AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಎಣ್ಣೆ ಬೇಕಾದ್ರೂ ಕೊಡ್ತೀನಿ ಆದ್ರೆ ನೀರ್​ ಮಾತ್ರ ಕೊಡಲ್ಲ, ಹಿಂಗನ್ನೋದಾ ಈ ಹುಡುಗಿ 

ಒಂದೆಡೆ ಕೊಳವೆ ಬಾವಿಗಳು, ಕೆರೆ, ಬಾವಿ  ಬತ್ತಿ ಹೋದರೆ, ಮತ್ತೊಂದೆಡೆ ಜನರು ಬಿಸಿಲ ಶಾಖಕ್ಕೆ ಬೇಸತ್ತು ಹೋಗಿದ್ದಾರೆ. ಇದರ ಜೊತೆ ಜೊತೆಗೆ ಕುಡಿಯುವ ನೀರಿಗೂ ಆಹಾಕಾರ ಶುರುವಾಗಿದೆ. ಇದೀಗ ಈ  ಕುಡಿಯೋ ನೀರಿನ ಸಮಸ್ಯೆಯ ಬಗೆಗಿನ ಹಾಸ್ಯಮಯ ವಿಡಿಯೋವೊಂದು ವೈರಲ್ ಆಗಿದ್ದು, ನೀರಿನ ಬಾಟಲ್ ಕೊಡಿ ಎಂದು ಕೇಳಿದ್ರೆ ಇಲ್ಲೊರ್ವ ಯುವತಿ ಎಣ್ಣೆ ಬೇಕಾದ್ರೂ ಕೊಡ್ತೀನಿ ಆದ್ರೆ ನೀರಿನ್ ಬಾಟಲ್ ಮಾತ್ರ ಕೊಡಲ್ಲ ಅಂದಿದ್ದಾಳೆ. ಈ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.  

Viral Video: ಎಣ್ಣೆ ಬೇಕಾದ್ರೂ ಕೊಡ್ತೀನಿ ಆದ್ರೆ ನೀರ್​ ಮಾತ್ರ ಕೊಡಲ್ಲ, ಹಿಂಗನ್ನೋದಾ ಈ ಹುಡುಗಿ 
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Apr 29, 2024 | 2:20 PM

Share

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈ ಬಾರಿ ನಿರೀಕ್ಷೆಗೂ ಮೀರಿದ ಬರಗಾಲ ಎದುರಾಗಿದೆ.  ನೀರಿನ ಸಮಸ್ಯೆ ತೀವ್ರಗೊಂಡಿದ್ದು,  ಬೇಸಿಗೆ ಶುರುವಾಗುತ್ತಿದ್ದಂತೆ ಕುಡಿಯುವ ನೀರಿಗೂ ಆಹಾಕಾರ ಶುರುವಾಗಿದೆ. ಬೋರ್ ವೆಲ್ ಗಳು, ಕೆರೆ, ಬಾವಿ, ನದಿಗಳು ಬರಿದಾಗುತ್ತಿದ್ದು, ಜನ ಜೀವ ಜಲಕ್ಕಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗುತ್ತಿದೆ. ಈ ನಡುವೆ ಇಲ್ಲೊಂದು  ಕುಡಿಯೋ ನೀರಿನ ಸಮಸ್ಯೆಯ ಬಗೆಗಿನ ಹಾಸ್ಯಮಯ ವಿಡಿಯೋವೊಂದು ವೈರಲ್ ಆಗಿದ್ದು, ನೀರ್ ಕೊಡಿ ಎಂದು ಕೇಳಿದ್ರೆ ಇಲ್ಲೊರ್ವ ಯುವತಿ ಎಣ್ಣೆ ಬೇಕಾದ್ರೂ ಕೊಡ್ತೀನಿ ಆದ್ರೆ ನೀರಿನ್ ಬಾಟಲ್ ಮಾತ್ರ ಕೊಡಲ್ಲ ಅಂದಿದ್ದಾಳೆ. ಈ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದ್ದು, ಯುವತಿಯ ಈ ಮಾತಿಗೆ ನೆಟ್ಟಿಗರು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ.

ಈ ವಿಡಿಯೋವನ್ನು RJ ತ್ರಿಶೂಲ್ (@rjthrishool) ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, “ನೀರ್ ಕೇಳಿದ್ರೆ ಹಿಂಗನ್ನೋದಾ?” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್ ವಿಡಿಯೋದಲ್ಲಿ ಆರ್.ಜೆ ತ್ರಿಶೂಲ್ ಅವರು ಬೆಂಗ್ಳೂರಲ್ಲಿ ಕುಡಿಯೋಕೆ ನೀರಿಲ್ಲ, ಹಾಗಾಗಿ ನಾನ್ ನಿಮ್ಮ ನೀರಿನ್ ಬಾಟಲ್ ತಗೆದುಕೊಳ್ಳಾ ಎಂದು ತಮ್ಮ ಸಹದ್ಯೋಗಿಯೊಂದಿಗೆ ಕೇಳುತ್ತಾರೆ. ಅದಕ್ಕೆ ಆ ಯುವತಿ  ಎಣ್ಣೆ ಬೇಕಾದ್ರೂ ಕುಡಿಸಿ ಬಿಡ್ತೀನಿ, ಆದ್ರೆ ವಾಟರ್ ಬಾಟಲ್ ಮಾತ್ರ ಕೊಡಲ್ಲ ಎಂದು ಹೇಳುತ್ತಿರುವ ಹಾಸ್ಯಮಯ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ; ಅಪಾರ್ಟ್ಮೆಂಟ್ ರೂಫ್ ಶೀಟ್ ಮೇಲೆ ಸಿಲುಕಿದ ಪುಟ್ಟ ಕಂದಮ್ಮ, ಪ್ರಾಣವನ್ನೇ ಪಣಕ್ಕಿಟ್ಟು ಮಗುವಿನ ರಕ್ಷಣೆಗೆ ಧಾವಿಸಿದ ನೆರೆಯ ನಿವಾಸಿಗಳು

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಕೆಲ ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 2 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಆಯ್ತ ಆಯ್ತು ನಮ್ಗೆ ಬೇಗ ಎಣ್ಣೆ ಕೊಡ್ಸಿ ಎಂದು ನೆಟ್ಟಿಗರು ತಮಾಷೆಯ ಕಾಮೆಂಟ್ಸ್ಗಳನ್ನು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ