AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೊಳದ ದಡದಲ್ಲಿ ಅಡ್ಡಾಡುತ್ತಿದ್ದಾಗ ಆಯತಪ್ಪಿ ನೀರಿಗೆ ಬಿದ್ದ ಸಿಂಹ; ಆಮೇಲೇನಾಯ್ತು? ವಿಡಿಯೊ ನೋಡಿ

ಸಿಂಹವೊಂದು ಕೊಳವೊಂದರ ಸಮೀಪ ಅಡ್ಡಾಡುತ್ತಿದ್ದಾಗ ಇದ್ದಕ್ಕಿದ್ದಂತೆ ನೀರಿಗೆ ಬಿದ್ದಿದೆ. ನಂತರ ಏನಾಯಿತು? ಜೊತೆಗಿದ್ದ ಸಿಂಹ ಮಾಡಿದ್ದೇನು? ವಿಡಿಯೊ ನೋಡಿ.

Viral Video: ಕೊಳದ ದಡದಲ್ಲಿ ಅಡ್ಡಾಡುತ್ತಿದ್ದಾಗ ಆಯತಪ್ಪಿ ನೀರಿಗೆ ಬಿದ್ದ ಸಿಂಹ; ಆಮೇಲೇನಾಯ್ತು? ವಿಡಿಯೊ ನೋಡಿ
ವಿಡಿಯೊದಿಂದ ಸೆರೆಹಿಡಿಯಲಾದ ಚಿತ್ರ
TV9 Web
| Updated By: shivaprasad.hs|

Updated on: Oct 03, 2021 | 3:05 PM

Share

ಅಂತರ್ಜಾಲದಲ್ಲಿ ಪ್ರಾಣಿ ಪ್ರಪಂಚದ ವಿಡಿಯೊಗಳು ಸಾಕಷ್ಟು ವೈರಲ್ ಆಗುತ್ತವೆ. ಅದರಲ್ಲೂ ಸಾಮಾನ್ಯವಾಗಿ ಮನುಷ್ಯನಿಗೆ ಕಾಣ ಸಿಗದ ಜೀವಿಗಳ ಕುರಿತು ಎಲ್ಲರಿಗೂ ಆಸಕ್ತಿ ಹೆಚ್ಚು. ಆದ್ದರಿಂದಲೇ ಸಿಂಹ, ಚಿರತೆ, ಹುಲಿ ಮೊದಲಾದ ಪ್ರಾಣಿಗಳು ನೆಟ್ಟಿಗರ ಕುತೂಹಲ ಕೆರಳಿಸುತ್ತವೆ. ಅದರಲ್ಲೂ ಅಂತಹ ಪ್ರಾಣಿಗಳ ತಮಾಷೆಯ ವಿಡಿಯೊವೆಂದರೆ ಎಲ್ಲರಿಗೂ ಅಚ್ಚುಮೆಚ್ಚು. ಅದನ್ನು ನೋಡಿ, ನಕ್ಕು ಹಗುರಾಗುತ್ತಾರೆ. ಅಂತದ್ದೇ ಒಂದು ವಿಡಿಯೊ ಇಲ್ಲಿದೆ. ಕಾಡಿನ ರಾಜ ಸಿಂಹ, ಆಯತಪ್ಪಿ ನೀರಿಗೆ ಬಿದ್ದರೆ ಏನಾಗುತ್ತದೆ? ಇಲ್ಲಿದೆ ನೋಡಿ.

ಈ ವಿಡಿಯೊ ಜರ್ಮನ್ ಮೃಗಾಲಯದ್ದು ಎನ್ನಲಾಗಿದ್ದು, ಎರಡು ಸಿಂಹಗಳು ಅವುಗಳಿಗೆ ಈಜಲೆಂದು ನಿರ್ಮಿಸಿರುವ ಕೊಳದ ದಡದಲ್ಲಿ ಓಡಾಡುತ್ತಿರುತ್ತವೆ. ಆದರೆ ಎಲ್ಲೋ ನೋಡುತ್ತಾ ತೆರಳುತ್ತಿದ್ದ ಒಂದು ಸಿಂಹ, ಆಯ ತಪ್ಪಿ ನೀರಿನೊಳಗೆ ಬೀಳುತ್ತದೆ. ಅದು ಬಿದ್ದದ್ದು ಮತ್ತೊಂದು ಸಿಂಹಕ್ಕೆ ಗಾಬರಿಯಾಗುತ್ತದೆ. ನೀರಿನತ್ತ ಬಗ್ಗಿ ಏನಾಯಿತು ಎಂದು ನೋಡುತ್ತದೆ. ನಂತರ ನೀರಿನಲ್ಲಿದ್ದ ಸಿಂಹ ಈಜುತ್ತಾ ಬಂದು ದಡ ಸೇರಿದೆ. ಸಿಂಹದ ಈ ವಿಡಿಯೊ ಸದ್ಯ ವೈರಲ್ ಆಗಿದೆ.

ವಿಡಿಯೊ ಇಲ್ಲಿದೆ:

ಈ ವಿಡಿಯೊವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ. ಈಗಾಗಲೇ ಸಾವಿರಾರು ಜನರು ಇದನ್ನು ವೀಕ್ಷಿಸಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಕೆಲವರು ಸಿಂಹ ಭಯಗೊಳ್ಳುವುದನ್ನು ತಾನು ನೋಡಿಯೇ ಇರಲಿಲ್ಲ. ಆದರೆ ದಡದಲ್ಲಿ ನಿಂತಿದ್ದ ಸಿಂಹದ ನಡೆ ಆಶ್ಚರ್ಯ ಉಂಟುಮಾಡಿದೆ ಎಂದಿದ್ದಾರೆ. ಮತ್ತಷ್ಟು ಜನ ಇದು ತಮಾಷೆಯಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಹಲವರು ಇದು ಮೃಗಾಲಯಗಳಲ್ಲಿ ಕಂಡುಬರುವ ಅತ್ಯಂತ ಅಪರೂಪದ ದೃಶ್ಯ ಎಂದು ಬರೆದಿದ್ದಾರೆ.

ಇದನ್ನೂ ಓದಿ:

ಶಿವಮೊಗ್ಗ: ಕಡಜದ ಹುಳು ಕಚ್ಚಿ ಇಬ್ಬರು ಮೃತ

ನೆಲಮಂಗಲ: ಎಟಿಎಂನಲ್ಲಿದ್ದ ಹಣ ಕಳ್ಳತನಕ್ಕೆ ಯತ್ನಿಸಿ ವಿಫಲ ಪ್ರಯತ್ನ, ಪಾರ್ಕ್ ನಲ್ಲಿ ಗಾಂಜಾ ಮಾರುತ್ತಿದ್ದ ವ್ಯಕ್ತಿ ಅರೆಸ್ಟ್

ಅಫ್ಘಾನ್​-ತಜಿಕಿಸ್ತಾನ್​ ಗಡಿಯಲ್ಲಿ ಆತ್ಮಾಹುತಿ ಬಾಂಬರ್​ಗಳ ಬೆಟಾಲಿಯನ್​ ನಿಯೋಜಿಸುವುದಾಗಿ ಹೇಳಿದ ತಾಲಿಬಾನ್​

ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು