AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಟೀಚರ್ ಬಳಿ ಅಮ್ಮನ ಬಗ್ಗೆ ಕಂಪ್ಲೇಂಟ್ ಮಾಡಿದ ಪುಟಾಣಿ, ಕಾರಣ ಇದೇ ನೋಡಿ

ಪುಟಾಣಿಗಳೇ ಹಾಗೆ, ಶಾಲೆಯಲ್ಲಿ ನಡೆದ ಎಲ್ಲದ್ದನ್ನು ತನ್ನ ಅಮ್ಮನ ಮುಂದೆ ವರದಿ ಒಪ್ಪಿಸುತ್ತಾರೆ. ಅಷ್ಟೇ ಅಲ್ಲದೇ, ಮನೆಯ ವಿಚಾರವನ್ನು ಟೀಚರ್ ಮುಂದೆ ಹೇಳುವುದಿದೆ. ಆದರೆ ಈ ಪುಟಾಣಿ ಅಮ್ಮನ ವಿರುದ್ಧವೇ ತನ್ನ ಟೀಚರ್ ಬಳಿ ದೂರು ನೀಡಿದೆ. ಈ ಕ್ಯೂಟ್ ವಿಡಿಯೋ ವೈರಲ್ ಆಗಿದ್ದು ನೆಟ್ಟಿಗರು ಪುಟಾಣಿಯ ಮುಗ್ಧತೆಗೆ ಕಳೆದು ಹೋಗಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಟೀಚರ್ ಬಳಿ ಅಮ್ಮನ ಬಗ್ಗೆ ಕಂಪ್ಲೇಂಟ್ ಮಾಡಿದ ಪುಟಾಣಿ, ಕಾರಣ ಇದೇ ನೋಡಿ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: May 15, 2026 | 3:48 PM

Share

ಪುಟಾಣಿ ಮಕ್ಕಳು (little kids) ಪ್ರಾರಂಭದ ದಿನಗಳಲ್ಲಿ ಶಾಲೆಗೆ ಹೋಗಲ್ಲ ಎಂದು ಹಠ ಹಿಡಿಯುವುದಿದೆ. ಕೆಲವೊಮ್ಮೆ ಟೀಚರ್ ಹೋಮ್ ವರ್ಕ್ ಮಾಡಿಸ್ತಾರೆ, ಹೊಡೀತಾರೆ ಹೀಗೆ ನಾನಾ ನೆಪಗಳನ್ನು ಹೇಳಿ ಶಾಲೆಗೆ ಹೋಗುವುದರಿಂದ ತಪ್ಪಿಸಿಕೊಳ್ಳುವುದಿದೆ. ಒಮ್ಮೆ ಸ್ಕೂಲ್ ಮೆಟ್ಟಿಲೇರಿದರೆ ಸಾಕು, ಈ ಮಕ್ಕಳಿಗೆ ಟೀಚರ್ ಫೇವರೆಟ್‌ ಆಗಿ ಬಿಡುತ್ತಾರೆ. ಆದರೆ ಪ್ರಿ ಸ್ಕೂಲ್‌ಗೆ ಹೋಗುವ ಪುಟಾಣಿಯೂ ಶಿಕ್ಷಕಿ ಮುಂದೆ ಅಳುತ್ತಾ ಅಮ್ಮ ನನಗೆ ಹೊಡೆದರು ಎಂದು ಕಂಪ್ಲೇಂಟ್‌ ಮಾಡಿದೆ. ಪುಟಾಣಿಯ ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ತಮ್ಮ ಬಾಲ್ಯದ ದಿನವನ್ನು ಮೆಲುಕು ಹಾಕಿಕೊಂಡಿದ್ದಾರೆ.

Vijetha womanpreneur ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಪುಟಾಣಿ ತಾಯಿ ವಿರುದ್ಧ ಟೀಚರ್ ಬಳಿ ದೂರು ಹೇಳುವುದನ್ನು ಕಾಣಬಹುದು. ಟೀಚರ್ ಬಳಿ ಮೂರುವರೇ ವರ್ಷದ ಪುಟಾಣಿಯೂ ತನ್ನ ಕೈಗೆ ಅಮ್ಮ ಹೊಡೆದ್ರು ಬಿಕ್ಕಿ ಬಿಕ್ಕಿ ಅಳುತ್ತಾ ಹೇಳಿದೆ. ಹೀಗೆನ್ನುತ್ತಿದ್ದಂತೆ ಟೇಚರ್‌ ಕೈ ಹಿಡಿದು ನೋಡುತ್ತಾ ಪುಟಾಣಿಯನ್ನು ಸಮಾಧಾನ ಪಡಿಸಿದ್ದಾರೆ. ನಿನ್ನ ಅಮ್ಮನಿಗೆ ಒಂದೇಟು ಹೊಡೆಯುವ ಎಂದು ಟೀಚರ್ ಹೇಳುತ್ತಿದ್ದಂತೆ ಪುಟಾಣಿ ಆಯ್ತು ಎನ್ನುತ್ತಾ ತಲೆ ಅಲ್ಲಾಡಿಸಿದೆ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಮುಗ್ಧ ಮನಸ್ಸುಗಳ ಶುದ್ಧ ಸಂಭಾಷಣೆ; ಕರುವಿನ ಜತೆಗೆ ಮಾತಿಗಿಳಿದ ಪುಟಾಣಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ಅಮ್ಮನ ಮೇಲೆ ಕೇಸ್ ಹಾಕುವ, ನಾನು ಮಗುವಿನ ಲಾಯರ್ ಎಂದು ಹೇಳಿದ್ದಾರೆ. ಇನ್ನೊಬ್ಬರು, ಪಾಪ ಅನಿಸುತ್ತೆ, ನನ್ನ ಕಣ್ಣೇ ಒಂದು ಕ್ಷಣ ಒದ್ದೆ ಆಯ್ತು ಎಂದಿದ್ದಾರೆ. ಮತ್ತೊಬ್ಬರು, ನಾವು ಶಾಲೆಗೆ ಹೋಗುವಾಗ ಯಾಕೆ ಇಂತಹ ಟೀಚರ್ ಇರಲಿಲ್ಲ ಎಂದು ಕಾಮೆಂಟ್ ನಲ್ಲಿ ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಡ್ಡಮತದಾನ ಮಾಡಿಲ್ಲ: ಬೇಲೂರು ಬಿಜೆಪಿ ಶಾಸಕ ಸುರೇಶ್ ಆಣೆ-ಪ್ರಮಾಣ
ಅಡ್ಡಮತದಾನ ಮಾಡಿಲ್ಲ: ಬೇಲೂರು ಬಿಜೆಪಿ ಶಾಸಕ ಸುರೇಶ್ ಆಣೆ-ಪ್ರಮಾಣ
ಕಾರವಾರದಲ್ಲಿ ಅಬ್ಬರಿಸಿದ ಮಳೆರಾಯ; ಹಲವೆಡೆ ರಸ್ತೆಗಳು ಜಲಾವೃತ!
ಕಾರವಾರದಲ್ಲಿ ಅಬ್ಬರಿಸಿದ ಮಳೆರಾಯ; ಹಲವೆಡೆ ರಸ್ತೆಗಳು ಜಲಾವೃತ!
ಇಂದು ಈ ರಾಶಿಯವರಿಗೆ ಅವರ ಮಾತಿನಿಂದಲೇ ಲಾಭ!
ಇಂದು ಈ ರಾಶಿಯವರಿಗೆ ಅವರ ಮಾತಿನಿಂದಲೇ ಲಾಭ!
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!