AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪುಟ್ಟ ಪುಟ್ಟ ಹೆಜ್ಜೆಯಲ್ಲಿ ದೊಡ್ಡ ಜವಾಬ್ದಾರಿ; ಕುಟುಂಬಕ್ಕೆ ಹೆಗಲಾದ ಪುಟ್ಟ ಹುಡುಗಿ

ಮೂರು ಹೊತ್ತಿನ ಊಟಕ್ಕಾಗಿ ಒಬ್ಬೊಬ್ಬರದ್ದು ಒಂದೊಂದು ರೀತಿಯ ಹೋರಾಟ. ಕೆಲ ಜನರ ಬದುಕಿನ ಹೋರಾಟ ಕಂಡಾಗ ನಿಜಕ್ಕೂ ಕಣ್ಣಲ್ಲಿ ನೀರು ಬರುತ್ತದೆ. ಪುಟ್ಟ ಹುಡುಗಿಯೊಬ್ಬಳು ಹಗ್ಗದ ಮೇಲೆ ನಡೆಯುತ್ತಾ ಕುಟುಂಬಕ್ಕಾಗಿ ತನ್ನ ಬಾಲ್ಯವನ್ನೇ ಮಾರಿದ್ದಾಳೆ. ಈ ಹೃದಯ ಸ್ಪರ್ಶಿ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಕಣ್ಣನ್ನು ಒದ್ದೆಯಾಗಿಸಿದೆ.

Video: ಪುಟ್ಟ ಪುಟ್ಟ ಹೆಜ್ಜೆಯಲ್ಲಿ ದೊಡ್ಡ ಜವಾಬ್ದಾರಿ; ಕುಟುಂಬಕ್ಕೆ ಹೆಗಲಾದ ಪುಟ್ಟ ಹುಡುಗಿ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Dec 11, 2025 | 11:21 AM

Share

ಬದುಕು (life) ಅಂದುಕೊಂಡಷ್ಟು ಸುಲಭವಲ್ಲ. ಕೆಲವರು ಎಲ್ಲಾ ಇದ್ದು ನೆಮ್ಮದಿಗಾಗಿ ಹೋರಾಟ ನಡೆಸಿದರೆ, ಇನ್ನು ಕೆಲವರು ಮೂರು ಹೊತ್ತಿನ ತುತ್ತಿಗಾಗಿ ಹೋರಾಟಕ್ಕೆ ಇಳಿಯುತ್ತಾರೆ. ಬಡತನದಿಂದಾಗಿ ಸಣ್ಣ ವಯಸ್ಸಿನಲ್ಲಿಯೇ ಕುಟುಂಬಕ್ಕೆ ಹೆಗಲರಾಗುತ್ತಾರೆ. ಈ ಪುಟ್ಟ ಹುಡುಗಿಯದು (little girl) ಅದೇ ರೀತಿಯ ಬದುಕು. ಪುಟ್ಟ ಹುಡುಗಿಯೂ ಓದುವ ವಯಸ್ಸಿನಲ್ಲಿ ಈ ಹಗ್ಗದಲ್ಲೇ ನಡೆದಾಡುತ್ತಾ ಜವಾಬ್ದಾರಿ ನಡುವೆ ಹೋರಾಟ ನಡೆಸುತ್ತಿರುವ  ವಿಡಿಯೋ ವೈರಲ್ ಆಗಿದೆ. ಈ ದೃಶ್ಯ ನೆಟ್ಟಿಗರ ಗಮನ ಸೆಳೆದಿದೆ.

ಅಡಿಗ ಕ್ಲಿಕ್‌ (adiga_clickz) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಪುಟ್ಟ ಹುಡುಗಿಯ  ಹೆಗಲ ಮೇಲೆ ಇರುವ ಮನೆಯ ಜವಾಬ್ದಾರಿಯನ್ನು ನೋಡಬಹುದು. ಕೈಯಲ್ಲಿ ಕೋಲು ಹಿಡಿದುಕೊಂಡು ಹಗ್ಗದ ಮೇಲೆ ನಡೆದಾಡುತ್ತಾ ಈ ಪುಟಾಣಿಯೂ ತನ್ನ ಕುಟುಂಬಕ್ಕೆ ಹೆಗಲಾಗಿದ್ದಾಳೆ. ಇತ್ತ ತಾಯಿ ಮಗಳು ಬೀಳದಂತೆ ನೋಡುತ್ತಾ ಕುಟುಂಬದ ಜವಾಬ್ದಾರಿ ಹೊತ್ತಿರುವ ಪುಟಾಣಿಯ  ಕಲೆಗೆ ಸಾಥ್ ನೀಡುವ ದೃಶ್ಯ ಇದಾಗಿದೆ.

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಇದನ್ನೂ ಓದಿ:ಈವಾಗ್ಲೇ ಹಿಂಗೇ, ಮುಂದೆ ಹೆಂಗೋ; ನಡು ರಸ್ತೆಯಲ್ಲೇ ಜಗಳಕ್ಕಿಳಿದ ಪುಟಾಣಿಗಳು

ಈ ವಿಡಿಯೋ ಒಂದು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಬದುಕಿನ ಹೋರಾಟ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಚಿಕ್ಕ ವಯಸ್ಸಿನಲ್ಲಿ ಜವಾಬ್ದಾರಿ ಎಂದರೆ ಇನ್ನೊಬ್ಬರು, ನಿಮ್ಮ ವೀವ್ಸ್ ಗಳಿಗೆ ಅವರ ಬದುಕೇ ಬಂಡವಾಳ, ಆ ಬಂಡವಾಳಕ್ಕೆ ಸಿಗಲಿ ಸರಿಯಾದ ಪ್ರತಿಫಲ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ