AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮೆಟ್ರೋ ಸ್ಟೇಶನ್​ ಗೋಡೆ ಹತ್ತಿ, ಆತ್ಮಹತ್ಯೆಗೆ ಯತ್ನಿಸಿದ ಹುಡುಗಿಯನ್ನು ಉಪಾಯದಿಂದ ಕಾಪಾಡಿದ ಸಿಐಎಸ್​ಎಫ್ ಸಿಬ್ಬಂದಿ

ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳು, ರಕ್ಷಣಾ ಸಿಬ್ಬಂದಿ ಪ್ರತಿಯೊಬ್ಬರು ವಿಧವಿಧವಾಗಿ ಮನವಿ ಮಾಡಿದರೂ ಆಕೆ ಕೆಳಗೆ ಇಳಿಯಲಿಲ್ಲ.

Video: ಮೆಟ್ರೋ ಸ್ಟೇಶನ್​ ಗೋಡೆ ಹತ್ತಿ, ಆತ್ಮಹತ್ಯೆಗೆ ಯತ್ನಿಸಿದ ಹುಡುಗಿಯನ್ನು ಉಪಾಯದಿಂದ ಕಾಪಾಡಿದ ಸಿಐಎಸ್​ಎಫ್ ಸಿಬ್ಬಂದಿ
ದೆಹಲಿ ಮೆಟ್ರೋ ಸ್ಟೇಶನ್​ ಗೋಡೆ ಹತ್ತಿ ನಿಂತ ಯುವತಿ
Follow us
TV9 Web
| Updated By: Lakshmi Hegde

Updated on:Apr 14, 2022 | 2:16 PM

ದೆಹಲಿಯ ಅಕ್ಷರಧಾಮ ಮೆಟ್ರೋ ಸ್ಟೇಶನ್​​ನಲ್ಲಿ ಇಂದು ಬೆಳಗ್ಗೆ ಒಂದು ಹೈಡ್ರಾಮಾ ನಡೆದಿದೆ. ಅದರ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಸಿಕ್ಕಾಪಟೆ ವೈರಲ್ ಆಗುತ್ತಿವೆ.  ಇಂದು ಮುಂಜಾನೆ 7.28ರ ಹೊತ್ತಿಗೆ ಹುಡುಗಿಯೊಬ್ಬಳು ಮೆಟ್ರೋ ಸ್ಟೇಶನ್​ನ ಎತ್ತರದ ಗೋಡೆಯನ್ನು ಹತ್ತಿ, ಅಲ್ಲಿಂದ ಹಾರಲು ಮುಂದಾಗುತ್ತಿದ್ದಳು. ಆದರೆ ಆಕೆಯ ಆತ್ಮಹತ್ಯೆ ಪ್ರಯತ್ನವನ್ನು ಕೇಂದ್ರೀಯ ಕೈಗಾರಿಕಾ ರಕ್ಷಣಾ ಪಡೆ (CISF) ಸಿಬ್ಬಂದಿ ತಡೆದಿದ್ದಾರೆ. ಯುವತಿಯನ್ನು ರಕ್ಷಿಸಿದ್ದಾರೆ. ಗೋಡೆ ಏರಿ ನಿಂತ ಹುಡುಗಿಯ ಬಳಿ, ಕೆಳಗೆ ಇಳಿಯುವಂತೆ ಸಿಐಎಸ್​ಎಫ್​ ಅಧಿಕಾರಿಯೊಬ್ಬರು ಮನವಿ ಮಾಡುತ್ತಾರೆ. ಆಕೆಯ ಮನವೊಲಿಸಲೂ ಪ್ರಯತ್ನಿಸುವುದನ್ನು ವಿಡಿಯೋದಲ್ಲಿ ನೋಡಬಹುದು.

ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳು, ರಕ್ಷಣಾ ಸಿಬ್ಬಂದಿ ಪ್ರತಿಯೊಬ್ಬರು ವಿಧವಿಧವಾಗಿ ಮನವಿ ಮಾಡಿದರೂ ಆಕೆ ಕೆಳಗೆ ಇಳಿಯಲಿಲ್ಲ. ಬಳಿಕ ಅವರಲ್ಲೊಬ್ಬ ಕಾನ್​ಸ್ಟೆಬಲ್​ ಯುವತಿಯೊಂದಿಗೆ ಮಾತನಾಡುತ್ತಲೇ ಇದ್ದು, ಇನ್ನಷ್ಟು ಜನ ಹುಡುಗಿ ನಿಂತಿರುವ ಜಾಗಕ್ಕೆ ಕಂಬಳಿ ಹಿಡಿದುಕೊಂಡು ಹೋಗಿ ನಿಂತಿದ್ದರು. ಆಕೆ ಆ ಕಂಬಳಿಯಲ್ಲೇ ಬಿದ್ದಿದ್ದೆ. ಕಾಲಿಗೆ ಏಟಾಗಿದ್ದು ಬಿಟ್ಟರೆ, ಇನ್ಯಾವುದೇ ಗಂಭೀರ ಸ್ವರೂಪದ ಸಮಸ್ಯೆ ಆಕೆಗೆ ಆಗಿಲ್ಲ.

ಇದನ್ನೂ ಓದಿ: ಅಮೆರಿಕದ ಹೆದ್ದಾರಿಯಲ್ಲಿ ಟ್ರಕ್​ಗೆ ಕಾರು ಡಿಕ್ಕಿ ಹೊಡೆದಿದ್ದರಿಂದ ಬೆಂಕಿ ಸ್ಫೋಟ; ವೈರಲ್ ವಿಡಿಯೋ ಇಲ್ಲಿದೆ

Published On - 2:16 pm, Thu, 14 April 22

ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ