AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಹಾಲು ಕರೆಯುವುದನ್ನು ಕಲಿಯುವ ಪ್ರಯತ್ನದಲ್ಲಿ ವಿದೇಶಿ ಮಹಿಳೆ, ವೈರಲ್ ಆಯ್ತು ದೃಶ್ಯ

ಭಾರತಕ್ಕೆ ಬರುವ ವಿದೇಶಿಗರು ಇಲ್ಲಿನ ಆಚಾರ ವಿಚಾರ, ಸಂಸ್ಕೃತಿಯನ್ನು ಇಷ್ಟ ಪಟ್ಟು, ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುತ್ತಾರೆ. ಇದೀಗ ವಿದೇಶಿ ಮಹಿಳೆ ಭಾರತದ ಹಳ್ಳಿಯೊಂದಕ್ಕೆ ಭೇಟಿ ನೀಡಿದ್ದು, ಇದೇ ವೇಳೆ ವ್ಯಕ್ತಿಯೊಬ್ಬ ದನದ ಹಾಲು ಕರೆಯುವುದನ್ನು ನೋಡಿದ್ದಾಳೆ. ಹಾಲು ಕರೆಯುವುದು ಹೇಗೆಂದು ಕಲಿಯುವ ಪ್ರಯತ್ನ ಮಾಡಿದ್ದಾಳೆ. ಈ ವಿಡಿಯೋ ವೈರಲ್‌ ಆಗಿದೆ.

Video: ಹಾಲು ಕರೆಯುವುದನ್ನು ಕಲಿಯುವ ಪ್ರಯತ್ನದಲ್ಲಿ ವಿದೇಶಿ ಮಹಿಳೆ, ವೈರಲ್ ಆಯ್ತು ದೃಶ್ಯ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Aug 03, 2026 | 1:17 PM

Share

ಹಳ್ಳಿ ಬದುಕು ನಿಜಕ್ಕೂ ಸುಂದರ. ಆದರೆ ಹಳ್ಳಿಯಲ್ಲಿ ಹುಟ್ಟಿ ಬೆಳೆದ ಮಕ್ಕಳು ಓದು ಮುಗಿಯುತ್ತಿದ್ದಂತೆ ನಗರದತ್ತ ಹೊರಟು ಬಿಡುತ್ತಾರೆ. ಹೌದು, ಹಳ್ಳಿಯಲ್ಲಿ ಇರಲು ಇಷ್ಟ ಪಡುವುದೇ ಕಡಿಮೆ. ಆದರೆ ಇದೀಗ ವಿದೇಶಿ ಮಹಿಳೆಯೊಬ್ಬಳು (foreign woman) ಹಳ್ಳಿಯ ಜನರ ಕಾಯಕವನ್ನು ಮೆಚ್ಚಿಕೊಂಡಿದ್ದಾಳೆ. ಭಾರತದ ಹಳ್ಳಿಯೊಂದಕ್ಕೆ ಭೇಟಿ ನೀಡಿದ ವಿದೇಶಿ ಮಹಿಳೆ ದನದ ಹಾಲು ಕರೆಯುವ ಸಾಹಸಕ್ಕೆ ಕೈ ಹಾಕಿದ್ದಾಳೆ. ಈ ವಿಡಿಯೋ ಸದ್ಯ ವೈರಲ್ ಆಗಿದ್ದು ನೆಟ್ಟಿಗರು ಹುಬ್ಬೇರಿಸುವಂತೆ ಮಾಡಿದೆ.

ಮೈಕ್ (Meike) ಎಂಬ ಮಹಿಳೆ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಹಾಲು ಕರೆಯುವುದನ್ನು ಕಲಿಯುತ್ತಿರುವುದನ್ನು ಕಾಣಬಹುದು. ವ್ಯಕ್ತಿಯೊಬ್ಬ ದನದ ಹಾಲು ಕರೆಯುತ್ತಿರುವುದನ್ನು ಅಚ್ಚರಿ ನೋಡುತ್ತಾ ನಿಂತ ಈ ವಿದೇಶಿ ಮಹಿಳೆ, ಈ ಕೆಲಸವನ್ನು ಕಲಿಯುವ ಪ್ರಯತ್ನಕ್ಕೆ ಮುಂದಾಗಿದ್ದಾಳೆ. ಅಲ್ಲೇ ನಿಂತಿದ್ದ ಮಹಿಳೆ ಈ ವಿದೇಶಿ ಮಹಿಳೆಗೆ ಹಂತ ಹಂತವಾಗಿ ಹಾಲು ಕರೆಯುವುದು ಹೇಗೆಂದು ವಿವರಿಸಿರುವುದನ್ನು ಕಾಣಬಹುದು. ಕೊನೆಗೆ ದನದ ಕೆಚ್ಚಲಿಗೆ ಕೈ ಹಾಕುತ್ತಿದ್ದಂತೆ ದನವು ಕಾಲೆತ್ತಿ ಒದೆದಿದೆ. ದನದ ರಿಯಾಕ್ಷನ್‌ ಕಂಡು ಈ ವಿದೇಶಿ ಮಹಿಳೆ ಭಯಗೊಂಡಿರುವುದನ್ನು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಭಾರತೀಯರ ಆತ್ಮೀಯ ಆತಿಥ್ಯಕ್ಕೆ ಮನಸೋತ ವಿದೇಶಿ ಮಹಿಳೆ

ಈ ವಿಡಿಯೋ 22 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಕೆಲಸ ಯಾವುದಾದರೇನು ಕಲಿಯುವ ಮನಸ್ಸು ಮುಖ್ಯ ಎಂದಿದ್ದಾರೆ. ಇನ್ನೊಬ್ಬರು, ಒದೆಯುತ್ತದೆ, ಸ್ವಲ್ಪ ಹುಷಾರಾಗಿರಿ ಎಂದು ಹೇಳಿದ್ದಾರೆ. ಮತ್ತೊಬ್ಬರು, ನಿಜಕ್ಕೂ ಇದು ಅದ್ಭುತವಾದ ದೃಶ್ಯ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ