್ಳದ ನೀರಿಗೆ; ನಾಲ್ಕೈದು ಗ್ರಾಮದ ಜನರಿಗೆ ಕುಡಿಯುವ ನೀರಿನ ಸಮಸ್ಯೆ

Health Tips: ಈ 5 ಕೆಟ್ಟ ಅಭ್ಯಾಸಗಳು ನಿಮ್ಮನ್ನು ಬೇಗ ವಯಸ್ಸಾದವರಂತೆ ಮಾಡಬಹುದು, ಅವುಗಳಿಂದ ದೂರವಿರಿ

Published On - 10:45 am, Mon, 14 March 22

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ