AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಎಣ್ಣೆ ಬೇಕಾದ್ರೂ ಕೊಡ್ತೀನಿ ಆದ್ರೆ ನೀರ್​ ಮಾತ್ರ ಕೊಡಲ್ಲ, ಹಿಂಗನ್ನೋದಾ ಈ ಹುಡುಗಿ 

ಒಂದೆಡೆ ಕೊಳವೆ ಬಾವಿಗಳು, ಕೆರೆ, ಬಾವಿ  ಬತ್ತಿ ಹೋದರೆ, ಮತ್ತೊಂದೆಡೆ ಜನರು ಬಿಸಿಲ ಶಾಖಕ್ಕೆ ಬೇಸತ್ತು ಹೋಗಿದ್ದಾರೆ. ಇದರ ಜೊತೆ ಜೊತೆಗೆ ಕುಡಿಯುವ ನೀರಿಗೂ ಆಹಾಕಾರ ಶುರುವಾಗಿದೆ. ಇದೀಗ ಈ  ಕುಡಿಯೋ ನೀರಿನ ಸಮಸ್ಯೆಯ ಬಗೆಗಿನ ಹಾಸ್ಯಮಯ ವಿಡಿಯೋವೊಂದು ವೈರಲ್ ಆಗಿದ್ದು, ನೀರಿನ ಬಾಟಲ್ ಕೊಡಿ ಎಂದು ಕೇಳಿದ್ರೆ ಇಲ್ಲೊರ್ವ ಯುವತಿ ಎಣ್ಣೆ ಬೇಕಾದ್ರೂ ಕೊಡ್ತೀನಿ ಆದ್ರೆ ನೀರಿನ್ ಬಾಟಲ್ ಮಾತ್ರ ಕೊಡಲ್ಲ ಅಂದಿದ್ದಾಳೆ. ಈ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.  

Viral Video: ಎಣ್ಣೆ ಬೇಕಾದ್ರೂ ಕೊಡ್ತೀನಿ ಆದ್ರೆ ನೀರ್​ ಮಾತ್ರ ಕೊಡಲ್ಲ, ಹಿಂಗನ್ನೋದಾ ಈ ಹುಡುಗಿ 
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Apr 29, 2024 | 2:20 PM

Share

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈ ಬಾರಿ ನಿರೀಕ್ಷೆಗೂ ಮೀರಿದ ಬರಗಾಲ ಎದುರಾಗಿದೆ.  ನೀರಿನ ಸಮಸ್ಯೆ ತೀವ್ರಗೊಂಡಿದ್ದು,  ಬೇಸಿಗೆ ಶುರುವಾಗುತ್ತಿದ್ದಂತೆ ಕುಡಿಯುವ ನೀರಿಗೂ ಆಹಾಕಾರ ಶುರುವಾಗಿದೆ. ಬೋರ್ ವೆಲ್ ಗಳು, ಕೆರೆ, ಬಾವಿ, ನದಿಗಳು ಬರಿದಾಗುತ್ತಿದ್ದು, ಜನ ಜೀವ ಜಲಕ್ಕಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗುತ್ತಿದೆ. ಈ ನಡುವೆ ಇಲ್ಲೊಂದು  ಕುಡಿಯೋ ನೀರಿನ ಸಮಸ್ಯೆಯ ಬಗೆಗಿನ ಹಾಸ್ಯಮಯ ವಿಡಿಯೋವೊಂದು ವೈರಲ್ ಆಗಿದ್ದು, ನೀರ್ ಕೊಡಿ ಎಂದು ಕೇಳಿದ್ರೆ ಇಲ್ಲೊರ್ವ ಯುವತಿ ಎಣ್ಣೆ ಬೇಕಾದ್ರೂ ಕೊಡ್ತೀನಿ ಆದ್ರೆ ನೀರಿನ್ ಬಾಟಲ್ ಮಾತ್ರ ಕೊಡಲ್ಲ ಅಂದಿದ್ದಾಳೆ. ಈ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದ್ದು, ಯುವತಿಯ ಈ ಮಾತಿಗೆ ನೆಟ್ಟಿಗರು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ.

ಈ ವಿಡಿಯೋವನ್ನು RJ ತ್ರಿಶೂಲ್ (@rjthrishool) ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, “ನೀರ್ ಕೇಳಿದ್ರೆ ಹಿಂಗನ್ನೋದಾ?” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್ ವಿಡಿಯೋದಲ್ಲಿ ಆರ್.ಜೆ ತ್ರಿಶೂಲ್ ಅವರು ಬೆಂಗ್ಳೂರಲ್ಲಿ ಕುಡಿಯೋಕೆ ನೀರಿಲ್ಲ, ಹಾಗಾಗಿ ನಾನ್ ನಿಮ್ಮ ನೀರಿನ್ ಬಾಟಲ್ ತಗೆದುಕೊಳ್ಳಾ ಎಂದು ತಮ್ಮ ಸಹದ್ಯೋಗಿಯೊಂದಿಗೆ ಕೇಳುತ್ತಾರೆ. ಅದಕ್ಕೆ ಆ ಯುವತಿ  ಎಣ್ಣೆ ಬೇಕಾದ್ರೂ ಕುಡಿಸಿ ಬಿಡ್ತೀನಿ, ಆದ್ರೆ ವಾಟರ್ ಬಾಟಲ್ ಮಾತ್ರ ಕೊಡಲ್ಲ ಎಂದು ಹೇಳುತ್ತಿರುವ ಹಾಸ್ಯಮಯ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ; ಅಪಾರ್ಟ್ಮೆಂಟ್ ರೂಫ್ ಶೀಟ್ ಮೇಲೆ ಸಿಲುಕಿದ ಪುಟ್ಟ ಕಂದಮ್ಮ, ಪ್ರಾಣವನ್ನೇ ಪಣಕ್ಕಿಟ್ಟು ಮಗುವಿನ ರಕ್ಷಣೆಗೆ ಧಾವಿಸಿದ ನೆರೆಯ ನಿವಾಸಿಗಳು

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಕೆಲ ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 2 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಆಯ್ತ ಆಯ್ತು ನಮ್ಗೆ ಬೇಗ ಎಣ್ಣೆ ಕೊಡ್ಸಿ ಎಂದು ನೆಟ್ಟಿಗರು ತಮಾಷೆಯ ಕಾಮೆಂಟ್ಸ್ಗಳನ್ನು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು