AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮೆಟ್ರೋ ಸ್ಟೇಶನ್​ ಗೋಡೆ ಹತ್ತಿ, ಆತ್ಮಹತ್ಯೆಗೆ ಯತ್ನಿಸಿದ ಹುಡುಗಿಯನ್ನು ಉಪಾಯದಿಂದ ಕಾಪಾಡಿದ ಸಿಐಎಸ್​ಎಫ್ ಸಿಬ್ಬಂದಿ

ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳು, ರಕ್ಷಣಾ ಸಿಬ್ಬಂದಿ ಪ್ರತಿಯೊಬ್ಬರು ವಿಧವಿಧವಾಗಿ ಮನವಿ ಮಾಡಿದರೂ ಆಕೆ ಕೆಳಗೆ ಇಳಿಯಲಿಲ್ಲ.

Video: ಮೆಟ್ರೋ ಸ್ಟೇಶನ್​ ಗೋಡೆ ಹತ್ತಿ, ಆತ್ಮಹತ್ಯೆಗೆ ಯತ್ನಿಸಿದ ಹುಡುಗಿಯನ್ನು ಉಪಾಯದಿಂದ ಕಾಪಾಡಿದ ಸಿಐಎಸ್​ಎಫ್ ಸಿಬ್ಬಂದಿ
ದೆಹಲಿ ಮೆಟ್ರೋ ಸ್ಟೇಶನ್​ ಗೋಡೆ ಹತ್ತಿ ನಿಂತ ಯುವತಿ
TV9 Web
| Edited By: |

Updated on:Apr 14, 2022 | 2:16 PM

Share

ದೆಹಲಿಯ ಅಕ್ಷರಧಾಮ ಮೆಟ್ರೋ ಸ್ಟೇಶನ್​​ನಲ್ಲಿ ಇಂದು ಬೆಳಗ್ಗೆ ಒಂದು ಹೈಡ್ರಾಮಾ ನಡೆದಿದೆ. ಅದರ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಸಿಕ್ಕಾಪಟೆ ವೈರಲ್ ಆಗುತ್ತಿವೆ.  ಇಂದು ಮುಂಜಾನೆ 7.28ರ ಹೊತ್ತಿಗೆ ಹುಡುಗಿಯೊಬ್ಬಳು ಮೆಟ್ರೋ ಸ್ಟೇಶನ್​ನ ಎತ್ತರದ ಗೋಡೆಯನ್ನು ಹತ್ತಿ, ಅಲ್ಲಿಂದ ಹಾರಲು ಮುಂದಾಗುತ್ತಿದ್ದಳು. ಆದರೆ ಆಕೆಯ ಆತ್ಮಹತ್ಯೆ ಪ್ರಯತ್ನವನ್ನು ಕೇಂದ್ರೀಯ ಕೈಗಾರಿಕಾ ರಕ್ಷಣಾ ಪಡೆ (CISF) ಸಿಬ್ಬಂದಿ ತಡೆದಿದ್ದಾರೆ. ಯುವತಿಯನ್ನು ರಕ್ಷಿಸಿದ್ದಾರೆ. ಗೋಡೆ ಏರಿ ನಿಂತ ಹುಡುಗಿಯ ಬಳಿ, ಕೆಳಗೆ ಇಳಿಯುವಂತೆ ಸಿಐಎಸ್​ಎಫ್​ ಅಧಿಕಾರಿಯೊಬ್ಬರು ಮನವಿ ಮಾಡುತ್ತಾರೆ. ಆಕೆಯ ಮನವೊಲಿಸಲೂ ಪ್ರಯತ್ನಿಸುವುದನ್ನು ವಿಡಿಯೋದಲ್ಲಿ ನೋಡಬಹುದು.

ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳು, ರಕ್ಷಣಾ ಸಿಬ್ಬಂದಿ ಪ್ರತಿಯೊಬ್ಬರು ವಿಧವಿಧವಾಗಿ ಮನವಿ ಮಾಡಿದರೂ ಆಕೆ ಕೆಳಗೆ ಇಳಿಯಲಿಲ್ಲ. ಬಳಿಕ ಅವರಲ್ಲೊಬ್ಬ ಕಾನ್​ಸ್ಟೆಬಲ್​ ಯುವತಿಯೊಂದಿಗೆ ಮಾತನಾಡುತ್ತಲೇ ಇದ್ದು, ಇನ್ನಷ್ಟು ಜನ ಹುಡುಗಿ ನಿಂತಿರುವ ಜಾಗಕ್ಕೆ ಕಂಬಳಿ ಹಿಡಿದುಕೊಂಡು ಹೋಗಿ ನಿಂತಿದ್ದರು. ಆಕೆ ಆ ಕಂಬಳಿಯಲ್ಲೇ ಬಿದ್ದಿದ್ದೆ. ಕಾಲಿಗೆ ಏಟಾಗಿದ್ದು ಬಿಟ್ಟರೆ, ಇನ್ಯಾವುದೇ ಗಂಭೀರ ಸ್ವರೂಪದ ಸಮಸ್ಯೆ ಆಕೆಗೆ ಆಗಿಲ್ಲ.

ಇದನ್ನೂ ಓದಿ: ಅಮೆರಿಕದ ಹೆದ್ದಾರಿಯಲ್ಲಿ ಟ್ರಕ್​ಗೆ ಕಾರು ಡಿಕ್ಕಿ ಹೊಡೆದಿದ್ದರಿಂದ ಬೆಂಕಿ ಸ್ಫೋಟ; ವೈರಲ್ ವಿಡಿಯೋ ಇಲ್ಲಿದೆ

Published On - 2:16 pm, Thu, 14 April 22

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ