AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಎಣ್ಣೆ ಬೇಕಾದ್ರೂ ಕೊಡ್ತೀನಿ ಆದ್ರೆ ನೀರ್​ ಮಾತ್ರ ಕೊಡಲ್ಲ, ಹಿಂಗನ್ನೋದಾ ಈ ಹುಡುಗಿ 

ಒಂದೆಡೆ ಕೊಳವೆ ಬಾವಿಗಳು, ಕೆರೆ, ಬಾವಿ  ಬತ್ತಿ ಹೋದರೆ, ಮತ್ತೊಂದೆಡೆ ಜನರು ಬಿಸಿಲ ಶಾಖಕ್ಕೆ ಬೇಸತ್ತು ಹೋಗಿದ್ದಾರೆ. ಇದರ ಜೊತೆ ಜೊತೆಗೆ ಕುಡಿಯುವ ನೀರಿಗೂ ಆಹಾಕಾರ ಶುರುವಾಗಿದೆ. ಇದೀಗ ಈ  ಕುಡಿಯೋ ನೀರಿನ ಸಮಸ್ಯೆಯ ಬಗೆಗಿನ ಹಾಸ್ಯಮಯ ವಿಡಿಯೋವೊಂದು ವೈರಲ್ ಆಗಿದ್ದು, ನೀರಿನ ಬಾಟಲ್ ಕೊಡಿ ಎಂದು ಕೇಳಿದ್ರೆ ಇಲ್ಲೊರ್ವ ಯುವತಿ ಎಣ್ಣೆ ಬೇಕಾದ್ರೂ ಕೊಡ್ತೀನಿ ಆದ್ರೆ ನೀರಿನ್ ಬಾಟಲ್ ಮಾತ್ರ ಕೊಡಲ್ಲ ಅಂದಿದ್ದಾಳೆ. ಈ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.  

Viral Video: ಎಣ್ಣೆ ಬೇಕಾದ್ರೂ ಕೊಡ್ತೀನಿ ಆದ್ರೆ ನೀರ್​ ಮಾತ್ರ ಕೊಡಲ್ಲ, ಹಿಂಗನ್ನೋದಾ ಈ ಹುಡುಗಿ 
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Apr 29, 2024 | 2:20 PM

Share

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈ ಬಾರಿ ನಿರೀಕ್ಷೆಗೂ ಮೀರಿದ ಬರಗಾಲ ಎದುರಾಗಿದೆ.  ನೀರಿನ ಸಮಸ್ಯೆ ತೀವ್ರಗೊಂಡಿದ್ದು,  ಬೇಸಿಗೆ ಶುರುವಾಗುತ್ತಿದ್ದಂತೆ ಕುಡಿಯುವ ನೀರಿಗೂ ಆಹಾಕಾರ ಶುರುವಾಗಿದೆ. ಬೋರ್ ವೆಲ್ ಗಳು, ಕೆರೆ, ಬಾವಿ, ನದಿಗಳು ಬರಿದಾಗುತ್ತಿದ್ದು, ಜನ ಜೀವ ಜಲಕ್ಕಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗುತ್ತಿದೆ. ಈ ನಡುವೆ ಇಲ್ಲೊಂದು  ಕುಡಿಯೋ ನೀರಿನ ಸಮಸ್ಯೆಯ ಬಗೆಗಿನ ಹಾಸ್ಯಮಯ ವಿಡಿಯೋವೊಂದು ವೈರಲ್ ಆಗಿದ್ದು, ನೀರ್ ಕೊಡಿ ಎಂದು ಕೇಳಿದ್ರೆ ಇಲ್ಲೊರ್ವ ಯುವತಿ ಎಣ್ಣೆ ಬೇಕಾದ್ರೂ ಕೊಡ್ತೀನಿ ಆದ್ರೆ ನೀರಿನ್ ಬಾಟಲ್ ಮಾತ್ರ ಕೊಡಲ್ಲ ಅಂದಿದ್ದಾಳೆ. ಈ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದ್ದು, ಯುವತಿಯ ಈ ಮಾತಿಗೆ ನೆಟ್ಟಿಗರು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ.

ಈ ವಿಡಿಯೋವನ್ನು RJ ತ್ರಿಶೂಲ್ (@rjthrishool) ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, “ನೀರ್ ಕೇಳಿದ್ರೆ ಹಿಂಗನ್ನೋದಾ?” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್ ವಿಡಿಯೋದಲ್ಲಿ ಆರ್.ಜೆ ತ್ರಿಶೂಲ್ ಅವರು ಬೆಂಗ್ಳೂರಲ್ಲಿ ಕುಡಿಯೋಕೆ ನೀರಿಲ್ಲ, ಹಾಗಾಗಿ ನಾನ್ ನಿಮ್ಮ ನೀರಿನ್ ಬಾಟಲ್ ತಗೆದುಕೊಳ್ಳಾ ಎಂದು ತಮ್ಮ ಸಹದ್ಯೋಗಿಯೊಂದಿಗೆ ಕೇಳುತ್ತಾರೆ. ಅದಕ್ಕೆ ಆ ಯುವತಿ  ಎಣ್ಣೆ ಬೇಕಾದ್ರೂ ಕುಡಿಸಿ ಬಿಡ್ತೀನಿ, ಆದ್ರೆ ವಾಟರ್ ಬಾಟಲ್ ಮಾತ್ರ ಕೊಡಲ್ಲ ಎಂದು ಹೇಳುತ್ತಿರುವ ಹಾಸ್ಯಮಯ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ; ಅಪಾರ್ಟ್ಮೆಂಟ್ ರೂಫ್ ಶೀಟ್ ಮೇಲೆ ಸಿಲುಕಿದ ಪುಟ್ಟ ಕಂದಮ್ಮ, ಪ್ರಾಣವನ್ನೇ ಪಣಕ್ಕಿಟ್ಟು ಮಗುವಿನ ರಕ್ಷಣೆಗೆ ಧಾವಿಸಿದ ನೆರೆಯ ನಿವಾಸಿಗಳು

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಕೆಲ ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 2 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಆಯ್ತ ಆಯ್ತು ನಮ್ಗೆ ಬೇಗ ಎಣ್ಣೆ ಕೊಡ್ಸಿ ಎಂದು ನೆಟ್ಟಿಗರು ತಮಾಷೆಯ ಕಾಮೆಂಟ್ಸ್ಗಳನ್ನು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ