AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

King Charles III’s coronation: ಕಿಂಗ್ ಚಾರ್ಲ್ಸ್ III ಪಟ್ಟಾಭಿಷೇಕಕ್ಕೂ ಮುನ್ನ ಲಂಡನ್​​ ರೈಲಿನಲ್ಲಿ ಅಗ್ನಿ ಆಕಸ್ಮಿಕ

ಲಂಡನ್ ಮೆಟ್ರೋ​​ ರೈಲೊಂದರಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ದಕ್ಷಿಣ ಲಂಡನ್‌ನ ಟ್ಯೂಬ್ ರೈಲಿನಲ್ಲಿ ನಡೆದಿದೆ. ಲಂಡನ್​​ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಸ್ವಲ್ಪದರಲ್ಲೇ ಪಾರಾಗಿದ್ದಾರೆ.

King Charles III’s coronation: ಕಿಂಗ್ ಚಾರ್ಲ್ಸ್ III ಪಟ್ಟಾಭಿಷೇಕಕ್ಕೂ ಮುನ್ನ ಲಂಡನ್​​ ರೈಲಿನಲ್ಲಿ ಅಗ್ನಿ ಆಕಸ್ಮಿಕ
ವೈರಲ್ ವೀಡಿಯೊ
Follow us
ಅಕ್ಷಯ್​ ಪಲ್ಲಮಜಲು​​
|

Updated on: May 06, 2023 | 7:10 PM

ಲಂಡನ್​​: ಇಂದು (ಮೇ 6) ಕಿಂಗ್ ಚಾರ್ಲ್ಸ್ III ರ ಪಟ್ಟಾಭಿಷೇಕ (King Charles III’s coronation) ನಡೆದಿದೆ. ಇದಕ್ಕೂ ಮುನ್ನ ನೆನ್ನೆ (ಮೇ5) ಲಂಡನ್ ಮೆಟ್ರೋ​​ ರೈಲೊಂದರಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ದಕ್ಷಿಣ ಲಂಡನ್‌ನ ಟ್ಯೂಬ್ ರೈಲಿನಲ್ಲಿ ನಡೆದಿದೆ. ಲಂಡನ್​​ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಬಿಬಿಸಿ ಪ್ರಕಾರ , ಘಟನೆಯು ಕ್ಲಾಫಮ್ ಕಾಮನ್ ಸ್ಟೇಷನ್‌ನಲ್ಲಿ ನಡೆದಿದೆ ಎಂದು ಹೇಳಲಾಗಿದೆ. ಇದೀಗ ಈ ಕುರಿತು ಒಂದು ವೀಡಿಯೊ ವೈರಲ್ ಆಗಿದೆ. ಈ ವೀಡಿಯೋದಲ್ಲಿ ಮೆಟ್ರೋ ರೈಲಿನ ಅಂಡರ್​​ಗ್ರೌಂಡ್​​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ, ರೈಲಿನ ಒಳಗೆ ಇದ್ದ ಪ್ರಯಾಣಿಕರನ್ನು ಹೊರಗೆ ಬರಲು ಒಬ್ಬ ವ್ಯಕ್ತಿ ಸುತ್ತಿಗೆಯಿಂದ ರೈಲಿನ ಗಾಜಿನ ಕಿಟಕಿಗೆ ಹೊಡೆದು ಪ್ರಯಾಣಿಕರು ಹೊರಗೆ ಬರುವಂತೆ ಮಾಡಿದ್ದಾನೆ. ಚಾರ್ಲ್ಸ್ III ರ ಪಟ್ಟಾಭಿಷೇಕದ ಮೊದಲು ಲಂಡನ್ ರೈಲಿನ ಅಂಡರ್‌ಗ್ರೌಂಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತು.

ಈ ಘಟನೆಯಿಂದ ಯಾವುದೇ ಅಪಘಾತಗಳು ವರದಿಯಾಗಿಲ್ಲ ಎಂದು ಬ್ರಿಟಿಷ್ ಸಾರಿಗೆ ಪೊಲೀಸ್ (ಬಿಟಿಪಿ) ಮಾಹಿತಿ ನೀಡಿದ್ದಾರೆ. ಲಂಡನ್ ಅಗ್ನಿಶಾಮಕ ದಳದ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಬಂದಿದ್ದರು ಆದರೆ ಬೆಂಕಿಯ ಬಗ್ಗೆ ಯಾವುದೇ ಪುರಾವೆಗಳು ಕಂಡುಬಂದಿಲ್ಲ. ಬ್ಯಾಟರ್‌ಸಿಯಾ, ಟೂಟಿಂಗ್ ಮತ್ತು ಬ್ರಿಕ್ಸ್‌ಟನ್‌ನಿಂದ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಆಗಮಿಸುವ ಮೊದಲು ಸುಮಾರು 500 ಜನರು ರೈಲಿನಿಂದ ಹೊರಗೆ ಬಂದಿದ್ದಾರೆ.

ಇದನ್ನೂ ಓದಿ:King Charles III s coronation: ಬ್ರಿಟನ್ ರಾಜ 3ನೇ ಚಾರ್ಲ್ಸ್ ಪಟ್ಟಾಭಿಷೇಕ

ಮೆಟ್ರೋ ನಿಲ್ದಾಣದಲ್ಲಿ ರೈಲು ಹಠಾತ್ತನೆ ನಿಂತಿದೆ. ಹಲವು ನಿಮಿಷಗಳವರೆಗೆ ರೈಲು ಚಲನೆ ನಿಲ್ದಾಣದಲ್ಲೇ ಬಾಕಿಯಾಗಿತ್ತು, ಈ ಬಗ್ಗೆ ಸಿಬ್ಬಂದಿಗಳಿಂದ ಯಾವುದೇ ಪ್ರಕಟನೆ ರೈಲಿನಲ್ಲಿ ಬಂದಿಲ್ಲ. ನಂತರ ರೈಲಿನಲ್ಲಿ ಉರಿಯುತ್ತಿದ್ದ ದೀಪ ಆಫ್ ಆಗಿದೆ. ಸ್ವಲ್ಪ ಸಮಯದ ನಂತರ ಮತ್ತು ಹಿಂಭಾಗದಿಂದ ಕಿರುಚುವ ಶಬ್ದ ಕೇಳಿದೆ ಎಂದು ಪ್ರಯಾಣಿಕರೊಬ್ಬರು ಪಿಎ ಸುದ್ದಿ ಸಂಸ್ಥೆಗೆ ತಿಳಿಸಿದರು.

ನಂತರ ರೈಲಿನ ಸಿಬ್ಬಂದಿ ಹಿಂಭಾಗಕ್ಕೆ ಹೋಗುವಂತೆ ಹೇಳಿದ್ದಾರೆ. ಒಂದು ಕ್ಷಣ ಎಲ್ಲರೂ ಭಯಭಿತರಾಗಿದ್ದರು, ಹೊರಗಿನಿಂದ ರೈಲಿನ ಕಿಟಕಿ ಗ್ಲಾಸ್​​​ನ್ನು ಮುರಿಯಲು ಶುರು ಮಾಡಿದ್ದಾರೆ. ರೈಲಿನಲ್ಲಿ ಸುಟ್ಟ ವಾಸನೆ ಬರುತ್ತಿತ್ತು. ಆ ಕಾರಣದಿಂದ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿತ್ತು.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ
‘ಅವಕಾಶ ಸಿಕ್ಕರೆ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ ಆಗಲು ಸಿದ್ಧ’; ವಿನೋದ್
‘ಅವಕಾಶ ಸಿಕ್ಕರೆ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ ಆಗಲು ಸಿದ್ಧ’; ವಿನೋದ್
ಕ್ರೀಡಾ ಸ್ಫೂರ್ತಿ ಅಲ್ಲ... ರಿಷಭ್ ಪಂತ್​ ಮಾಡಿದ್ದು ನಾಟಕ: ಇಲ್ಲಿದೆ ವಿಡಿಯೋ
ಕ್ರೀಡಾ ಸ್ಫೂರ್ತಿ ಅಲ್ಲ... ರಿಷಭ್ ಪಂತ್​ ಮಾಡಿದ್ದು ನಾಟಕ: ಇಲ್ಲಿದೆ ವಿಡಿಯೋ