AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡವನ್ನು ಬೆಳೆಸುವ ಅಗತ್ಯವಿಲ್ಲ, ಬಳಸಬೇಕು : ಆಂಧ್ರ ವ್ಯಕ್ತಿಗೆ ಕನ್ನಡದಲ್ಲೇ ವ್ಯಾಪಾರ ಮಾಡುವ ಟ್ರಿಕ್ಸ್ ಹೇಳಿಕೊಟ್ಟ ಕನ್ನಡಿಗ

ಕರ್ನಾಟಕದಲ್ಲಿ ಹಲವಾರು ಮಂದಿ ಪರಭಾಷಿಕರಿದ್ದಾರೆ. ಆದರೆ ಹೆಚ್ಚಿನವರು ಕನ್ನಡ ಕಲಿಯುವುದು ತುಂಬಾನೇ ಕಷ್ಟಕರ ಎಂದುಕೊಳ್ಳುತ್ತಾರೆ. ಕೆಲವರು ಕನ್ನಡ ಭಾಷೆ ಕಲಿಯುವ ಪ್ರಯತ್ನ ಮಾಡುವುದೇ ಇಲ್ಲ. ಇದೀಗ ಈ ವಿಡಿಯೋದಲ್ಲಿ ಕಡ್ಲೆ ಕಾಯಿ ಮಾರುತ್ತಿರುವ ಆಂಧ್ರ ವ್ಯಕ್ತಿಗೆ ಕನ್ನಡವನ್ನು ಬೆಳೆಸುವ ಅಗತ್ಯವಿಲ್ಲ, ಬಳಸಬೇಕು ಎಂದು ರಾಜೇಶ್ ಎನ್ನುವ ವ್ಯಕ್ತಿಯೂ ಕನ್ನಡ ಪಾಠ ಮಾಡಿದ್ದಾರೆ. ಈ ವಿಡಿಯೋಗೆ ನೆಟ್ಟಿಗರು ಕಾಮೆಂಟ್ ಗಳ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕನ್ನಡವನ್ನು ಬೆಳೆಸುವ ಅಗತ್ಯವಿಲ್ಲ, ಬಳಸಬೇಕು : ಆಂಧ್ರ ವ್ಯಕ್ತಿಗೆ ಕನ್ನಡದಲ್ಲೇ ವ್ಯಾಪಾರ ಮಾಡುವ ಟ್ರಿಕ್ಸ್ ಹೇಳಿಕೊಟ್ಟ ಕನ್ನಡಿಗ
ವೈರಲ್​ ವಿಡಿಯೋ
ಸಾಯಿನಂದಾ
| Edited By: |

Updated on: Mar 08, 2025 | 2:09 PM

Share

ನಾವು ಯಾವ ನೆಲದಲ್ಲಿ ನೆಲೆಸಿರುತ್ತೇವೋ ಅಲ್ಲಿನ ಭಾಷೆ ಕಲಿಯುವುದು, ಅಲ್ಲಿನ ಭಾಷೆಗೆ ಗೌರವ ಕೊಡುವುದು ಮುಖ್ಯ. ಆದರೆ ಕರ್ನಾಟಕದಲ್ಲಿ ನೆಲೆಸಿರುವ ಅದೆಷ್ಟೋ ಪರಭಾಷಿಕರು ಕನ್ನಡವನ್ನು ಮಾತನಾಡುತ್ತಿಲ್ಲ, ಕನ್ನಡವನ್ನು ಕಲಿಯುವ ಪ್ರಯತ್ನವನ್ನು ಮಾಡುತ್ತಲೇ ಇದೆ. ಇಷ್ಟು ಮಾತ್ರವಲ್ಲದೇ ಕೆಲವು ಕನ್ನಡದವರೇ ಕನ್ನಡವನ್ನು ಮಾತನಾಡಲು ಹಿಂದೆ ಮುಂದೆ ನೋಡುತ್ತಾರೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಕರ್ನಾಟಕದಲ್ಲಿ ಕಡ್ಲೆ ಕಾಯಿ ವ್ಯಾಪಾರಿಯಾಗಿರುವ ಆಂಧ್ರ ವ್ಯಕ್ತಿಗೆ ರಾಜೇಶ್ ಎನ್ನುವ ಕನ್ನಡಿಗ ಕನ್ನಡ ಪಾಠ ಮಾಡಿದ್ದು, ಇದಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Vinodkumark205 ಹೆಸರಿನ ಖಾತೆಯಲ್ಲಿ ಶೇರ್ ಮಾಡಿಕೊಳ್ಳಲಾದ ವಿಡಿಯೋದಲ್ಲಿ ಕನ್ನಡ ಬೆಳೆಸುವ ಅಗತ್ಯವಿಲ್ಲ, ಬಳಸಬೇಕು ಆಂಧ್ರ ವ್ಯಕ್ತಿಗೆ ಕನ್ನಡ ಪಾಠ ಮಾಡಿದ ರಾಜೇಶ್ ಎಂಬುವ ಕನ್ನಡಿಗ ಎಂದು ಶೀರ್ಷಿಕೆಯಲ್ಲಿ ಬರೆಯಲಾಗಿದೆ. ಈ ವಿಡಿಯೋದಲ್ಲಿ ಆಂಧ್ರ ಮೂಲಕ ವ್ಯಕ್ತಿಯೊಬ್ಬರು ತಳ್ಳುಗಾಡಿಯಲ್ಲಿ ವ್ಯಾಪಾರ ಮಾಡುತ್ತಿರುವುದನ್ನು ನೋಡಬಹುದು. ಆದರೆ ಮತ್ತೊಂದು ವಿಶೇಷವೆಂದರೆ ಮೈಕ್ ನಲ್ಲಿ ಕಡ್ಲೆಕಾಯಿ ಕಡ್ಲೆ ಕಾಯಿ ತಕೊಳ್ರಣ್ಣ ಬಡವರ ಬಾದಾಮಿ ತಿನ್ರಣ್ಣ. ದಾನವ ಧರ್ಮವಾ ಮಾಡಿಲ್ಲ ಅಂದ್ರು ನಮ್ಮತ್ರ ವ್ಯಾಪಾರ ಮಾಡ್ರಣ್ಣ, ಪುಣ್ಯವ ಬರುತ್ತೆ ನೋಡ್ರಣ್ಣ. ನಮ್ಮತ್ರ ವ್ಯಾಪಾರ ಮಾಡ್ರಣ್ಣ, ಒಳ್ಳೆಯ ಪುಣ್ಯವಾ ಬರುತ್ತೆ ನೋಡ್ರಣ್ಣ. ಒಳ್ಳೆಯ ಪುಣ್ಯ ಬಂದ್ರಣ್ಣ ನಿಮ್ಮ ಮಕ್ಕಳಿಗೆ ಅದೇ ಕಾಯುತ್ತಣ್ಣ ಎನ್ನುವ ಹಾಡು ಪ್ಲೇ ಆಗುತ್ತಿರುವುದನ್ನು ನೋಡಬಹುದು.

ಇದನ್ನೂ ಓದಿ
Image
ವಿಡಿಯೋ ಕಾಲ್‌ ಮೂಲಕ ಪಾಕ್ ಸ್ನೇಹಿತೆಯ ಮದುವೆಯಲ್ಲಿ ಭಾಗಿಯಾದ ಭಾರತೀಯ ಯುವತಿ
Image
ಕ್ಯಾಬೇಜ್ ಗೋಬಿಗೆ 50 ರೂ., ಹೂಕೋಸು ಗೋಬಿಗೆ 70 ರೂ
Image
ಮರಿಮೊಮ್ಮಗಳ ಜೊತೆ ಮಕ್ಕಳಂತೆ ಆಟವಾಡಿದ ಮುತ್ತಾತ
Image
UPPSC ಪರೀಕ್ಷೆಯಲ್ಲಿ 6 ನೇ ರ‍್ಯಾಂಕ್‌ ಗಳಿಸಿ ಡಿಎಸ್ಪಿ ಆದ ಸುಂದರಿ ಇವ್ರೇ ನ

ಇದನ್ನೂ ಓದಿ: ಮನೆ ಮಾಲೀಕನನ್ನು ಕಳೆದುಕೊಂಡ ದುಃಖದಲ್ಲಿ ಕಣ್ಣೀರು ಸುರಿಸುತ್ತಿರುವ ಶ್ವಾನ, ಯಾರು ಸಮಾಧಾನ ಮಾಡಿದ್ರು ಈ ಶ್ವಾನದ ದುಃಖ ನಿಲ್ತಿಲ್ಲ

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ವಿಡಿಯೋ ಹಂಚಿಕೊಂಡಿರುವ ವ್ಯಕ್ತಿಯೂ ಕಡ್ಲೆ ಕಾಯಿ ವ್ಯಾಪಾರಿಯ ಬಳಿ ಮಾತನಾಡಿದ್ದು, ಆಂಧ್ರ ವ್ಯಕ್ತಿಯೂ ಎಂದು ತಿಳಿದಿದೆ ಸ್ವಲ್ಪ ಸ್ವಲ್ಪ ಕನ್ನಡ ಬರುತ್ತದೆ ಎಂದಿದ್ದಾರೆ. ಈ ಐಡಿಯಾ ಯಾರದು ಎಂದು ವ್ಯಾಪಾರಿ ಬಳಿ ಕೇಳಿದಾಗ ರಾಜೇಶ್ ಎನ್ನುವ ವ್ಯಕ್ತಿಯೂ ಈ ಹಾಡನ್ನು ಹಾಡಿಸಿದ್ದಾರೆದ್ದಾರೆ ಎಂದು ವ್ಯಾಪಾರಿ ಹೇಳಿಕೊಂಡಿದ್ದಾರೆ. ಈ ವಿಡಿಯೋವನ್ನು ಹಂಚಿಕೊಂಡಿರುವ ವ್ಯಕ್ತಿಯೂ ಈ ಬಗ್ಗೆ ವಿವರಿಸುತ್ತಾ ರಾಜೇಶ್ ಎನ್ನುವ ವ್ಯಕ್ತಿಯೂ ಈ ರೀತಿ ಕನ್ನಡದಲ್ಲಿ ವ್ಯಾಪಾರ ಮಾಡಿ ಒಳ್ಳೆಯ ವ್ಯಾಪಾರ ಚೆನ್ನಾಗಿ ಆಗುತ್ತದೆ ಕನ್ನಡ ಬೆಳೆಸುವ ಪ್ರಯತ್ನ ಮಾಡಿದ್ದಾರೆ ನಿಜಕ್ಕೂ ಅವರಿಗೆ ಧನ್ಯವಾದ ಎಂದು ತಿಳಿಸಿದ್ದಾರೆ. ಈ ವಿಡಿಯೋ ಇಪ್ಪತ್ತು ಸಾವಿರಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು, ಲೈಕ್ಸ್ ಗಳು ಬಂದಿವೆ. ಈ ವಿಡಿಯೋಗೆ ಬಳಕೆದಾರರೊಬ್ಬರು, ಈ ವ್ಯಕ್ತಿಯ ಕನ್ನಡಾಭಿಮಾನವನ್ನು ಮೆಚ್ಚಿಕೊಂಡಿದ್ದಾರೆ. ಇನ್ನೊಬ್ಬರು, ‘ಪರಭಾಷಿಕರೆಲ್ಲರೂ ಕನ್ನಡ ಕಲಿಯುವಂತಾಗಲಿ ಎಂದಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?