AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಕರ್ ಮುಡಿಗೇರಿಸಿಕೊಂಡ ರಘುವನ್ನು ನೋಡಲು ತೆಪ್ಪಕಾಡು ಆನೆ ಶಿಬಿರದಲ್ಲಿ ಜನಸಾಗರ

ತಮಿಳುನಾಡಿನ ಮುದುಮಲೈ ಅರಣ್ಯದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಚಿತ್ರೀಕರಿಸಲಾಗಿದ್ದು, ರಘು ಆನೆಯನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಮುದುಮಲೈ ತೆಪ್ಪಕಾಡು ಆನೆ ಶಿಬಿರಕ್ಕೆ ಬರುತ್ತಿದ್ದಾರೆ.

ಆಸ್ಕರ್ ಮುಡಿಗೇರಿಸಿಕೊಂಡ ರಘುವನ್ನು ನೋಡಲು ತೆಪ್ಪಕಾಡು ಆನೆ ಶಿಬಿರದಲ್ಲಿ ಜನಸಾಗರ
ಎಲಿಫೆಂಟ್ ವಿಸ್ಪರರ್ಸ್
ಅಕ್ಷತಾ ವರ್ಕಾಡಿ
|

Updated on:Mar 14, 2023 | 12:03 PM

Share

ಎಲಿಫೆಂಟ್ ವಿಸ್ಪರರ್ಸ್(Elephant Whisperers) ಭಾರತದ ಮೊದಲ ಆಸ್ಕರ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಸಾಕ್ಷ್ಯಚಿತ್ರವಾಗಿದೆ. 95ನೇ ಅಕಾಡೆಮಿ ಪ್ರಶಸ್ತಿಯಲ್ಲಿ ‘ಸ್ಟ್ರೇಂಜರ್ ಅಟ್ ದಿ ಗೇಟ್’ ಮತ್ತು ‘ಹೌ ಡು ಯು ಮೆಷರ್ ಎ ಇಯರ್’ ನಂತಹ ಸಾಕ್ಷ್ಯಚಿತ್ರಗಳನ್ನು ಹಿಂದಿಕ್ಕಿ ಅತ್ಯುತ್ತಮ ಸಾಕ್ಷ್ಯಚಿತ್ರ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಇದೀಗಾ ಈ ಸಾಕ್ಷ್ಯಚಿತ್ರದಲ್ಲಿ ಸಾಕಷ್ಟು ಜನರ ಮನಗೆದ್ದ ಮರಿ ಆನೆ ರಘು ಭಾರೀ ಸುದ್ದಿಯಲ್ಲಿದೆ. ತಮಿಳುನಾಡಿನ ಮುದುಮಲೈ ಅರಣ್ಯದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಚಿತ್ರೀಕರಿಸಲಾಗಿದ್ದು, ರಘು ಆನೆಯನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಮುದುಮಲೈ ತೆಪ್ಪಕಾಡುಗೆ ಬರುವುದನ್ನು ಕಾಣಬಹುದು.

ತಮಿಳುನಾಡಿನ ಮುದುಮಲೈ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಎರಡು ಅನಾಥ ಮರಿ ಆನೆಗಳನ್ನು ದತ್ತು ತೆಗೆದುಕೊಳ್ಳುವ ಸುತ್ತ ಸುತ್ತುವ  ಭಾವನಾತ್ಮಕ ಕಥೆ ಇದಾಗಿದ್ದು, ಪ್ರಕೃತಿಯೊಂದಿಗಿನ ಬುಡಕಟ್ಟು ಜನರ ಸಾಮರಸ್ಯವನ್ನೂ ತಿಳಿಸುತ್ತದೆ. ‘ದಿ ಎಲಿಫೆಂಟ್​ ವಿಸ್ಪರರ್ಸ್​’ ಕಿರುಚಿತ್ರ ನೆಟ್​ಫ್ಲಿಕ್ಸ್​ನಲ್ಲಿ ತಮಿಳು ಭಾಷೆಯಲ್ಲಿದ್ದು, ಈಗ ಮತ್ತೇ ಜನಪ್ರಿಯತೆಯನ್ನು ಪಡೆದುಕೊಂಡಿದೆ. ಈ ಕಿರುಚಿತ್ರದಲ್ಲಿ ಆನೆಗಳ ಸಂರಕ್ಷಣೆ ಹಾಗೂ ಪ್ರಾಣಿಗಳ ರಕ್ಷಣೆ ಕುರಿತ ಸಂದೇಶವೂ ಇದೆ.

ಇದನ್ನೂ ಓದಿ: ಭಾರತಕ್ಕೆ ಆಸ್ಕರ್​: ‘ದಿ ಎಲಿಫೆಂಟ್​ ವಿಸ್ಪರರ್ಸ್​’ಗೆ ಅಕಾಡೆಮಿ ಪ್ರಶಸ್ತಿ

ಸುದ್ದಿ ಸಂಸ್ಥೆ ANI ವರದಿಯ ಪ್ರಕಾರ ಎರಡು ದಿನಗಳಿಂದ ದೇಶ ವಿದೇಶಗಳಿಂದ ಈಗಾಗಲೇ ಸಾಕಷ್ಟು ಪ್ರವಾಸಿಗಳು ರಘು ಆನೆಯನ್ನು ನೋಡಲು ಬಹಳ ಉತ್ಸುಕತೆಯಿಂದ ಬರುತ್ತಿದ್ದಾರೆ ಎಂದು ತಿಳಿಸಿದೆ. ಇದೊಂದು ಉತ್ತಮ ಕ್ಷಣ. ಇಲ್ಲಿಗೆ ಬಂದಿರುವುದು ಸಂತಸ ತಂದಿದೆ. ಆಸ್ಕರ್ ಪ್ರಶಸ್ತಿ ಗೆದ್ದಿರುವುದು ನನಗೆ ಸಂತಸ ಮತ್ತು ಉತ್ಸುಕತೆಯನ್ನುಂಟು ಮಾಡಿದೆ” ಎಂದು ಪ್ರವಾಸಿಗರೊಬ್ಬರು ಸುದ್ದಿ ಮಾಧ್ಯಮದೊಂದಿಗೆ ಖುಷಿಯನ್ನು ವ್ಯಕ್ತ ಪಡಿಸಿದ್ದಾರೆ. ಮತ್ತೊಬ್ಬ ವಿದೇಶಿ ಪ್ರವಾಸಿಗ ನಾನು ಲಂಡನ್‌ನಿಂದ ಬಂದಿದ್ದೇನೆ, ಇಲ್ಲಿಗೆ ಭೇಟಿ ನೀಡಿ ಆಸ್ಕರ್ ಪ್ರಶಸ್ತಿಯನ್ನು ಗೆದ್ದ ಆನೆಮರಿಗಳನ್ನು ನೋಡಿದ ನಾವೇ ಅದೃಷ್ಟಶಾಲಿಗಳು ಎಂದು ಹೇಳಿಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 12:00 pm, Tue, 14 March 23

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ