AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಕ್ಯಾನ್ಸರ್​​ ಗೆದ್ದು ಬಂದ ಪೊಲೀಸ್​​​ ಇಲಾಖೆಯ ಶ್ವಾನ ಸಿಮ್ಮಿ

ಪಂಜಾಬ್​​ನ ಪೊಲೀಸ್​​​​​ ಶ್ವಾನ ಪಡೆಯ ಲ್ಯಾಬ್ರಡಾರ್ ತಳಿಯ ಸಿಮ್ಮಿ ಹೆಸರಿನ ಶ್ವಾನ ಸಾಕಷ್ಟು ದಿನಗಳಿಂದ ಕ್ಯಾನ್ಸರ್​​​​​ನಿಂದ ಬಳಲುತ್ತಿತ್ತು. ಅದೃಷ್ಟವಶಾತ್‌ ಸಿಮ್ಮಿ ಕ್ಯಾನ್ಸರ್ ಮಹಾಮಾರಿಯಿಂದ​​ ಗೆದ್ದು ಬಂದಿದ್ದು, ಮತ್ತೇ ತನ್ನ ಕರ್ತವ್ಯಕ್ಕೆ ಮರಳಿದೆ.

Viral News: ಕ್ಯಾನ್ಸರ್​​ ಗೆದ್ದು ಬಂದ ಪೊಲೀಸ್​​​ ಇಲಾಖೆಯ ಶ್ವಾನ ಸಿಮ್ಮಿ
labrador named Simmy beat cancerImage Credit source: Twitter
ಅಕ್ಷತಾ ವರ್ಕಾಡಿ
|

Updated on:May 19, 2023 | 6:57 PM

Share

ಕ್ಯಾನ್ಸರ್​​​ ಕಾಯಿಲೆಯಲ್ಲಿ ಬದುಕುಳಿಯುವ ಸಂಖ್ಯೆ ತೀರಾ ಕಡಿಮೆ. ಆದರೆ ಇಲ್ಲೊಂದು ಶ್ವಾನ ಕ್ಯಾನ್ಸರ್​​​ನಿಂದ ಗೆದ್ದು, ಗುಣಮುಖವಾಗಿ ಮತ್ತೇ ತನ್ನ ಕರ್ತವ್ಯಕ್ಕೆ ಹಾಜರಾಗಿದೆ. ಪಂಜಾಬ್​​ನ ಪೊಲೀಸ್​​​​​ ಶ್ವಾನ ಪಡೆಯ ಲ್ಯಾಬ್ರಡಾರ್ ತಳಿಯ ಸಿಮ್ಮಿ ಹೆಸರಿನ ಶ್ವಾನ ಸಾಕಷ್ಟು ದಿನಗಳಿಂದ ಕ್ಯಾನ್ಸರ್​​​​​ನಿಂದ ಬಳಲುತ್ತಿತ್ತು. ಕ್ಯಾನ್ಸರ್​​​ ಎಂದಾಕ್ಷಣ ಎದೆ ನಡುಕ ಹುಟ್ಟಿಸುವುದಂತೂ ಖಂಡಿತಾ. ಯಾಕೆಂದರೆ ಈ ಕಾಯಿಲೆಯಿಂದ ಬಳಲುತ್ತಿದ್ದರೆ, ಬದುಕುಳಿಯುವ ಸಂಖ್ಯೆ ತೀರಾ ಕಡಿಮೆ. ಆದರೆ ಸಿಮ್ಮಿಗೆ ಪಂಜಾಬ್​​ನ ಪೊಲೀಸ್ ತಂಡದಿಂದ ಸರಿಯಾದ ಸಮಯಕ್ಕೆ ವೈದ್ಯರನ್ನು ನೇಮಿಸಿ ಚಿಕಿತ್ಸೆಯನ್ನು ನೀಡಲಾಗಿದೆ. ಅದೃಷ್ಟವಶಾತ್‌ ಸಿಮ್ಮಿ ಕ್ಯಾನ್ಸರ್ ಮಹಾಮಾರಿಯಿಂದ​​ ಗೆದ್ದು ಬಂದಿದ್ದು, ಮತ್ತೇ ತನ್ನ ಕರ್ತವ್ಯಕ್ಕೆ ಮರಳಿದೆ.

ಕ್ಯಾನ್ಸರ್​​ನಿಂದ ಗುಣಮುಖವಾದ ಬಳಿಕ ಪೊಲೀಸ್ ಅಧಿಕಾರಿಯೊಂದಿಗೆ ಸಿಮ್ಮಿ ಶ್ವಾನ ಓಡಾಡುತ್ತಿರುವ ವಿಡಿಯೋವನ್ನು ಸುದ್ದಿ ಸಂಸ್ಥೆ ಎಎನ್‌ಐ ಟ್ವಿಟರ್​​​ ಖಾತೆಯಲ್ಲಿ ಶೇರ್​​ ಮಾಡಲಾಗಿದೆ. ಈ ವಿಡಿಯೋ ಇದೀಗಾ ಎಲ್ಲೆಡೆ ಭಾರೀ ವೈರಲ್​​ ಆಗಿದೆ. ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ‘ಸಾಮಾಜಿಕ ಜಾಲತಾಣದಲ್ಲಿ ನಿಮ್ಮ ಅಸ್ತಿತ್ವಕ್ಕಾಗಿ ಮುಗ್ಧಜೀವಗಳನ್ನು ಬಳಸಿಕೊಂಡಿದ್ದೀರಿ!’

ಎಎನ್‌ಐ ಟ್ವೀಟ್​​ಗೆ ರೀಟ್ವೀಟ್​​ ಮಾಡಿದ ಫರೀದ್‌ ಕೋಟ್‌ ನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಹರ್ಜಿತ್‌ ಸಿಂಗ್‌, “ಸಿಮ್ಮಿ ದೀರ್ಘಕಾಲದಿಂದ ಕ್ಯಾನ್ಸರ್ ನಿಂದ ಬಳಲುತ್ತಿತ್ತು. ಈಗ ಇದರ ಆರೋಗ್ಯ ಸುಧಾರಿಸಿದೆ. ಮುಂದೆ ಪಂಜಾಬ್​​ನ ಪೊಲೀಸ್ ಇಲಾಖೆಯ ವಿರೋಧಿ ವಿಧ್ವಂಸಕ ತಪಾಸಣೆ ಸಹಾಯ ಮಾಡಲಿದ್ದು, ಮತ್ತೆ ತನ್ನ ಕರ್ತವ್ಯವದಲ್ಲಿ ತೊಡಗಿಸಿಕೊಳ್ಳಲಿದೆ” ಎಂದು ಹೇಳಿದ್ದಾರೆ. ಈ ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ವಿಡಿಯೋ ಸಾಕಷ್ಟು ಲೈಕ್​​,ಕಾಮೆಂಟ್​​ ಹಾಗೂ ಶೇರ್​​ಗಳನ್ನು ಪಡೆದುಕೊಂಡಿದೆ. ಇದಲ್ಲದೇ ಶ್ವಾನವನ್ನು ಆರೋಗ್ಯವಾಗಿ ನೋಡಿಕೊಳ್ಳಿ ಎಂದು ಸಾಕಷ್ಟು ನೆಟ್ಟಿಗರು​​​ ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Published On - 6:57 pm, Fri, 19 May 23

Follow Us
ಆನ್​​ಲೈನ್ ಔಷಧ ಮಾರಾಟದ ಅಕ್ರಮಕ್ಕೆ ತಡೆ, ಹೊಸ ನಿಯಮ ಜಾರಿಗೆ ಚಿಂತನೆ
ಆನ್​​ಲೈನ್ ಔಷಧ ಮಾರಾಟದ ಅಕ್ರಮಕ್ಕೆ ತಡೆ, ಹೊಸ ನಿಯಮ ಜಾರಿಗೆ ಚಿಂತನೆ
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ಬೆಂಗಳೂರು: ಗಣೇಶೋತ್ಸವ ಸಂಭ್ರಮದಲ್ಲಿ ಇರುವವರಿಗೆ ಪೊಲೀಸರ ಶಾಕ್
ಬೆಂಗಳೂರು: ಗಣೇಶೋತ್ಸವ ಸಂಭ್ರಮದಲ್ಲಿ ಇರುವವರಿಗೆ ಪೊಲೀಸರ ಶಾಕ್