AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಸದ ತೊಟ್ಟಿಯಿಂದ ಮೊಸಳೆ ಹಿಡಿದ ಮಾಜಿ ಯೋಧ; ವಿಡಿಯೋ ವೈರಲ್

ಮಾಜಿ ಯೋಧ ಯುಜೀನ್ ಬೊಝಿ ತನ್ನ ತೋಟದಲ್ಲಿ ಮೊಸಳೆಯಿಂದ ಪಾರಾಗಲು ಡಸ್ಟ್ ಬಿನ್ ಬಳಸುತ್ತಾರೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಜೀವ ರಕ್ಷಣೆಗಾಗಿ ಕಸದ ತೊಟ್ಟಿ ಸಹಾಯದಿಂದ 6 ಅಡಿ ಮೊಸಳೆಯನ್ನು ಸೆರೆಹಿಡಿದಿದ್ದಾರೆ.

ಕಸದ ತೊಟ್ಟಿಯಿಂದ ಮೊಸಳೆ ಹಿಡಿದ ಮಾಜಿ ಯೋಧ; ವಿಡಿಯೋ ವೈರಲ್
ಮೊಸಳೆಯನ್ನು ಹಿಡಿಯುತ್ತಿರುವ ದೃಶ್ಯ
TV9 Web
| Edited By: sandhya thejappa|

Updated on: Oct 03, 2021 | 11:07 AM

Share

ಮೊಸಳೆಯನ್ನು ದೂರದಿಂದ ನೋಡಿದರೆ ಸಾಕು ನಿಂತಲ್ಲೆ ಕೈ ಕಾಲುಗಳು ನಡುಗುವುದಕ್ಕೆ ಶುರು ಮಾಡುತ್ತವೆ. ಹೀಗಿರುವಾಗ ಫ್ಲೋರಿಡಾದಲ್ಲಿ ಮಾಜಿ ಯೋಧನೊಬ್ಬ ಮೊಸಳೆಯನ್ನು ಹಿಡಿಯುವ ಸಾಹಸಕ್ಕೆ ಕೈ ಹಾಕಿ ಯಶಸ್ವಿಯಾಗಿದ್ದಾರೆ. ಮೊಸಳೆಯನ್ನು ಹಿಡಿದು ಕೆರೆ ಬಳಿ ಬಿಟ್ಟಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಡಸ್ಟ್ ಬಿನ್ ಸಹಾಯದಿಂದ ಮಾಜಿ ಯೋಧ ಯುಜೀನ್ ಬೊಝಿ ಎಂಬುವವರು ಮೊಸಳೆಯನ್ನು ಸೆರೆಹಿಡಿದಿದ್ದಾರೆ. ಮೊಸಳೆಯನ್ನು ಸೆರೆಹಿಡಿಯಲು ಕೆಲ ಸಮಯ ಡಸ್ಟ್ ಬಿನ್ ಹಿಡಿದು ಪರದಾಡುತ್ತಾರೆ.

ಮಾಜಿ ಯೋಧ ಯುಜೀನ್ ಬೊಝಿ ತನ್ನ ತೋಟದಲ್ಲಿ ಮೊಸಳೆಯಿಂದ ಪಾರಾಗಲು ಡಸ್ಟ್ ಬಿನ್ ಬಳಸುತ್ತಾರೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಜೀವ ರಕ್ಷಣೆಗಾಗಿ ಕಸದ ತೊಟ್ಟಿ ಸಹಾಯದಿಂದ 6 ಅಡಿ ಮೊಸಳೆಯನ್ನು ಸೆರೆಹಿಡಿದಿದ್ದಾರೆ. ಡಸ್ಟ್ ಬಿನ್ ಹತ್ತಿರ ಇಟ್ಟಾಗ ಮೊಸಳೆ ಜೋರಾಗಿ ಸದ್ದು ಮಾಡಿ ಹಿಂದಕ್ಕೆ ಚಲಿಸುತ್ತದೆ. ಕೆಲ ಸೆಕೆಂಡುಗಳ ಕಾಲ ಕೋಪದಿಂದ ಒದ್ದಾಡುತ್ತದೆ. ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತದೆ. ಆದರೆ ಪ್ರಯತ್ನ ಬಿಡದ ಮಾಜಿ ಯೋಧ ಕೊನೆಗೂ ಕಸದ ತೊಟ್ಟಿ ಸಹಾಯದಿಂದ ಮೊಸಳೆಯನ್ನು ಹಿಡಿಯುತ್ತಾರೆ.

ಮೊಸಳೆ ಒಳಗೆ ಹೋಗುತ್ತಿದ್ದಂತೆ ಕಸದ ತೊಟ್ಟಿಯನ್ನು ನೇರವಾಗಿ ಇಡುತ್ತಾರೆ. ತಕ್ಷಣ ಡಸ್ಟ್ ಬಿನ್ ಮುಚ್ಚಳವನ್ನು ಮುಚ್ಚುತ್ತಾರೆ. ನಂತರ ಮೊಸಳೆಯನ್ನು ಬಿಡಲು ಕೆರೆಯ ಬಳಿ ಕಸದ ತೊಟ್ಟಿಯನ್ನು ತರುತ್ತಾರೆ. ಕಸದ ತೊಟ್ಟಿಯನ್ನು ಕೆಳಗೆ ಇಡುತ್ತಿದ್ದಂತೆ ಭಯದಿಂದ ಹಿಂದಕ್ಕೆ ಓಡಿ ಬರುತ್ತಾರೆ. ಈ ಎಲ್ಲಾ ದೃಶ್ಯಗಳನ್ನು ವ್ಯಕ್ತಿಯೊಬ್ಬರು ಮೊಬೈಲ್ನಲ್ಲಿ ರೆಕಾರ್ಡ್ ಮಾಡಿದ್ದಾರೆ.

ಇದನ್ನೂ ಓದಿ

Viral Video: ಎಟಿಎಂನಿಂದ ಹಣ ಪಡೆದು ಖುಷಿಯಿಂದ ಕುಣಿದು ಕುಪ್ಪಳಿಸಿದ ಹುಡುಗಿ; ಭರ್ಜರಿ ಡಾನ್ಸ್ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್

ಶ್ವೇತಾ ಚಂಗಪ್ಪ ಮನೆಯಲ್ಲಿ ರವಿಚಂದ್ರನ್​; ಮಜಾ ಟಾಕೀಸ್​ ರಾಣಿ ಮಗನ ಜತೆ ‘ಕ್ರೇಜಿ ಸ್ಟಾರ್​’ ವಿಡಿಯೋ ವೈರಲ್​

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್