AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಇದೇ ಕಣ್ರೀ ನಿಜವಾದ ಮಾನವೀಯತೆ; ರಸ್ತೆ ಬದಿಯಲ್ಲಿ ಮಲಗಿದ್ದ ವೃದ್ಧ ವ್ಯಕ್ತಿಗೆ ಸಹಾಯ ಮಾಡಿದ ವಿದೇಶಿಗ

ನಮ್ಮ ಕಷ್ಟಕ್ಕೆ ನಮ್ಮವರೇ ಆಗಲ್ಲ, ಇನ್ನು ಬೇರೆಯವರು ಆಗುತ್ತಾರೆ ಅನ್ನೋದು ಭ್ರಮೆ. ಇದೀಗ ವಿದೇಶಿಗನೊಬ್ಬನ ಒಳ್ಳೆತನ ನೆಟ್ಟಿಗರ ಹೃದಯ ಗೆದ್ದಿದೆ. ರಸ್ತೆ ಬದಿಯಲ್ಲಿ ಮಲಗಿದ್ದ ವೃದ್ಧ ವ್ಯಕ್ತಿಯೊಬ್ಬನಿಗೆ ವಿದೇಶಿಗ ಸಹಾಯ ಮಾಡಿದ್ದಾನೆ. ಈ ಹೃದಯಸ್ಪರ್ಶಿ ವಿಡಿಯೋ ಸದ್ಯ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಇದೇ ಕಣ್ರೀ ನಿಜವಾದ ಮಾನವೀಯತೆ; ರಸ್ತೆ ಬದಿಯಲ್ಲಿ ಮಲಗಿದ್ದ ವೃದ್ಧ ವ್ಯಕ್ತಿಗೆ ಸಹಾಯ ಮಾಡಿದ ವಿದೇಶಿಗ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Sep 15, 2026 | 11:12 AM

Share

ಇಂದಿನ ಕಾಲದಲ್ಲಿ ಮಾನವೀಯತೆ ಎನ್ನುವ ಪದಕ್ಕೆ ಬೆಲೆಯೇ ಇಲ್ಲ. ಎಲ್ಲರೂ ಕೂಡ ಸ್ವಾರ್ಥಿಗಳಾಗಿದ್ದು ಬೇರೆಯವರ ಕಷ್ಟ ಹಾಗೂ ನೋವಿಗೆ ಸ್ಪಂದಿಸುವವರನ್ನು ಕಾಣುವುದೇ ಕಡಿಮೆ. ಆದರೆ ಇದೀಗ ದಿಕ್ಕು ದೆಸೆಯಿಲ್ಲದೇ ರಸ್ತೆಯ ಮಲಗಿದ್ದ ವೃದ್ಧ ವ್ಯಕ್ತಿಗೆ ವಿದೇಶಿಗನೊಬ್ಬನು (foreigner) ಸಹಾಯ ಮಾಡಿದ್ದಾನೆ. ಹೌದು, ದಿಂಬು ಹಾಸಿಗೆ ತಂದು ಕೊಟ್ಟು ವಿದೇಶಿಗ ಮಾನವೀಯತೆ ಮೆರೆದಿದ್ದಾನೆ. ಈ ದೃಶ್ಯ ನೋಡಿ ನೆಟ್ಟಿಗರ ಕಣ್ಣು ಒದ್ದೆಯಾಗಿದೆ.

ವೃದ್ಧ ವ್ಯಕ್ತಿಗೆ ಸಹಾಯ ಮಾಡಿದ ವಿದೇಶಿಗ

ರ್ಯಾನ್‌ ಕಲಿಶ್‌ (Ryan Kalish) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ರಸ್ತೆ ಬದಿಯಲ್ಲಿ ವ್ಯಕ್ತಿಯೊಬ್ಬ ಮಲಗಿರುವುದನ್ನು ಕಾಣಬಹುದು. ಇದೇ ವೇಳೆ ವಿದೇಶಿಗನೊಬ್ಬ ಕೈಯಲ್ಲಿ ದಿಂಬು ಹಾಸಿಗೆಯೊಂದಿಗೆ ಆತನ ಬಳಿ ಬಂದಿದ್ದಾನೆ. ಮಲಗಿದ್ದ ವೃದ್ಧ ವ್ಯಕ್ತಿಗೆ ಎಬ್ಬಿಸಿದ್ದು, ಇದನ್ನು ನೋಡಿದ ವೃದ್ಧ ವ್ಯಕ್ತಿಯೂ ಕೈ ಮುಗಿದು ಕೃತಜ್ಞತೆ ಸಲ್ಲಿಸಿದ್ದಾನೆ. ಆ ಬಳಿಕ ವೃದ್ಧ ವ್ಯಕ್ತಿಗೆ ಆಹಾರ ತಂದು ಕೊಟ್ಟು  ಹಸಿವು ನೀಗಿಸಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಭಾರತೀಯರ ಬಗ್ಗೆ ಬೇಸರ ವ್ಯಕ್ತಪಡಿಸಿದ ವಿದೇಶಿಗ, ಕಾರಣ ತಿಳಿದ್ರೆ ನೀವು ಶಾಕ್ ಆಗ್ತೀರಾ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಒಳ್ಳೆಯ ಕೆಲಸ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನೊಬ್ಬರು, ನೀವು ನಿಜಕ್ಕೂ ಒಳ್ಳೆಯ ವ್ಯಕ್ತಿ ಎಂದು ಹೇಳಿದ್ದಾರೆ. ಮತ್ತೊಬ್ಬರು, ಈ ವ್ಯಕ್ತಿಯ ಹೃದಯ ಬಂಗಾರದಂತಹದ್ದು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಡೆಂಕಣಿಕೋಟೆಯಲ್ಲಿ 'ಕಾಂತಾರ ಗಣಪನ' ಭಾರಿ ಹವಾ
ಡೆಂಕಣಿಕೋಟೆಯಲ್ಲಿ 'ಕಾಂತಾರ ಗಣಪನ' ಭಾರಿ ಹವಾ
ಮಾತೆರೆಗ್​ಲ ಸೊಲ್ಮೆಲು: ಮಂಗಳೂರಿನಲ್ಲಿ ಸಂಪುಟ ಸಭೆ, ಡಿಕೆಶಿ ವಿಡಿಯೋ ಸಂದೇಶ
ಮಾತೆರೆಗ್​ಲ ಸೊಲ್ಮೆಲು: ಮಂಗಳೂರಿನಲ್ಲಿ ಸಂಪುಟ ಸಭೆ, ಡಿಕೆಶಿ ವಿಡಿಯೋ ಸಂದೇಶ
ಇಂದು ಗಜಕೇಸರಿ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಗಜಕೇಸರಿ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ನಕಲಿ ಮೆಡಿಸಿನ್‌ನಿಂದಲೇ ಕೋಟಿ ಕೋಟಿ ಸಂಪಾದನೆ
ನಕಲಿ ಮೆಡಿಸಿನ್‌ನಿಂದಲೇ ಕೋಟಿ ಕೋಟಿ ಸಂಪಾದನೆ
ಪಿಯೂಶ್​ ಗೋಯಲ್​ ಮನೆಯಲ್ಲಿ ನಡೆದ ಗಣೇಶ ಪೂಜೆಯಲ್ಲಿ ಪ್ರಧಾನಿ ಮೋದಿ ಭಾಗಿ
ಪಿಯೂಶ್​ ಗೋಯಲ್​ ಮನೆಯಲ್ಲಿ ನಡೆದ ಗಣೇಶ ಪೂಜೆಯಲ್ಲಿ ಪ್ರಧಾನಿ ಮೋದಿ ಭಾಗಿ
ಡಿಜೆಗೆ ನಿರಾಕರಣೆ: ರಸ್ತೆಯಲ್ಲೇ ಗಣೇಶ ಮೂರ್ತಿ ಇಟ್ಟು ಪ್ರತಿಭಟನೆ
ಡಿಜೆಗೆ ನಿರಾಕರಣೆ: ರಸ್ತೆಯಲ್ಲೇ ಗಣೇಶ ಮೂರ್ತಿ ಇಟ್ಟು ಪ್ರತಿಭಟನೆ
ಲಂಚ ಸ್ವೀಕರಿಸುತ್ತಿದ್ದಾಗ ಗುಬ್ಬಿ ಆರ್‌ಎಫ್‌ಒ ಲೋಕಾಯುಕ್ತ ಬಲೆಗೆ
ಲಂಚ ಸ್ವೀಕರಿಸುತ್ತಿದ್ದಾಗ ಗುಬ್ಬಿ ಆರ್‌ಎಫ್‌ಒ ಲೋಕಾಯುಕ್ತ ಬಲೆಗೆ
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ