AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕೆಚಪ್ ಬದಲು ಕೆಪಚ್ ಎಂದು ವಾದಿಸಿದ ಪುಟಾಣಿ, ವೈರಲ್ ಆಯ್ತು ದೃಶ್ಯ

ಪುಟಾಣಿಗಳ ತೊದಲು ಮಾತುಗಳನ್ನು ಕೇಳುವುದೇ ಚಂದ. ಮುದ್ದು ಮುದ್ದಾದ ಮಾತುಗಳನ್ನು ಕೇಳಿದರೆ ಅಪ್ಪಿ ಮುದ್ದಾಡಬೇಕೇನಿಸುತ್ತದೆ. ಇದೀಗ ಪುಟಾಣಿಯೊಂದು ತೊದಲುತ್ತಾ ಕೆಚಪ್ ಬದಲು ಕೆಪಚ್ ಎನ್ನುತ್ತಾ ತನ್ನ ಬಳಿ ವಾದಿಸುತ್ತಿದೆ. ಈ ವಿಡಿಯೋ ವೈರಲ್ ಆಗಿದ್ದು ನೆಟ್ಟಿಗರ ಹೃದಯ ಗೆದ್ದಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಕೆಚಪ್ ಬದಲು ಕೆಪಚ್ ಎಂದು ವಾದಿಸಿದ ಪುಟಾಣಿ, ವೈರಲ್ ಆಯ್ತು ದೃಶ್ಯ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Jun 03, 2026 | 4:25 PM

Share

ಮನೆಯಲ್ಲಿ ಪುಟ್ಟ ಮಕ್ಕಳಿದ್ದು (little kids) ಬಿಟ್ಟರೆ ಎಲ್ಲಾ ನೋವುಗಳನ್ನು ಈ ಕಂದಮ್ಮಗಳ ಆಟ ತುಂಟಾಟವನ್ನು ನೋಡಿ ಮರೆಯುತ್ತಾರೆ. ಈ ಪುಟಾಣಿಗಳ ತೊದಲು ನುಡಿಯನ್ನು ಆಲಿಸುವುದು ಇನ್ನು ಚೆನ್ನ. ಹೀಗಾಗಿ ಮಕ್ಕಳ ತೊದಲು ನುಡಿಗಳನ್ನು ಕೇಳಲು ಎಲ್ಲರೂ ಇಷ್ಟ ಪಡ್ತಾರೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಪುಟಾಣಿಯೊಂದು ಕೆಚಪ್ ಎನ್ನುವ ಬದಲು ಕೆಪಚ್ ಎಂದು ಮುದ್ದಾಗಿ ಹೇಳಿದೆ. ಈ ಪುಟಾಣಿ ಕ್ಯೂಟ್ ರಿಯಾಕ್ಷನ್ ನೋಡಿ ನೆಟ್ಟಿಗರು ಫಿದಾ ಆಗಿದ್ದಾರೆ.

myrumoments ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಕ್ಲಿಪಿಂಗ್‌ನಲ್ಲಿ ಪುಟಾಣಿಯ ತೊದಲು ನುಡಿಯನ್ನು ನೋಡಬಹುದು. ಈ ವಿಡಿಯೋದಲ್ಲಿ ತಾಯಿಯೂ ಕೈಯಲ್ಲಿ ಕೆಚಪ್ ಪ್ಯಾಕೆಟ್‌ ತೋರಿಸಿ ಇದೇನು ಎಂದು ಕೇಳಿದ್ದಾಳೆ. ಪುಟಾಣಿಯೂ ಕೆಪಚ್ ಎಂದು ಮುದ್ದಾಗಿ ಹೇಳಿರುವುದನ್ನು ನೋಡಬಹುದು. ತಾಯಿ ಪುಟ್ಟ ಕಂದಮ್ಮನ ತಪ್ಪನ್ನು ತಿದ್ದುತ್ತಾ ಕೆಪಚ್ ಅಲ್ಲ, ಕೆಚಪ್ ಎಂದಿದ್ದಾಳೆ. ಆದರೆ ಪುಟ್ಟ ಹುಡುಗಿ ಮತ್ತೆ ಕೆಪಚ್ ಎಂದು ಪುನರ್ವತಿಸಿದೆ. ಮುದ್ದು ಕಂದಮ್ಮನ ಮಾತನ್ನು ಕೇಳಿ ತಾಯಿ ಜೋರಾಗಿ ನಕ್ಕಿರುವುದನ್ನು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

View this post on Instagram

A post shared by Mahira 🩵 (@myrumoments)

ಇದನ್ನೂ ಓದಿ: ತನ್ನ ಕಾಲನ್ನು ತಾನೇ ಸ್ಪರ್ಶಿಸಿ ನಮಸ್ಕರಿಸಿಕೊಂಡ ಪುಟಾಣಿ

ಈ ವಿಡಿಯೋ ಒಂದು ಮಿಲಿಯನ್ ಗೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ಅವಳು ಹೇಳುವುದು ಸರಿಯೇ ಇದೆ. ನಿಮಗೆ ಏನು ಗೊತ್ತಿಲ್ಲ ಎಂದಿದ್ದಾರೆ. ಇನ್ನೊಬ್ಬರು, ಎಷ್ಟು ಮುದ್ದಾಗಿ ಕೆಪಚ್ ಎಂದು ಹೇಳುತ್ತಿದೆ ಎಂದು ಕಾಮೆಂಟ್ ನಲ್ಲಿ ಹೇಳಿದ್ದಾರೆ. ಮತ್ತೊಬ್ಬರು, ನಾನು ಆ ಪುಟಾಣಿ ಹೇಳುವುದನ್ನು ಒಪ್ಪುತ್ತೇನೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ