AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪುಣ್ಯಕೋಟಿ ಗೋವಿನ ಹಾಡು ಕೇಳಿ ಬಿಕ್ಕಿ ಬಿಕ್ಕಿ ಅತ್ತ ಪುಟ್ಟ ಬಾಲಕ

ಸತ್ಯ, ಪ್ರಾಮಾಣಿಕತೆ ಹಾಗೂ ಮಾತಿಗೆ ತಪ್ಪದ ಗುಣವೆಂದಾಗ ನೆನಪಿಗೆ ಬರುವುದೇ ಈ ಪುಣ್ಯಕೋಟಿ ಗೋವು. ಹೌದು, ಧರಣಿ ಮಂಡಲ ಮಧ್ಯದೊಳಗೆ ಈ ಹಾಡನ್ನು ನೀವು ಚಿಕ್ಕ ಮಕ್ಕಳಿರುವಾಗಲೇ ಕೇಳಿರಬಹುದು. ಆದರೆ ಇಲ್ಲೊಬ್ಬ ಪುಟಾಣಿಯೂ ಈ ಪುಣ್ಯಕೋಟಿ ಗೋವಿನ ಹಾಡು ಕೇಳಿ ಬಿಕ್ಕಿ ಬಿಕ್ಕಿ ಅತ್ತಿದ್ದಾನೆ. ಮುಗ್ಧತೆಗೆ ಸಾಕ್ಷಿಯಾದ ಈ ವಿಡಿಯೋ ನೆಟ್ಟಿಗರ ಗಮನ ಸೆಳೆಯುತ್ತಿದೆ.

Video: ಪುಣ್ಯಕೋಟಿ ಗೋವಿನ ಹಾಡು ಕೇಳಿ ಬಿಕ್ಕಿ ಬಿಕ್ಕಿ ಅತ್ತ ಪುಟ್ಟ ಬಾಲಕ
ವೈರಲ್‌ ವಿಡಿಯೋImage Credit source: Facebook
ಸಾಯಿನಂದಾ
|

Updated on:Feb 04, 2026 | 4:16 PM

Share

ಪುಟಾಣಿಗಳೇ (little kids) ಹಾಗೆ, ಸಣ್ಣ ಸಣ್ಣ ವಿಚಾರಗಳನ್ನು ಮನಸ್ಸಿಗೆ ತೆಗೆದುಕೊಳ್ಳುತ್ತಾರೆ. ಇನ್ನು ಯಾವುದಾದರು ಕಥೆಯಲ್ಲಿ ಬರುವ ಪಾತ್ರವನ್ನು ನಿಜವೆಂದು ಭಾವಿಸುತ್ತಾರೆ. ಆದರೆ ಇಲ್ಲೊಬ್ಬ ಪುಟ್ಟ ಹುಡುಗನು ಕೂಡ ಪುಣ್ಯಕೋಟಿ (Punyakoti) ಗೋವಿನ ಹಾಡು ಕೇಳಿ, ಅದು ಮಾಡಿದ ತ್ಯಾಗವನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತಿದ್ದಾನೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಈ ಪುಟಾಣಿಯ ಮುಗ್ಧತೆಗೆ ,ಮನಸೋತಿದ್ದಾರೆ.

ಕೋಸ್ಟಲ್ ಬೀಟ್ಸ್ (Costal beats) ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಮನೆಯವರೆಲ್ಲರೂ  ಟಿವಿಯ ಮುಂದೆ ಕುಳಿತು ಪುಣ್ಯಕೋಟಿ ಗೋವಿನ ಹಾಡನ್ನು ವೀಕ್ಷಿಸುತ್ತಿದ್ದಾರೆ. ಈ ನಡುವೆ ಈ ಪುಟ್ಟ ಬಾಲಕನು ಈ ಹಾಡು ಕೇಳಿ ಬಿಕ್ಕಿ ಬಿಕ್ಕಿ ಅಳುತ್ತಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಸ್ಟೇಜ್ ಮೇಲೆ ಹೊಗೆ ಕಂಡು ಭಯದಲ್ಲೇ ಅಳುತ್ತಾ ಓಡಿಹೋದ ಪುಟಾಣಿ ಡ್ಯಾನ್ಸರ್ಸ್

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ಮುಗ್ಧತೆ ಎಲ್ಲಾ ಕಾಲದಲ್ಲೂ ಸುಂದರ ಎಂದಿದ್ದಾರೆ. ಇನ್ನೊಬ್ಬರು, ಇವಾಗ್ಲೂ ಈ ಪುಣ್ಯಕೋಟಿ ಹಾಡು ಕೇಳುವಾಗ ದುಃಖ ಆಗುತ್ತದೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಪುಣ್ಯಕೋಟಿ ಹಾಡಿನಲ್ಲಿ ಅಡಗಿರುವ ಭಾವನೆ ಇದು, ದೇವರು ಆ ಮಗುವಿಗೆ ಒಳ್ಳೆಯದು ಮಾಡಲಿ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:08 pm, Wed, 4 February 26

ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
SSLC ವಿದ್ಯಾರ್ಥಿಗಳ ಪರೀಕ್ಷೆ ಮುಗಿಯುವವರೆಗೂ ಟಿವಿ–ಮೊಬೈಲ್ ಆಫ್!
SSLC ವಿದ್ಯಾರ್ಥಿಗಳ ಪರೀಕ್ಷೆ ಮುಗಿಯುವವರೆಗೂ ಟಿವಿ–ಮೊಬೈಲ್ ಆಫ್!