AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಎಣ್ಣೆ ಬೇಕಾದ್ರೂ ಕೊಡ್ತೀನಿ ಆದ್ರೆ ನೀರ್​ ಮಾತ್ರ ಕೊಡಲ್ಲ, ಹಿಂಗನ್ನೋದಾ ಈ ಹುಡುಗಿ 

ಒಂದೆಡೆ ಕೊಳವೆ ಬಾವಿಗಳು, ಕೆರೆ, ಬಾವಿ  ಬತ್ತಿ ಹೋದರೆ, ಮತ್ತೊಂದೆಡೆ ಜನರು ಬಿಸಿಲ ಶಾಖಕ್ಕೆ ಬೇಸತ್ತು ಹೋಗಿದ್ದಾರೆ. ಇದರ ಜೊತೆ ಜೊತೆಗೆ ಕುಡಿಯುವ ನೀರಿಗೂ ಆಹಾಕಾರ ಶುರುವಾಗಿದೆ. ಇದೀಗ ಈ  ಕುಡಿಯೋ ನೀರಿನ ಸಮಸ್ಯೆಯ ಬಗೆಗಿನ ಹಾಸ್ಯಮಯ ವಿಡಿಯೋವೊಂದು ವೈರಲ್ ಆಗಿದ್ದು, ನೀರಿನ ಬಾಟಲ್ ಕೊಡಿ ಎಂದು ಕೇಳಿದ್ರೆ ಇಲ್ಲೊರ್ವ ಯುವತಿ ಎಣ್ಣೆ ಬೇಕಾದ್ರೂ ಕೊಡ್ತೀನಿ ಆದ್ರೆ ನೀರಿನ್ ಬಾಟಲ್ ಮಾತ್ರ ಕೊಡಲ್ಲ ಅಂದಿದ್ದಾಳೆ. ಈ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.  

Viral Video: ಎಣ್ಣೆ ಬೇಕಾದ್ರೂ ಕೊಡ್ತೀನಿ ಆದ್ರೆ ನೀರ್​ ಮಾತ್ರ ಕೊಡಲ್ಲ, ಹಿಂಗನ್ನೋದಾ ಈ ಹುಡುಗಿ 
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Apr 29, 2024 | 2:20 PM

Share

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈ ಬಾರಿ ನಿರೀಕ್ಷೆಗೂ ಮೀರಿದ ಬರಗಾಲ ಎದುರಾಗಿದೆ.  ನೀರಿನ ಸಮಸ್ಯೆ ತೀವ್ರಗೊಂಡಿದ್ದು,  ಬೇಸಿಗೆ ಶುರುವಾಗುತ್ತಿದ್ದಂತೆ ಕುಡಿಯುವ ನೀರಿಗೂ ಆಹಾಕಾರ ಶುರುವಾಗಿದೆ. ಬೋರ್ ವೆಲ್ ಗಳು, ಕೆರೆ, ಬಾವಿ, ನದಿಗಳು ಬರಿದಾಗುತ್ತಿದ್ದು, ಜನ ಜೀವ ಜಲಕ್ಕಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗುತ್ತಿದೆ. ಈ ನಡುವೆ ಇಲ್ಲೊಂದು  ಕುಡಿಯೋ ನೀರಿನ ಸಮಸ್ಯೆಯ ಬಗೆಗಿನ ಹಾಸ್ಯಮಯ ವಿಡಿಯೋವೊಂದು ವೈರಲ್ ಆಗಿದ್ದು, ನೀರ್ ಕೊಡಿ ಎಂದು ಕೇಳಿದ್ರೆ ಇಲ್ಲೊರ್ವ ಯುವತಿ ಎಣ್ಣೆ ಬೇಕಾದ್ರೂ ಕೊಡ್ತೀನಿ ಆದ್ರೆ ನೀರಿನ್ ಬಾಟಲ್ ಮಾತ್ರ ಕೊಡಲ್ಲ ಅಂದಿದ್ದಾಳೆ. ಈ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದ್ದು, ಯುವತಿಯ ಈ ಮಾತಿಗೆ ನೆಟ್ಟಿಗರು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ.

ಈ ವಿಡಿಯೋವನ್ನು RJ ತ್ರಿಶೂಲ್ (@rjthrishool) ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, “ನೀರ್ ಕೇಳಿದ್ರೆ ಹಿಂಗನ್ನೋದಾ?” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್ ವಿಡಿಯೋದಲ್ಲಿ ಆರ್.ಜೆ ತ್ರಿಶೂಲ್ ಅವರು ಬೆಂಗ್ಳೂರಲ್ಲಿ ಕುಡಿಯೋಕೆ ನೀರಿಲ್ಲ, ಹಾಗಾಗಿ ನಾನ್ ನಿಮ್ಮ ನೀರಿನ್ ಬಾಟಲ್ ತಗೆದುಕೊಳ್ಳಾ ಎಂದು ತಮ್ಮ ಸಹದ್ಯೋಗಿಯೊಂದಿಗೆ ಕೇಳುತ್ತಾರೆ. ಅದಕ್ಕೆ ಆ ಯುವತಿ  ಎಣ್ಣೆ ಬೇಕಾದ್ರೂ ಕುಡಿಸಿ ಬಿಡ್ತೀನಿ, ಆದ್ರೆ ವಾಟರ್ ಬಾಟಲ್ ಮಾತ್ರ ಕೊಡಲ್ಲ ಎಂದು ಹೇಳುತ್ತಿರುವ ಹಾಸ್ಯಮಯ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ; ಅಪಾರ್ಟ್ಮೆಂಟ್ ರೂಫ್ ಶೀಟ್ ಮೇಲೆ ಸಿಲುಕಿದ ಪುಟ್ಟ ಕಂದಮ್ಮ, ಪ್ರಾಣವನ್ನೇ ಪಣಕ್ಕಿಟ್ಟು ಮಗುವಿನ ರಕ್ಷಣೆಗೆ ಧಾವಿಸಿದ ನೆರೆಯ ನಿವಾಸಿಗಳು

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಕೆಲ ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 2 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಆಯ್ತ ಆಯ್ತು ನಮ್ಗೆ ಬೇಗ ಎಣ್ಣೆ ಕೊಡ್ಸಿ ಎಂದು ನೆಟ್ಟಿಗರು ತಮಾಷೆಯ ಕಾಮೆಂಟ್ಸ್ಗಳನ್ನು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ