AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಭಾರತೀಯ ಸ್ಲೀಪರ್ ಬಸ್‌ನಲ್ಲಿ ಪ್ರಯಾಣಿಸಿ ಅನುಭವ ಬಿಚ್ಚಿಟ್ಟ ವಿದೇಶಿಗ

ವಿದೇಶಿಗರು ಭಾರತಕ್ಕೆ ಭೇಟಿ ನೀಡಿ ಇಲ್ಲಿನ ಪ್ರತಿಯೊಂದು ಕ್ಷಣವನ್ನು ಖುಷಿಯಿಂದ ಕಳೆಯುತ್ತಾರೆ. ವಿದೇಶಿಗ ಕೋಲ್ಕತ್ತಾದಲ್ಲಿ ಸ್ಲೀಪರ್ ಬಸ್‌ನಲ್ಲಿ 12 ಗಂಟೆಗಳ ಕಾಲ ರಾತ್ರಿ ಪ್ರಯಾಣಿಸಿ ತಮ್ಮ ಅನುಭವ ಬಿಚ್ಚಿಟ್ಟಿದ್ದಾರೆ. ಈ ಪ್ರಯಾಣಕ್ಕೆ ಖರ್ಚು ಆದದ್ದು1,300 ರೂ ಮಾತ್ರ ಎಂದಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಭಾರತೀಯ ಸ್ಲೀಪರ್ ಬಸ್‌ನಲ್ಲಿ ಪ್ರಯಾಣಿಸಿ ಅನುಭವ ಬಿಚ್ಚಿಟ್ಟ ವಿದೇಶಿಗ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Dec 14, 2025 | 4:50 PM

Share

ವಿದೇಶಿಗರು (foreigner) ಭಾರತ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡುವುದು, ವಿವಿಧ ರುಚಿಕರ ಖಾದ್ಯಗಳನ್ನು ಸವಿಯುವುದು ಮಾತ್ರವಲ್ಲ, ಇಲ್ಲಿನ ರೈಲ್ವೆ ಹಾಗೂ ಬಸ್ ಪ್ರಯಾಣವನ್ನು ಎಂಜಾಯ್ ಮಾಡ್ತಾರೆ. ಇದಕ್ಕೆ ಸಾಕ್ಷಿಯಾಗಿದೆ ಈ ವಿಡಿಯೋ. ಕೆನಡಾದ ಕಂಟೆಂಟ್ ಕ್ರಿಯೇಟರ್ ಜಸ್ಟಿನ್ ಕೋಲ್ಕತ್ತಾದಲ್ಲಿ (Kolkata) ಸ್ಲೀಪರ್ ಬಸ್‌ನಲ್ಲಿ ಪ್ರಯಾಣಿಸಿದ್ದಾರೆ. ಈ ವೇಳೆಯುರೋಪಿಯನ್ ಬಸ್‌ಗಳಿಗೆ ಹೋಲಿಸಿದ್ರೆ ಭಾರತದ ಸ್ಲೀಪರ್ ಬಸ್ ಬೆಸ್ಟ್ ಎನ್ನುವುದು ಅವರಿಗೆ ತಿಳಿದಿದೆ. ತಮ್ಮ ಹೊಸ ಅನುಭವವನ್ನು ವಿಡಿಯೋದಲ್ಲಿ ಹಂಚಿಕೊಂಡಿದ್ದಾರೆ.

@side_quest_project ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಜಸ್ಟಿನ್ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಭಾರತೀಯ ಸ್ಲೀಪರ್ ಬಸ್‌ಗಳಲ್ಲಿ ಇದ್ದಷ್ಟು ಸೌಕರ್ಯ ಯುರೋಪಿಯನ್ ಬಸ್‌ಗಳಿಗೆ ಇಲ್ಲ ಎಂದು ಜಸ್ಟಿನ್ ವೀಡಿಯೊದ ಆರಂಭದಲ್ಲಿಯೇ ಹೇಳುವುದನ್ನು ನೋಡಬಹುದು. ಆ ನಂತರ ಸ್ಲೀಪರ್ ಬಸ್‌ಗಳಲ್ಲಿನ ವ್ಯವಸ್ಥೆಗಳನ್ನು ತೋರಿಸುತ್ತಾರೆ. ನೀವು ಸಂಪೂರ್ಣ ಹಾಸಿಗೆ, ತಿಂಡಿ ತಿನಿಸು, ನೀರಿನ ಬಾಟಲ್ ಹಾಗೂ ಬೆಡ್ ಶೀಟ್ ಪಡೆಯುತ್ತೀರಿ. ಸ್ಲೀಪರ್ ಬಸ್‌ಗಳ ಬಗ್ಗೆ ಅತ್ಯುತ್ತಮವಾದ ವಿಷಯವೆಂದರೆ ನೀವು ನಿದ್ರಿಸಲು ಮತ್ತು ನಿಮ್ಮ ಗಮ್ಯಸ್ಥಾನದಲ್ಲಿ ಎಚ್ಚರಗೊಳ್ಳಲು ಸಾಧ್ಯವಾಗುತ್ತದೆ. ಆದರೆ ಯುರೋಪಿಯನ್ ಬಸ್‌ಗಳು ಯಾವುದೇ ಮೂಲ ಸೌಕರ್ಯ ನೀಡಿಲ್ಲ ಎಂದು ಹೇಳುವುದನ್ನು ನೀವು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ ನೋಡಿ

View this post on Instagram

A post shared by Justin (@side_quest_project)

ಇದನ್ನೂ ಓದಿ:ಬೆಂಗಳೂರಿನ ಸಣ್ಣ ಅಂಗಡಿಯಲ್ಲಿ ಟೀ ಸವಿದು ಇಲ್ಲಿನ ಅತಿಥಿ ಸತ್ಕಾರಕ್ಕೆ ಫಿದಾ ಆದ ವಿದೇಶಿಗ

ಈ ವಿಡಿಯೋ ಲಕ್ಷಾಂತರ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಕೋಲ್ಕತ್ತಾದಿಂದ ಈ ಮಾರ್ಗದಲ್ಲಿ ಇನ್ಫೋಟೈನ್‌ಮೆಂಟ್ ವ್ಯವಸ್ಥೆಗಳೊಂದಿಗೆ ಬಸ್‌ಗಳಿವೆ ಮತ್ತು ಇದು ಅಕ್ಷರಶಃ ಕೇವಲ 15 ರಿಂದ 20 ಡಾಲರ್‌ಗಳಷ್ಟು ಮಾತ್ರ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಒಳ್ಳೆಯ ಬಜೆಟ್ ಇಟ್ಟುಕೊಂಡಿದ್ದಕ್ಕಾಗಿ ಧನ್ಯವಾದಗಳು ಎಂದಿದ್ದಾರೆ. ಮತ್ತೊಬ್ಬ ಬಳಕೆದಾರ ಹಳೆಯ ಮತ್ತು ತುಕ್ಕು ಹಿಡಿದ ಬಸ್ ಬದಲಿಗೆ ಪ್ರಯಾಣಕ್ಕಾಗಿ ಉತ್ತಮ ಬಸ್ ಆಯ್ಕೆ ಮಾಡಿ ಎಂದು ಸಲಹೆ ನೀಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ