Viral Video: ಕೊಳದ ದಡದಲ್ಲಿ ಅಡ್ಡಾಡುತ್ತಿದ್ದಾಗ ಆಯತಪ್ಪಿ ನೀರಿಗೆ ಬಿದ್ದ ಸಿಂಹ; ಆಮೇಲೇನಾಯ್ತು? ವಿಡಿಯೊ ನೋಡಿ

ಸಿಂಹವೊಂದು ಕೊಳವೊಂದರ ಸಮೀಪ ಅಡ್ಡಾಡುತ್ತಿದ್ದಾಗ ಇದ್ದಕ್ಕಿದ್ದಂತೆ ನೀರಿಗೆ ಬಿದ್ದಿದೆ. ನಂತರ ಏನಾಯಿತು? ಜೊತೆಗಿದ್ದ ಸಿಂಹ ಮಾಡಿದ್ದೇನು? ವಿಡಿಯೊ ನೋಡಿ.

Viral Video: ಕೊಳದ ದಡದಲ್ಲಿ ಅಡ್ಡಾಡುತ್ತಿದ್ದಾಗ ಆಯತಪ್ಪಿ ನೀರಿಗೆ ಬಿದ್ದ ಸಿಂಹ; ಆಮೇಲೇನಾಯ್ತು? ವಿಡಿಯೊ ನೋಡಿ
ವಿಡಿಯೊದಿಂದ ಸೆರೆಹಿಡಿಯಲಾದ ಚಿತ್ರ
Follow us
| Updated By: shivaprasad.hs

Updated on: Oct 03, 2021 | 3:05 PM

ಅಂತರ್ಜಾಲದಲ್ಲಿ ಪ್ರಾಣಿ ಪ್ರಪಂಚದ ವಿಡಿಯೊಗಳು ಸಾಕಷ್ಟು ವೈರಲ್ ಆಗುತ್ತವೆ. ಅದರಲ್ಲೂ ಸಾಮಾನ್ಯವಾಗಿ ಮನುಷ್ಯನಿಗೆ ಕಾಣ ಸಿಗದ ಜೀವಿಗಳ ಕುರಿತು ಎಲ್ಲರಿಗೂ ಆಸಕ್ತಿ ಹೆಚ್ಚು. ಆದ್ದರಿಂದಲೇ ಸಿಂಹ, ಚಿರತೆ, ಹುಲಿ ಮೊದಲಾದ ಪ್ರಾಣಿಗಳು ನೆಟ್ಟಿಗರ ಕುತೂಹಲ ಕೆರಳಿಸುತ್ತವೆ. ಅದರಲ್ಲೂ ಅಂತಹ ಪ್ರಾಣಿಗಳ ತಮಾಷೆಯ ವಿಡಿಯೊವೆಂದರೆ ಎಲ್ಲರಿಗೂ ಅಚ್ಚುಮೆಚ್ಚು. ಅದನ್ನು ನೋಡಿ, ನಕ್ಕು ಹಗುರಾಗುತ್ತಾರೆ. ಅಂತದ್ದೇ ಒಂದು ವಿಡಿಯೊ ಇಲ್ಲಿದೆ. ಕಾಡಿನ ರಾಜ ಸಿಂಹ, ಆಯತಪ್ಪಿ ನೀರಿಗೆ ಬಿದ್ದರೆ ಏನಾಗುತ್ತದೆ? ಇಲ್ಲಿದೆ ನೋಡಿ.

ಈ ವಿಡಿಯೊ ಜರ್ಮನ್ ಮೃಗಾಲಯದ್ದು ಎನ್ನಲಾಗಿದ್ದು, ಎರಡು ಸಿಂಹಗಳು ಅವುಗಳಿಗೆ ಈಜಲೆಂದು ನಿರ್ಮಿಸಿರುವ ಕೊಳದ ದಡದಲ್ಲಿ ಓಡಾಡುತ್ತಿರುತ್ತವೆ. ಆದರೆ ಎಲ್ಲೋ ನೋಡುತ್ತಾ ತೆರಳುತ್ತಿದ್ದ ಒಂದು ಸಿಂಹ, ಆಯ ತಪ್ಪಿ ನೀರಿನೊಳಗೆ ಬೀಳುತ್ತದೆ. ಅದು ಬಿದ್ದದ್ದು ಮತ್ತೊಂದು ಸಿಂಹಕ್ಕೆ ಗಾಬರಿಯಾಗುತ್ತದೆ. ನೀರಿನತ್ತ ಬಗ್ಗಿ ಏನಾಯಿತು ಎಂದು ನೋಡುತ್ತದೆ. ನಂತರ ನೀರಿನಲ್ಲಿದ್ದ ಸಿಂಹ ಈಜುತ್ತಾ ಬಂದು ದಡ ಸೇರಿದೆ. ಸಿಂಹದ ಈ ವಿಡಿಯೊ ಸದ್ಯ ವೈರಲ್ ಆಗಿದೆ.

ವಿಡಿಯೊ ಇಲ್ಲಿದೆ:

ಈ ವಿಡಿಯೊವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ. ಈಗಾಗಲೇ ಸಾವಿರಾರು ಜನರು ಇದನ್ನು ವೀಕ್ಷಿಸಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಕೆಲವರು ಸಿಂಹ ಭಯಗೊಳ್ಳುವುದನ್ನು ತಾನು ನೋಡಿಯೇ ಇರಲಿಲ್ಲ. ಆದರೆ ದಡದಲ್ಲಿ ನಿಂತಿದ್ದ ಸಿಂಹದ ನಡೆ ಆಶ್ಚರ್ಯ ಉಂಟುಮಾಡಿದೆ ಎಂದಿದ್ದಾರೆ. ಮತ್ತಷ್ಟು ಜನ ಇದು ತಮಾಷೆಯಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಹಲವರು ಇದು ಮೃಗಾಲಯಗಳಲ್ಲಿ ಕಂಡುಬರುವ ಅತ್ಯಂತ ಅಪರೂಪದ ದೃಶ್ಯ ಎಂದು ಬರೆದಿದ್ದಾರೆ.

ಇದನ್ನೂ ಓದಿ:

ಶಿವಮೊಗ್ಗ: ಕಡಜದ ಹುಳು ಕಚ್ಚಿ ಇಬ್ಬರು ಮೃತ

ನೆಲಮಂಗಲ: ಎಟಿಎಂನಲ್ಲಿದ್ದ ಹಣ ಕಳ್ಳತನಕ್ಕೆ ಯತ್ನಿಸಿ ವಿಫಲ ಪ್ರಯತ್ನ, ಪಾರ್ಕ್ ನಲ್ಲಿ ಗಾಂಜಾ ಮಾರುತ್ತಿದ್ದ ವ್ಯಕ್ತಿ ಅರೆಸ್ಟ್

ಅಫ್ಘಾನ್​-ತಜಿಕಿಸ್ತಾನ್​ ಗಡಿಯಲ್ಲಿ ಆತ್ಮಾಹುತಿ ಬಾಂಬರ್​ಗಳ ಬೆಟಾಲಿಯನ್​ ನಿಯೋಜಿಸುವುದಾಗಿ ಹೇಳಿದ ತಾಲಿಬಾನ್​

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ