AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಒಡಿಶಾ, ರಾತ್ರಿ ಇಡೀ 28 ಕಿ.ಮೀ​ ನಡೆದು ಮದುವೆ ಮಂಟಪಕ್ಕೆ ತಲುಪಿದ ವರ

ವರನ ಕುಟುಂಬವು ಮದುವೆಯ ಅದ್ಧೂರಿ ಮೆರವಣಿಗೆಗಾಗಿ 4 ಕಾರು ವ್ಯವಸ್ಥೆ ಮಾಡಿದ್ದರು, ಆದರೆ ವರ ಹಾಗೂ ಆತನ ಕುಟುಂಬ ಸುಮಾರೂ 28 ಕಿ.ಮೀ ಅಂದರೆ ರಾತ್ರೀ ಪೂರ್ತಿ ನಡೆದು ಮರುದಿನ ಮುಂಜಾನೆ ವಧುವಿನ ಮನೆಗೆ ತಲುಪಿದ್ದಾರೆ.

Viral News: ಒಡಿಶಾ, ರಾತ್ರಿ ಇಡೀ 28 ಕಿ.ಮೀ​ ನಡೆದು ಮದುವೆ ಮಂಟಪಕ್ಕೆ ತಲುಪಿದ ವರ
ಕಾಲ್ನಡಿಗೆಯಲ್ಲಿ 28 ಕಿ.ಮೀ ಕ್ರಮಿಸಿ, ವಧುವನ್ನು ವರಿಸಿದ
ಅಕ್ಷತಾ ವರ್ಕಾಡಿ
|

Updated on: Mar 18, 2023 | 11:01 AM

Share

ಮದುವೆ ಪ್ರತಿಯೊಬ್ಬರ ಜೀವನದಲ್ಲಿ ನಡೆಯುವ ಮರೆಯಲಾಗದ ವಿಶೇಷ ದಿನ. ಈ ದಿನ ವಿಶೇಷವಾಗಿರಬೇಕು, ಯಾವುದೇ ರೀತಿಯಲ್ಲಿ ಕುಂದು ಕೊರತೆಗಳು ಬರಬಾರದೆಂದು, ಒಂದೆರಡು ತಿಂಗಳುಗಳ ಹಿಂದಿನಿಂದಲೇ ಸಾಕಷ್ಟು ತಯಾರಿಗಳನ್ನು ನಡೆಸಲಾಗುತ್ತದೆ. ಆದೇ ರೀತಿ ಇಲ್ಲೊಂದು ಕುಟುಂಬವು ಸಕಲ ಸೌಕರ್ಯದೊಂದಿಗೆ ಮದುವೆ ನಡೆಸಲು ಮುಂದಾಗಿದೆ. ಜೊತೆಗೆ ವಧುವಿನ ಮನೆಯಲ್ಲಿ ಮದುವೆ ಆಯೋಜಿಸಿದ್ದರಿಂದ, ವರನ ಕುಟುಂಬವು ಮದುವೆಯ ಅದ್ಧೂರಿ ಮೆರವಣಿಗೆಗಾಗಿ 4 ಕಾರುಗಳನ್ನು ವ್ಯವಸ್ಥೆಗೊಳಿಸಲಾಗಿತ್ತು, ಆದರೆ ವರ ಹಾಗೂ ಆತನ ಕುಟುಂಬದವರು ಸುಮಾರೂ 28 ಕಿಲೋ ಮೀ ಅಂದರೆ ರಾತ್ರೀ ಪೂರ್ತಿ ನಡೆದು ಮರುದಿನ ಮುಂಜಾನೆ ವಧುವಿನ ಮನೆಗೆ ತಲುಪಿದ್ದಾರೆ. ಅಷ್ಟೆಲ್ಲಾ ವಾಹನಗಳ ವ್ಯವಸ್ಥೆ ಇದ್ದರು ಕೂಡ ನಡೆದುಕೊಂಡು ಯಾಕೆ ಬರಬೇಕಿತ್ತು? ಎಂಬುದು ಸಾಕಷ್ಟು ಜನರಲ್ಲಿ ಕಾಡುವ ಪ್ರಶ್ನೆ. ಹಾಗಿದ್ರೆ ಈ ಸ್ಟೋರಿ ಪೂರ್ತಿಯಾಗಿ ಓದಿ.

ಒಡಿಶಾದ ರಾಯಗಡ ಜಿಲ್ಲೆಯ ವಧುವಿನ ಗ್ರಾಮಕ್ಕೆ ಮದುವೆಗಾಗಿ ವರ ನರೇಶ್ ಪ್ರಾಸ್ಕಾ(22) ಮತ್ತು ಅವರ ಕುಟುಂಬ ಸದಸ್ಯರು 28 ಕಿಲೋಮೀಟರ್ ನಡೆದುಕೊಂಡು ಹೋಗಿದ್ದಾರೆ. ಕಲ್ಯಾಣಸಿಂಗ್‌ಪುರ ಬ್ಲಾಕ್‌ನ ಸುನಖಂಡಿ ಪಂಚಾಯಿತಿಯಿಂದ ಗುರುವಾರ ರಾತ್ರಿಯಿಡೀ ನಡೆದುಕೊಂಡು ದಿಬಳಪಾಡು ಗ್ರಾಮಕ್ಕೆ ಆಗಮಿಸಿ ಅಲ್ಲಿ ಶುಕ್ರವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಒಡಿಶಾದಲ್ಲಿ ಚಾಲಕರ ಮುಷ್ಕರ ನಡೆಯುತ್ತಿದ್ದ ಕಾರಣದಿಂದಾಗಿ ವಾಹನ ವ್ಯವಸ್ಥೆಗೆ ತಡೆಯಾಗಿದೆ. ವಿಮೆ, ಪಿಂಚಣಿ, ಕಲ್ಯಾಣ ಮಂಡಳಿ ರಚನೆ ಮತ್ತಿತರ ಸಮಾಜ ಕಲ್ಯಾಣ ಕ್ರಮಗಳಿಗೆ ಆಗ್ರಹಿಸಿ ಚಾಲಕ ಏಕತಾ ಮಹಾಸಂಘ ಬುಧವಾರದಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದು, ಇದುವೇ ಈ ವರನ ಕುಟುಂಬಕ್ಕೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಒಡಿಶಾದಲ್ಲಿ ವಾಣಿಜ್ಯ ವಾಹನಗಳ ಚಾಲಕರು ನಡೆಸುತ್ತಿದ್ದ ಮುಷ್ಕರವನ್ನು ಶುಕ್ರವಾರ 90 ದಿನಗಳ ಕಾಲ ತಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದಾಗಿ ರಾಜ್ಯ ಸರ್ಕಾರವು ಭರವಸೆ ನೀಡಿದ ನಂತರ ಸ್ಥಗಿತಗೊಳಿಸಲಾಯಿತು.

ಇದನ್ನೂ ಓದಿ: ಬಿಎಂಟಿಸಿಯ ಎಲೆಕ್ಟ್ರಿಕ್​ ಬಸ್​​ನ ವಿಶೇಷ ಸೌಲಭ್ಯ ಕಂಡು ಕಂಡಕ್ಟರ್​ಗೆ ಕೈಮುಗಿದ ವಿದೇಶಿ ಪ್ರಜೆ

ಮುಖ್ಯ ಕಾರ್ಯದರ್ಶಿ ಪಿಕೆ ಜೆನಾ ಮತ್ತು ಡಿಜಿಪಿ ಎಸ್‌ಕೆ ಬನ್ಸಾಕ್ ಅವರು ಮುಷ್ಕರವನ್ನು ಹಿಂಪಡೆಯುವಂತೆ ಮುಷ್ಕರ ನಿರತ ಚಾಲಕರಿಗೆ ಮನವಿ ಮಾಡಿದ ಕೆಲವೇ ಗಂಟೆಗಳ ನಂತರ ಚಾಲಕರ ಏಕತಾ ಮಹಾಸಂಘದ ಪ್ರಕಟಣೆ ಹೊರಬಿದ್ದಿದೆ. ಚಾಲಕರ ಮುಷ್ಕರದಿಂದಾಗಿ ಯಾವುದೇ ಸಾರಿಗೆ ಲಭ್ಯವಿಲ್ಲ. ನಾವು ಹಳ್ಳಿಗೆ ತಲುಪಲು ರಾತ್ರಿಯಿಡೀ ನಡೆದಿದ್ದೇವೆ. ನಮಗೆ ಬೇರೆ ದಾರಿ ಇರಲಿಲ್ಲ” ಎಂದು ವರನ ಕುಟುಂಬದ ಸದಸ್ಯರೊಬ್ಬರು ಮಧ್ಯಮಗಳಿಗೆ ತಿಳಿಸಿದ್ದಾರೆ.

ದ್ವಿಚಕ್ರ ವಾಹನಗಳಲ್ಲಿ ಮದುವೆಗೆ ಬೇಕಾದ ಸಾಮಗ್ರಿಗಳನ್ನು ಕಳುಹಿಸಲಾಗಿತ್ತು. ಎಂಟು ಮಹಿಳೆಯರು ಸೇರಿದಂತೆ ಕುಟುಂಬದ ಸುಮಾರು 30 ಸದಸ್ಯರು, ಸಂಬಂಧಿಕರು ಮತ್ತು ಸ್ನೇಹಿತರು ಕಾಲ್ನಡಿಗೆಯಲ್ಲಿ ವಧುವಿನ ಮನೆಗೆ ಹೋಗಲು ನಿರ್ಧರಿಸಿದೆವು. ಇದು ಸ್ಮರಣೀಯ ಅನುಭವ” ಎಂದು ವರ ನರೇಶ್ ಹೇಳಿದ್ದಾರೆ. ಮಹಿಳೆಯರು ಸೇರಿದಂತೆ ವರ ಮತ್ತು ಅವರ ಕುಟುಂಬ ಸದಸ್ಯರು ರಾತ್ರಿಯಲ್ಲಿ ನಡೆದುಕೊಂಡು ಹೋಗುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ