AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಕಿಯಿಂದ ಪಾರಾಗಲು ಮೂರು ವರ್ಷದ ಮಗುವನ್ನು ಕಟ್ಟಡದಿಂದ ಕೆಳಗೆ ಎಸೆದ ತಂದೆ; ಕ್ಯಾಮೆರಾದಲ್ಲಿ ಭಯಾನಕ ದೃಶ್ಯ ಸೆರೆ

ಸೌತ್ ಬ್ರನ್ಸ್​ವಿಕ್ ಪಿಡಿ ತನ್ನ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದೆ. ಅಧಿಕಾರಿಗಳ ಬಾಡಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಹಿಡಿಯಲಾಗಿದೆ. ತಂದೆ ತನ್ನ ಮಗುವನ್ನು 2ನೇ ಮಹಡಿಯ ಕಿಟಕಿಯಿಂದ ಅಧಿಕಾರಿಗಳು ಕಡೆ ಎಸೆದಿದ್ದಾರೆ.

ಬೆಂಕಿಯಿಂದ ಪಾರಾಗಲು ಮೂರು ವರ್ಷದ ಮಗುವನ್ನು ಕಟ್ಟಡದಿಂದ ಕೆಳಗೆ ಎಸೆದ ತಂದೆ; ಕ್ಯಾಮೆರಾದಲ್ಲಿ ಭಯಾನಕ ದೃಶ್ಯ ಸೆರೆ
ಕಟ್ಟಡಕ್ಕೆ ಬೆಂಕಿ ತಗುಲಿದೆ, ಕಟ್ಟಡದಿಂದ ಜಿಗಿದ ವ್ಯಕ್ತಿ
TV9 Web
| Edited By: |

Updated on:Mar 14, 2022 | 10:47 AM

Share

ಬೆಂಕಿಯಿಂದ (Fire) ಪಾರಾಗಲು ವ್ಯಕ್ತಿಯೊಬ್ಬ ತನ್ನ 3 ವರ್ಷದ ಮಗುವನ್ನು (Baby) ಕಟ್ಟಡದ ಎರಡನೇ ಮಹಡಿಯಿಂದ ಎಸೆದು, ತಾನೂ ಕಿಟಕಿಯಿಂದ ಜಿಗಿದಿದ್ದಾನೆ. ಮಗುವನ್ನು ಎಸೆದು ತಾನು ಜಿಗಿದಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಘಟನೆ ಅಮೆರಿಕದ ನ್ಯೂಜೆರ್ಸಿಯದಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. ಸೌತ್ ಬ್ರನ್ಸ್​ವಿಕ್ ಟೌನ್​ಶಿಪ್​ ಪೊಲೀಸ್ ಡಿಪಾರ್ಟ್ಮೆಂಟ್​ನ ಸಾರ್ವಜನಿಕ ಸಂಪರ್ಕ ಕಛೇರಿ ಈ ವಿಡಿಯೋವನ್ನು ಹಂಚಿಕೊಂಡಿದೆ.

ಕಟ್ಟಡವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ, ದಟ್ಟ ಹೊಗೆಯಿಂದ ಆವರಿಸಿಕೊಂಡಿತ್ತು. ಈ ವೇಳೆ ಅಪ್ಪ- ಮಗು ಕಟ್ಟಡದಲ್ಲಿ ಸಿಲುಕಿಕೊಂಡಿದ್ದರು. ಕೆಳಗಿ ನಿಂತಿದ್ದ ಅಧಿಕಾರಿಗಳು ಎರಡನೆ ಮಹಡಿಯಲ್ಲಿ ಸಿಕ್ಕಿಬಿದ್ದ ವ್ಯಕ್ತಿಗೆ ತನ್ನ ಮಗುವನ್ನು ಕೆಳಗೆ ಎಸೆಯಲು ಸೂಚಿಸುತ್ತಾರೆ. ಮಗುವನ್ನು ಕೆಳಕ್ಕೆ ಎಸೆಯಿರಿ ಅಂತ ಅಧಿಕಾರಿಗಳು ಕೂಗುತ್ತಾರೆ. ನಂತರ ವ್ಯಕ್ತಿ ತನ್ನ ಮಗುವನ್ನು ಹೊರಗೆ ಎಸೆದು ಜಿಗಿಯುತ್ತಾರೆ. ಕಳೆದ ವಾರ ಈ ಘಟನೆ ನಡೆದಿದ್ದು, ಅಧಿಕಾರಿಯೊಬ್ಬರ ಬಾಡಿ ಕ್ಯಾಮೆರಾದಲ್ಲಿ ಈ ಭಯಾನಕ ದೃಶ್ಯ ಸೆರೆಯಾಗಿದೆ.

ಸೌತ್ ಬ್ರನ್ಸ್​ವಿಕ್ ಪಿಡಿ ತನ್ನ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದೆ. ಅಧಿಕಾರಿಗಳ ಬಾಡಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಹಿಡಿಯಲಾಗಿದೆ. ತಂದೆ ತನ್ನ ಮಗುವನ್ನು 2ನೇ ಮಹಡಿಯ ಕಿಟಕಿಯಿಂದ ಅಧಿಕಾರಿಗಳು ಕಡೆ ಎಸೆದಿದ್ದಾರೆ. ನಂತರ ಬೆಂಕಿಯಿಂದ ತಪ್ಪಿಸಿಕೊಳ್ಳಲು ಜಿಗಿದಿದ್ದಾರೆ ಅಂತ ಶೀರ್ಷಿಕೆ ಮೂಲಕ ತಿಳಿಸಿದೆ. ಸದ್ಯ ಈ ವಿಡಿಯೋ 7,500 ಕ್ಕೂ ಹೆಚ್ಚು ವೀಕ್ಷಣೆ ಗಳಿಸಿದೆ.

ಈ ವಿಡಿಯೋ ವೀಕ್ಷಿಸಿದ ಹಲವರು ಅಧಿಕಾರಿಗಳ ಕಾರ್ಯಕ್ಕೆ ಮತ್ತು ತಂದೆ ದೈರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ

ಬೀದರ್: ಸಕ್ಕರೆ ಕಾರ್ಖಾನೆ ತ್ಯಾಜ್ಯ ಹಳ್ಳದ ನೀರಿಗೆ; ನಾಲ್ಕೈದು ಗ್ರಾಮದ ಜನರಿಗೆ ಕುಡಿಯುವ ನೀರಿನ ಸಮಸ್ಯೆ

Health Tips: ಈ 5 ಕೆಟ್ಟ ಅಭ್ಯಾಸಗಳು ನಿಮ್ಮನ್ನು ಬೇಗ ವಯಸ್ಸಾದವರಂತೆ ಮಾಡಬಹುದು, ಅವುಗಳಿಂದ ದೂರವಿರಿ

Published On - 10:45 am, Mon, 14 March 22

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ