AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಟೀಚರ್ ಬಳಿ ಅಮ್ಮನ ಬಗ್ಗೆ ಕಂಪ್ಲೇಂಟ್ ಮಾಡಿದ ಪುಟಾಣಿ, ಕಾರಣ ಇದೇ ನೋಡಿ

ಪುಟಾಣಿಗಳೇ ಹಾಗೆ, ಶಾಲೆಯಲ್ಲಿ ನಡೆದ ಎಲ್ಲದ್ದನ್ನು ತನ್ನ ಅಮ್ಮನ ಮುಂದೆ ವರದಿ ಒಪ್ಪಿಸುತ್ತಾರೆ. ಅಷ್ಟೇ ಅಲ್ಲದೇ, ಮನೆಯ ವಿಚಾರವನ್ನು ಟೀಚರ್ ಮುಂದೆ ಹೇಳುವುದಿದೆ. ಆದರೆ ಈ ಪುಟಾಣಿ ಅಮ್ಮನ ವಿರುದ್ಧವೇ ತನ್ನ ಟೀಚರ್ ಬಳಿ ದೂರು ನೀಡಿದೆ. ಈ ಕ್ಯೂಟ್ ವಿಡಿಯೋ ವೈರಲ್ ಆಗಿದ್ದು ನೆಟ್ಟಿಗರು ಪುಟಾಣಿಯ ಮುಗ್ಧತೆಗೆ ಕಳೆದು ಹೋಗಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಟೀಚರ್ ಬಳಿ ಅಮ್ಮನ ಬಗ್ಗೆ ಕಂಪ್ಲೇಂಟ್ ಮಾಡಿದ ಪುಟಾಣಿ, ಕಾರಣ ಇದೇ ನೋಡಿ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: May 15, 2026 | 3:48 PM

Share

ಪುಟಾಣಿ ಮಕ್ಕಳು (little kids) ಪ್ರಾರಂಭದ ದಿನಗಳಲ್ಲಿ ಶಾಲೆಗೆ ಹೋಗಲ್ಲ ಎಂದು ಹಠ ಹಿಡಿಯುವುದಿದೆ. ಕೆಲವೊಮ್ಮೆ ಟೀಚರ್ ಹೋಮ್ ವರ್ಕ್ ಮಾಡಿಸ್ತಾರೆ, ಹೊಡೀತಾರೆ ಹೀಗೆ ನಾನಾ ನೆಪಗಳನ್ನು ಹೇಳಿ ಶಾಲೆಗೆ ಹೋಗುವುದರಿಂದ ತಪ್ಪಿಸಿಕೊಳ್ಳುವುದಿದೆ. ಒಮ್ಮೆ ಸ್ಕೂಲ್ ಮೆಟ್ಟಿಲೇರಿದರೆ ಸಾಕು, ಈ ಮಕ್ಕಳಿಗೆ ಟೀಚರ್ ಫೇವರೆಟ್‌ ಆಗಿ ಬಿಡುತ್ತಾರೆ. ಆದರೆ ಪ್ರಿ ಸ್ಕೂಲ್‌ಗೆ ಹೋಗುವ ಪುಟಾಣಿಯೂ ಶಿಕ್ಷಕಿ ಮುಂದೆ ಅಳುತ್ತಾ ಅಮ್ಮ ನನಗೆ ಹೊಡೆದರು ಎಂದು ಕಂಪ್ಲೇಂಟ್‌ ಮಾಡಿದೆ. ಪುಟಾಣಿಯ ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ತಮ್ಮ ಬಾಲ್ಯದ ದಿನವನ್ನು ಮೆಲುಕು ಹಾಕಿಕೊಂಡಿದ್ದಾರೆ.

Vijetha womanpreneur ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಪುಟಾಣಿ ತಾಯಿ ವಿರುದ್ಧ ಟೀಚರ್ ಬಳಿ ದೂರು ಹೇಳುವುದನ್ನು ಕಾಣಬಹುದು. ಟೀಚರ್ ಬಳಿ ಮೂರುವರೇ ವರ್ಷದ ಪುಟಾಣಿಯೂ ತನ್ನ ಕೈಗೆ ಅಮ್ಮ ಹೊಡೆದ್ರು ಬಿಕ್ಕಿ ಬಿಕ್ಕಿ ಅಳುತ್ತಾ ಹೇಳಿದೆ. ಹೀಗೆನ್ನುತ್ತಿದ್ದಂತೆ ಟೇಚರ್‌ ಕೈ ಹಿಡಿದು ನೋಡುತ್ತಾ ಪುಟಾಣಿಯನ್ನು ಸಮಾಧಾನ ಪಡಿಸಿದ್ದಾರೆ. ನಿನ್ನ ಅಮ್ಮನಿಗೆ ಒಂದೇಟು ಹೊಡೆಯುವ ಎಂದು ಟೀಚರ್ ಹೇಳುತ್ತಿದ್ದಂತೆ ಪುಟಾಣಿ ಆಯ್ತು ಎನ್ನುತ್ತಾ ತಲೆ ಅಲ್ಲಾಡಿಸಿದೆ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಮುಗ್ಧ ಮನಸ್ಸುಗಳ ಶುದ್ಧ ಸಂಭಾಷಣೆ; ಕರುವಿನ ಜತೆಗೆ ಮಾತಿಗಿಳಿದ ಪುಟಾಣಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ಅಮ್ಮನ ಮೇಲೆ ಕೇಸ್ ಹಾಕುವ, ನಾನು ಮಗುವಿನ ಲಾಯರ್ ಎಂದು ಹೇಳಿದ್ದಾರೆ. ಇನ್ನೊಬ್ಬರು, ಪಾಪ ಅನಿಸುತ್ತೆ, ನನ್ನ ಕಣ್ಣೇ ಒಂದು ಕ್ಷಣ ಒದ್ದೆ ಆಯ್ತು ಎಂದಿದ್ದಾರೆ. ಮತ್ತೊಬ್ಬರು, ನಾವು ಶಾಲೆಗೆ ಹೋಗುವಾಗ ಯಾಕೆ ಇಂತಹ ಟೀಚರ್ ಇರಲಿಲ್ಲ ಎಂದು ಕಾಮೆಂಟ್ ನಲ್ಲಿ ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ
ಬರದ ಬಗ್ಗೆ ಈಗಾಗಲೇ ಪ್ರಧಾನಿ ಮೋದಿ ಸಹ ಎಚ್ಚರಿಕೆ ನೀಡಿದ್ದಾರೆ ಎಂದ ಡಿಕೆಶಿ
ಬರದ ಬಗ್ಗೆ ಈಗಾಗಲೇ ಪ್ರಧಾನಿ ಮೋದಿ ಸಹ ಎಚ್ಚರಿಕೆ ನೀಡಿದ್ದಾರೆ ಎಂದ ಡಿಕೆಶಿ
ಸಿಜೆಪಿ ಜೊತೆಗಿನ ಕೇಂದ್ರದ ಸಂಧಾನ ಸಕ್ಸಸ್, ಜಿರಳೆ ಪಾರ್ಟಿ ಹೋರಾಟ ವಾಪಸ್!
ಸಿಜೆಪಿ ಜೊತೆಗಿನ ಕೇಂದ್ರದ ಸಂಧಾನ ಸಕ್ಸಸ್, ಜಿರಳೆ ಪಾರ್ಟಿ ಹೋರಾಟ ವಾಪಸ್!
10 ವರ್ಷ ಜೈಲು, 10 ಕೋಟಿ ರೂ ದಂಡ ಎಂದ ಸಚಿವ ಜೋಶಿ
10 ವರ್ಷ ಜೈಲು, 10 ಕೋಟಿ ರೂ ದಂಡ ಎಂದ ಸಚಿವ ಜೋಶಿ
ದೆಹಲಿಯಲ್ಲಿ ಸಿಜೆಪಿ ವಕ್ತಾರರ ಜೊತೆ ಕೇಂದ್ರ ಸರ್ಕಾರದ 3ನೇ ಸುತ್ತಿನ ಮಾತುಕತೆ
ದೆಹಲಿಯಲ್ಲಿ ಸಿಜೆಪಿ ವಕ್ತಾರರ ಜೊತೆ ಕೇಂದ್ರ ಸರ್ಕಾರದ 3ನೇ ಸುತ್ತಿನ ಮಾತುಕತೆ
ಪ್ರಧಾನ್ ರಾಜೀನಾಮೆ ಕ್ರೆಡಿಟ್ ಬಗ್ಗೆ ಬಿಕೆ ಹರಿಪ್ರಸಾದ್ ಹೇಳಿದ್ದಿಷ್ಟು
ಪ್ರಧಾನ್ ರಾಜೀನಾಮೆ ಕ್ರೆಡಿಟ್ ಬಗ್ಗೆ ಬಿಕೆ ಹರಿಪ್ರಸಾದ್ ಹೇಳಿದ್ದಿಷ್ಟು
ಪ್ರಧಾನ್ ರಾಜೀನಾಮೆ ನೀಡಿದ್ರೂ ಸಿಜೆಪಿಗಿಲ್ಲ ಸಮಾಧಾನ
ಪ್ರಧಾನ್ ರಾಜೀನಾಮೆ ನೀಡಿದ್ರೂ ಸಿಜೆಪಿಗಿಲ್ಲ ಸಮಾಧಾನ