AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಇದು ಮೂಕ ಜೀವಿಗಳ ಶುದ್ಧ ಗೆಳೆತನ; ತನ್ನ ಸ್ನೇಹಿತ ಡಾಲಿಯೊಂದಿಗೆ ತುಂಟಾಟಕ್ಕೆ ಇಳಿದ ಆನೆ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ವಿಡಿಯೋಗಳು ನೆಟ್ಟಿಗರ ಹೃದಯ ಗೆಲ್ಲುತ್ತವೆ. ಆದರೆ ಇದೀಗ ಮುಗ್ಧ ಮನಸ್ಸಿನ ಶುದ್ಧ ಗೆಳೆತನಕ್ಕೆ ಸಾಕ್ಷಿಯಾಗಿದೆ ಈ ವಿಡಿಯೋ. ಹೌದು, ಆನೆಯೊಂದು ಶ್ವಾನಕ್ಕೆ ನೀರು ಎರಚುತ್ತಾ ತುಂಟಾಟ ಆಡುತ್ತಿದೆ. ಈ ಕ್ಲಿಪಿಂಗ್ಸ್‌ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಇದನ್ನು ಮೆಚ್ಚಿಕೊಂಡಿದ್ದಾರೆ.

Video: ಇದು ಮೂಕ ಜೀವಿಗಳ ಶುದ್ಧ ಗೆಳೆತನ; ತನ್ನ ಸ್ನೇಹಿತ ಡಾಲಿಯೊಂದಿಗೆ ತುಂಟಾಟಕ್ಕೆ ಇಳಿದ ಆನೆ
ವೈರಲ್ ವಿಡಿಯೋImage Credit source: Facebook
ಸಾಯಿನಂದಾ
|

Updated on:Feb 16, 2026 | 5:40 PM

Share

ಆನೆಗಳು (Elephants) ತುಂಟಾಟ ಮಾಡುವುದರಲ್ಲಿ ಎತ್ತಿದ ಕೈ. ಸೋಶಿಯಲ್ ಮೀಡಿಯಾದಲ್ಲಿ ಗಜರಾಜನ ಆಟ ತುಂಟಾಟದ ವಿಡಿಯೋಗಳನ್ನು ನೀವು ನೋಡಿರುತ್ತೀರಿ.  ಆದರೆ ಇಲ್ಲಿ ತನ್ನ ಸ್ನೇಹಿತನ ಜತೆಗೆ ಆನೆಯೊಂದು ತುಂಟಾಟವಾಡುವುದರಲ್ಲಿ ಬ್ಯುಸಿಯಾಗಿದೆ. ಗಜರಾಜನು ಸೊಂಡಿಲಿನಿಂದ ನೀರು ಎರಚುತ್ತಾ ಶ್ವಾನದೊಂದಿಗೆ ಆಟ ಆಡಿದೆ. ಮುಗ್ಧ ಜೀವಿಗಳ ಈ ಪರಿಶುದ್ಧ ಗೆಳೆತನಕ್ಕೆ ನೆಟಿಗರು ಫುಲ್‌ ಫಿದಾ ಆಗಿದ್ದಾರೆ.

ಮೈಸೂರುಕೆಎ09ವೈಲ್ಡ್‌ ಲೈಫ್‌ (MYSOREKA09WILDLIFE) ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ಮಾಣಿಕ್ಯ ತನ್ನ ಸ್ನೇಹಿತ ಡಾಲಿ ಜತೆಗೆ ಆಟ ಎಂದು ಶೀರ್ಷಿಕೆ ನೀಡಿದ್ದಾರೆ. ಈ ವಿಡಿಯೋದಲ್ಲಿ ಆನೆಯೊಂದು ತನ್ನ ಸೊಂಡಿಲಿನಿಂದ ಶ್ವಾನಕ್ಕೆ ನೀರು ಎರಚುತ್ತಾ ತುಂಟಾಟ ಆಡಿದೆ. ಗಜರಾಜನು ನೀರು ಎರಚುತ್ತಿದ್ದಂತೆ ಓಡಲು ಮುಂದಾಗಿರುವುದು ನೀವು ನೋಡಬಹುದು. ಅಲ್ಲೇ ಇದ್ದವರು ಈ ದೃಶ್ಯ ನೋಡಿ  ನಗುತ್ತಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ರಂಧ್ರದಲ್ಲಿ ಸಿಲುಕಿದ್ದ ಕಲ್ಲಂಗಡಿ ಹಣ್ಣನ್ನು ಬುದ್ಧಿವಂತಿಕೆಯಿಂದ ಹೊರ ತೆಗೆದ ಆನೆ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಮುದ್ದಾಗಿದೆ ಎಂದರೆ, ಇನ್ನೊಬ್ಬರು, ಮತ್ತೆ ಮತ್ತೆ ನೋಡಬೇಕೆನಿಸುವ ವಿಡಿಯೋ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರ ಸುಮಧುರ ಗೆಳೆತನ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:37 pm, Mon, 16 February 26

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು