AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಹಗ್ಗ ಎಳೆದ್ರೂ ಕದಲದೇ ನಿಂತಿದ್ದ ಎಮ್ಮೆ ಕರುವಿಗೆ ಸವಾಲು ಹಾಕಿದ ಪುಟಾಣಿ

ಪುಟ್ಟ ಮಕ್ಕಳ ಆಟ ತುಂಟಾಟಗಳೇ ಚಂದ. ಕೋಪಿಸಿಕೊಂಡರೆ ನೋಡೋದಕ್ಕೆ ಇನ್ನು ಮುದ್ದಾಗಿ ಕಾಣಿಸಿಕೊಳ್ಳುತ್ತಾರೆ. ಇದೀಗ ಪುಟಾಣಿಯೊಂದು ಎಮ್ಮೆ ಕರುವಿನ ಮೇಲೆ ಕೋಪಿಸಿಕೊಂಡು, ಕೊನೆಗೆ ಅದಕ್ಕೆ ಸವಾಲು ಹಾಕಿದೆ. ಪುಟ್ಟ ಹುಡುಗಿಯ ಈ ಹೃದಯಸ್ಪರ್ಶಿ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಹಗ್ಗ ಎಳೆದ್ರೂ ಕದಲದೇ ನಿಂತಿದ್ದ ಎಮ್ಮೆ ಕರುವಿಗೆ ಸವಾಲು ಹಾಕಿದ ಪುಟಾಣಿ
ವೈರಲ್ ವಿಡಿಯೋImage Credit source: Twitter
ಸಾಯಿನಂದಾ
|

Updated on: Mar 18, 2026 | 5:18 PM

Share

ಈಗಿನ ಕಾಲದ ಮಕ್ಕಳು (children) ಎಲ್ಲದರಲ್ಲೂ ಒಂದು ಹೆಜ್ಜೆ ಮುಂದೆನೇ. ಏನೇ ಕೇಳಿದ್ರೂ ಪಟ ಪಟನೇ ಉತ್ತರ ಹೇಳ್ತಾರೆ. ಹೆತ್ತವರನ್ನು ಮಾತಿನಲ್ಲೇ ಕಟ್ಟಿ ಹಾಕ್ತಾರೆ, ಆದರೆ ಈ ಪುಟ್ಟ ಹುಡುಗಿಯೂ (little girl) ಎಮ್ಮೆ ಕರುವಿಗೆ ಓಪನ್ ಚಾಲೆಂಜ್ ಹಾಕಿದ್ದಾಳೆ. ಕುತ್ತಿಗೆಗೆ ಕಟ್ಟಿದ ಹಗ್ಗವನ್ನು ಎಷ್ಟೇ ಎಳೆದರೂ ಎಮ್ಮೆ ಕರುವು ಕದಲದೇ ಹಾಗೆಯೇ ನಿಂತುಕೊಂಡಿದ್ದು, ಇದರಿಂದ ಕೋಪಗೊಂಡ  ಈ ಪುಟ್ಟ ಹುಡುಗಿಯೂ ಸವಾಲು ಹಾಕಿರುವ ವಿಡಿಯೋ ವೈರಲ್‌ ಆಗಿದೆ. ಈ ಪುಟ್ಟ ಬಾಲಕಿಯ ಮಾತು ಕೇಳಿ ನೆಟ್ಟಿಗರು ಬಿದ್ದು ಬಿದ್ದು ನಕ್ಕಿದ್ದಾರೆ.

Ayub Khilji ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ಪುಟ್ಟ ಹುಡುಗಿಯೊಂದು ಎಮ್ಮೆ ಕರುವಿಗೆ ಕಟ್ಟಿದ ಹಗ್ಗವನ್ನು ಎಳೆಯುತ್ತಿರುವುದನ್ನು ಕಾಣಬಹುದು. ಎಮ್ಮೆ ಕರುವು ತಾನು ಬರಲ್ಲ ಎಂದು ಹಠ ಹಿಡಿದು ನಿಂತಿದೆ. ಇದೇ ವೇಳೆ ಈ ಪುಟ್ಟ ಬಾಲಕಿ ಈ ಕರುವಿಗೆ ಸವಾಲು ಹಾಕಿದ್ದು, ನಾನು ಕೂಡ ನಿಮ್ಮ ಅಮ್ಮನ ಹಾಲು ಕುಡಿದೇ ಬೆಳೆದಿದ್ದು ಎಂದು ಹೇಳಿರುವುದನ್ನು ಕಾಣಬಹುದು. ಮತ್ತೆ ತನ್ನ ಪ್ರಯತ್ನ ಬಿಡದೇ ಎಮ್ಮೆ ಕರುವಿನ ಕುತ್ತಿಗೆಗೆ ಕಟ್ಟಿದ ಹಗ್ಗವನ್ನು ಎಳೆಯುತ್ತಿದ್ದಾಳೆ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಹೆಲ್ಮೆಟ್ ಧರಿಸದೇ ಬೈಕ್ ಓಡಿಸುತ್ತಿದ್ದ ಯುವಕನಿಗೆ ಸುರಕ್ಷತೆಯ ಪಾಠ ಮಾಡಿದ ಪುಟ್ಟ ಹುಡುಗಿ

ಈ ವಿಡಿಯೋ ನಾಲ್ಕು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಪುಟ್ಟ ಹುಡುಗಿಯ ಮಾತು ಕೇಳಿ ನಗು ಬಂದಿದೆ ಎಂದಿದ್ದಾರೆ. ಮತ್ತೊಬ್ಬರು, ಈ ಪುಟಾಣಿಯ ಸವಾಲು ಮಜಾವಾಗಿದೆ ಎಂದು ಹೇಳಿದ್ದಾರೆ. ಮತ್ತೊಬ್ಬರು, ಮತ್ತೆ ಮತ್ತೆ ನೋಡಬೇಕೆನಿಸುವ ದೃಶ್ಯ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: ಹಕ್ಕುಪತ್ರ ವಿತರಣೆ
ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: ಹಕ್ಕುಪತ್ರ ವಿತರಣೆ
ಎಂಥಾ ಕಾಲ ಬಂತಪ್ಪ: ಪೊಲೀಸ್​​ ಭದ್ರತೆಯಲ್ಲಿ LPG ಸಿಲಿಂಡರ್​​ಗಳ ವಿತರಣೆ!
ಎಂಥಾ ಕಾಲ ಬಂತಪ್ಪ: ಪೊಲೀಸ್​​ ಭದ್ರತೆಯಲ್ಲಿ LPG ಸಿಲಿಂಡರ್​​ಗಳ ವಿತರಣೆ!
ಡಿಜೆ ನಿಷೇಧಿಸುವಂತೆ ಲಾಡ್ ಆಗ್ರಹ: ಆಝಾನ್ ಬ್ಯಾನ್ ಮಾಡಿ ಎಂದು ಬಿಜೆಪಿ ಶಾಸಕ!
ಡಿಜೆ ನಿಷೇಧಿಸುವಂತೆ ಲಾಡ್ ಆಗ್ರಹ: ಆಝಾನ್ ಬ್ಯಾನ್ ಮಾಡಿ ಎಂದು ಬಿಜೆಪಿ ಶಾಸಕ!
ಐಪಿಎಲ್ ಟಿಕೆಟ್ ವಂಚನೆ ನಡೆಯುತ್ತಿದೆ ಎಚ್ಚರ
ಐಪಿಎಲ್ ಟಿಕೆಟ್ ವಂಚನೆ ನಡೆಯುತ್ತಿದೆ ಎಚ್ಚರ
ಪ್ರಜ್ವಲ್ ರೇವಣ್ಣ ಪ್ರಕರಣ: ಪ್ರೀತಂ ಗೌಡ, ಶ್ರೇಯಸ್ ಪಟೇಲ್ ಆಪ್ತರಿಗೆ ರಿಲೀಫ್
ಪ್ರಜ್ವಲ್ ರೇವಣ್ಣ ಪ್ರಕರಣ: ಪ್ರೀತಂ ಗೌಡ, ಶ್ರೇಯಸ್ ಪಟೇಲ್ ಆಪ್ತರಿಗೆ ರಿಲೀಫ್
ಪ್ರಜ್ವಲ್ ಪ್ರಕರಣ: ಪ್ರಮುಖರ ಹೆಸರೇ ಚಾರ್ಜ್​​ಶೀಟ್​​ನಿಂದ ಮಿಸ್ಸಿಂಗ್​​?
ಪ್ರಜ್ವಲ್ ಪ್ರಕರಣ: ಪ್ರಮುಖರ ಹೆಸರೇ ಚಾರ್ಜ್​​ಶೀಟ್​​ನಿಂದ ಮಿಸ್ಸಿಂಗ್​​?
ರಾಯಚೂರು: ಭಾರೀ ಅಗ್ನಿ ಅವಘಡಕ್ಕೆ 300ಕ್ಕೂ ಹೆಚ್ಚು ಚೀಲ ಭತ್ತ ಭಸ್ಮ
ರಾಯಚೂರು: ಭಾರೀ ಅಗ್ನಿ ಅವಘಡಕ್ಕೆ 300ಕ್ಕೂ ಹೆಚ್ಚು ಚೀಲ ಭತ್ತ ಭಸ್ಮ
ವಿಡಿಯೋ: ಆಂಬ್ಯುಲೆನ್ಸ್‌ನಲ್ಲೇ ಬಂದು SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ!
ವಿಡಿಯೋ: ಆಂಬ್ಯುಲೆನ್ಸ್‌ನಲ್ಲೇ ಬಂದು SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ!
ಯುಗಾದಿ ವರ್ಷ ಭವಿಷ್ಯ;ಗ್ರಹಗಳ ಸಂಚಾರ ಮತ್ತು ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಯುಗಾದಿ ವರ್ಷ ಭವಿಷ್ಯ;ಗ್ರಹಗಳ ಸಂಚಾರ ಮತ್ತು ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಭರ್ಜರಿ ಕಾರ್ಯಾಚರಣೆ: 2 ಕೋಟಿ ರೂ. ಹಣ ಸೀಜ್
ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಭರ್ಜರಿ ಕಾರ್ಯಾಚರಣೆ: 2 ಕೋಟಿ ರೂ. ಹಣ ಸೀಜ್