AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಅಮ್ಮ ಬೈದದ್ದಕ್ಕೆ ಮನೆಯ ಮುದ್ದಿನ ಶ್ವಾನದ ಬಳಿ ಅಳುತ್ತಾ ಕಂಪ್ಲೇಂಟ್ ಹೇಳಿದ ಪುಟಾಣಿ

ನಿಯತ್ತು, ನಿಷ್ಠೆ ಎಂದಾಗ ನೆನಪಿಗೆ ಬರುವುದೇ ಶ್ವಾನ. ಸೋಶಿಯಲ್ ಮೀಡಿಯಾದಲ್ಲಿ ಶ್ವಾನದ ಮುದ್ದು ಮುದ್ದಾದ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಅಮ್ಮ ಬೈದದ್ದಕ್ಕೆ ಪುಟಾಣಿಯೂ ಅಳುತ್ತಾ ಕೂತಿದ್ದು, ಮನೆಯ ಮುದ್ದಿನ ಶ್ವಾನವು ಸಮಾಧಾನ ಪಡಿಸಿದೆ. ಈ ಹೃದಯ ಸ್ಪರ್ಶಿ ವಿಡಿಯೋ ನೆಟ್ಟಿಗರ ಹೃದಯ ಗೆದ್ದಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ

Video: ಅಮ್ಮ ಬೈದದ್ದಕ್ಕೆ ಮನೆಯ ಮುದ್ದಿನ ಶ್ವಾನದ ಬಳಿ ಅಳುತ್ತಾ ಕಂಪ್ಲೇಂಟ್ ಹೇಳಿದ ಪುಟಾಣಿ
ವೈರಲ್ ವಿಡಿಯೋImage Credit source: Instagram
ಸಾಯಿನಂದಾ
|

Updated on: Feb 01, 2026 | 1:31 PM

Share

ಶ್ವಾನಗಳ (Dogs) ನಿಷ್ಕಲ್ಮಶ ಪ್ರೀತಿ, ನಿಷ್ಠೆಗೆ ಸರಿಸಾಟಿಯೇ ಇಲ್ಲ. ಮನೆಯಲ್ಲಿ ಮಕ್ಕಳಿದ್ರೆ ಅವುಗಳ ಪಾಲಿಗೆ ಈ ಶ್ವಾನಗಳು ಬಾಡಿ ಗಾರ್ಡ್ ನಂತೆ ಇರುತ್ತದೆ. ಪುಟಾಣಿಗಳು ಅಪಾಯಕ್ಕೆ ಸಿಲುಕಿಕೊಂಡ್ರೆ ರಕ್ಷಿಸುವುದರಲ್ಲಿ ಈ ಶ್ವಾನಗಳು ಎತ್ತಿದ ಕೈ. ಹೀಗಾಗಿ ಪುಟಾಣಿ ಮಕ್ಕಳು ಹಾಗೂ ಶ್ವಾನಗಳ ಸುಂದರ ಬಾಂಧವ್ಯಕ್ಕೆ ಇಂತಹ ದೃಶ್ಯಗಳು ಸಾಕ್ಷಿಯಾಗುತ್ತವೆ. ಆದರೆ ಪುಟ್ಟ ಹುಡುಗಿಯೊಬ್ಬಳು (little girl) ಅಮ್ಮನ ಕೈಯಲ್ಲಿ ಬೈಗುಳ ತಿಂದು ಅಳುತ್ತಾ ಕುಳಿತಿದ್ದರೆ, ಮನೆಯ ಮುದ್ದಿನ ಶ್ವಾನ ಮಾಡಿದ ಕೆಲಸ ನೋಡಿದ್ರೆ ನೀವು ಶಾಕ್ ಆಗ್ತೀರಾ. ಹೌದು,  ಅಮ್ಮನ ಬಗ್ಗೆ ಪುಟಾಣಿಯೂ ದೂರು ಹೇಳುತ್ತಿದ್ದಂತೆ ಶ್ವಾನವೂ ಪಕ್ಕದಲ್ಲೇ ಕುಳಿತು ಸಮಾಧಾನ ಪಡಿಸಿದ್ದಂತಿದೆ ಈ ದೃಶ್ಯ. ಈ ಶುದ್ಧ ಬಾಂಧವ್ಯಕ್ಕೆ ನೆಟ್ಟಿಗರು ಫುಲ್ ಫಿದಾ ಆಗಿದ್ದು, ಈ ಕ್ಲಿಪ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಚೀನಾ ಡೈರೀಸ್ 2025 (chinadairies) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಪುಟಾಣಿಯೊಂದು ಅಮ್ಮನ ಕೈಯಲ್ಲಿ ಬೈಗುಳ ತಿಂದು ಅಳುತ್ತಾ ಕುಳಿತಿದೆ. ಈ ಪುಟಾಣಿಯೂ ಶ್ವಾನದ ಬಳಿ ಅಮ್ಮನ ಬಗ್ಗೆ ಕಂಪ್ಲೇಂಟ್ ಹೇಳಿದ್ದು ಶ್ವಾನವು ಅಪ್ಪಿಕೊಂಡು ಸಮಾಧಾನ ಪಡಿಸಿರುತ್ತಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಮುದ್ದಿನ ನಾಯಿಯನ್ನು ವಿಮಾನದಲ್ಲಿ ಕರೆದೊಯ್ಯಲು 15 ಲಕ್ಷ ರೂ. ಖರ್ಚು ಮಾಡಿದ ದಂಪತಿ!

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ಈ ದೃಶ್ಯ ಮುದ್ದಾಗಿದೆ ಎಂದು ಹೇಳಿದ್ದಾರೆ. ಮತ್ತೊಬ್ಬರು, ಇಬ್ಬರದ್ದು ಮುಗ್ಧ ಹಾಗೂ ಶುದ್ಧ ಮನಸ್ಸು ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಮತ್ತೆ ಮತ್ತೆ ನೋಡಬೇಕೆನಿಸುವ ವಿಡಿಯೋ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
‘ಪ್ರಜ್ವಲ್​​ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್​ ಮಾಡಿಲ್ಲ’
‘ಪ್ರಜ್ವಲ್​​ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್​ ಮಾಡಿಲ್ಲ’
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ