AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಎಮ್ಮೆಯ ಕರುವಿನ ಹಲ್ಲುಜ್ಜಲು ಪುಟಾಣಿಯ ಪರದಾಟ, ವೈರಲ್ ಆಯ್ತು ದೃಶ್ಯ

ಪುಟಾಣಿಗಳು ಏನು ಮಾಡಿದ್ರೂ ಕೂಡ ಚಂದನೇ. ಈ ಪುಟ್ಟ ಮಕ್ಕಳ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ಇದೀಗ ಪುಟಾಣಿಯೊಂದು ಎಮ್ಮೆಯ ಕರುವಿನ ಹಲ್ಲುಜ್ಜಲು ಪರದಾಡುತ್ತಿರುವ ವಿಡಿಯೋ ಸದ್ಯ ವೈರಲ್ ಆಗಿದೆ. ನೆಟ್ಟಿಗರು ಈ ದೃಶ್ಯ ನೋಡಿ ಬಿದ್ದು ಬಿದ್ದು ನಕ್ಕಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ ನೋಡಿ.

Video: ಎಮ್ಮೆಯ ಕರುವಿನ ಹಲ್ಲುಜ್ಜಲು ಪುಟಾಣಿಯ ಪರದಾಟ, ವೈರಲ್ ಆಯ್ತು ದೃಶ್ಯ
ವೈರಲ್ ವಿಡಿಯೋImage Credit source: Instagram
ಸಾಯಿನಂದಾ
|

Updated on:Dec 16, 2025 | 4:23 PM

Share

ಪುಟಾಣಿಗಳು (little kids) ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ಕೆಲ ವಿಡಿಯೋ ನೋಡಿದ್ರೆ ನಗು ತಡೆಯಲು ಆಗಲ್ಲ. ಈ ಪುಟಾಣಿಗಳು ಮಾಡುವ ಎಡವಟ್ಟುಗಳನ್ನು ಕಂಡಾಗ ನಗು ಮುಗ್ಗರಿಸಿಕೊಂಡು ಬರುತ್ತದೆ. ಇದೀಗ ಪುಟಾಣಿಯೊಂದು ಬೆಳ್ಳಂಬೆಳ್ಳಗ್ಗೆ ಎಮ್ಮೆಯ ಕರುವಿಗೆ (Buffalo calf) ಹಲ್ಲು ಉಜ್ಜಿಸುವುದರಲ್ಲಿ ಬ್ಯುಸಿಯಾಗಿದೆ. ಹಲ್ಲುಜ್ಜಲು ಪರದಾಡುತ್ತಿರುವ ಈ ಪುಟಾಣಿ ವಿಡಿಯೋ ನೆಟ್ಟಿಗರ ಹುಬ್ಬೇರಿಸುವಂತೆ ಮಾಡಿದೆ.

ದೀಪಕ್ ಕುಮಾರ್ (Deepak kumar) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಪುಟಾಣಿಯೊಂದು ಎಮ್ಮೆಯ ಕರುವಿಗೆ ಹಲ್ಲುಜ್ಜಿಸುತ್ತಿರುವುದನ್ನು ಕಾಣಬಹುದು. ಈ ಪುಟಾಣಿಯೂ ತಾನು ಮಾಡುತ್ತಿರುವ ಕೆಲಸವನ್ನು ಎಂಜಾಯ್ ಮಾಡುತ್ತಿರುವುದನ್ನು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಇದನ್ನೂ ಓದಿ: ಬಾಯಿ ಚಪ್ಪರಿಸಿಕೊಂಡು ಪಾನಿ ಪುರಿ ಸವಿದ ಕೊರಿಯನ್ ಪುಟಾಣಿಗಳು

ಈ ವಿಡಿಯೋ ಆರು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಅದ್ಭುತ ಮಗ ಎಂದಿದ್ದಾರೆ. ಇನ್ನೊಬ್ಬರು, ಜೆಂಟಲ್ ಡೆಂಟಲ್ ಕ್ಲಿನಿಕ್ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ನನ್ನ ಬಾಲ್ಯದ ದಿನಗಳೇ ಆಗಿತ್ತು ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:23 pm, Tue, 16 December 25

Follow Us
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಪೆಟ್ರೋಲ್ ಬಂಕ್‌ಗಳಲ್ಲಿ ವಂಚನೆ ಆರೋಪದ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್
ಪೆಟ್ರೋಲ್ ಬಂಕ್‌ಗಳಲ್ಲಿ ವಂಚನೆ ಆರೋಪದ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿ. ಸೋಮಣ್ಣ ವಿಶೇಷ ಪೂಜೆ
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿ. ಸೋಮಣ್ಣ ವಿಶೇಷ ಪೂಜೆ
ಸಿಎಂ ಬರಲಿರುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಎಸ್​ಎಫ್​ಐ ಮುಖಂಡರು ವಶಕ್ಕೆ
ಸಿಎಂ ಬರಲಿರುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಎಸ್​ಎಫ್​ಐ ಮುಖಂಡರು ವಶಕ್ಕೆ