AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಪಿಯನ್ನು ಬಂಧಿಸಿ ಆತನ ಮನೆಯನ್ನು ನೆಲಸಮಗೊಳಿಸಿದ ಪೊಲೀಸರು

Madhya Pradesh : ಮದುವೆಯಾಗಲು ನಿರಾಕರಿಸಿದ್ದಕ್ಕೆ 19 ಹರೆಯದ ಹುಡುಗಿಯನ್ನು ಅಮಾನುಷವಾಗಿ ಥಳಿಸಿದ್ದ ಯುವಕನನ್ನು ಉತ್ತರಪ್ರದೇಶದ ಪೊಲೀಸರು ಇದೀಗ ಬಂಧಿಸಿ, ಆತನ ಮನೆಯನ್ನು ನೆಲಸಮಗೊಳಿಸಿದ್ದಾರೆ.

ಆರೋಪಿಯನ್ನು ಬಂಧಿಸಿ ಆತನ ಮನೆಯನ್ನು ನೆಲಸಮಗೊಳಿಸಿದ ಪೊಲೀಸರು
ಆರೋಪಿಯ ಮನೆಯನ್ನು ಪೊಲೀಸರು ನೆಲಸಮಗೊಳಿಸುತ್ತಿರುವುದು
TV9 Web
| Updated By: ಶ್ರೀದೇವಿ ಕಳಸದ|

Updated on:Dec 26, 2022 | 1:51 PM

Share

ಮಧ್ಯಪ್ರದೇಶದ 24 ವರ್ಷದ ಪಂಕಜ್​ ತ್ರಿಪಾಠಿ ಎಂಬ ಯುವಕ ತನ್ನನ್ನು ಮದುವೆಯಾಗಲು ನಿರಾಕರಿಸಿದ್ದಕ್ಕೆ 19ರ ಹರೆಯದ ಹುಡುಗಿಯ ಕಪಾಳಿಗೆ ಹೊಡೆದು ಕೂದಲನ್ನು ಹಿಡಿದೆಳೆದು ನೆಲಕ್ಕಪ್ಪಳಿಸಿ ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಈತನನ್ನು ಬಂಧಿಸಿ ಈತನ ಮನೆಯನ್ನು ಬುಲ್ಡೋಝರ್​ನಿಂದ ನೆಲಸಮಗೊಳಿಸಿದ್ದಾರೆ. ಈ ಅಮಾನುಷ ಘಟನೆಯನ್ನು ನೆಟ್ಟಿಗರು ಕಟುವಾಗಿ ಟೀಕಿಸಿದ್ದಾರೆ.

ಮಧ್ಯಪ್ರದೇಶದ ರೇವಾದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಯುವತಿಯು ಮದುವೆಯನ್ನು ನಿರಾಕರಿಸಿದ್ದಕ್ಕೆ ಈ ಯುವಕ ಹೀಗೆ ಕ್ರೂರವಾಗಿ ಹಲ್ಲೆ ಮಾಡಿದ್ಧಾನೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಈತ ಪರಾರಿಯಾಗಿದ್ದಾನೆ. ಶನಿವಾರ ರಾತ್ರಿ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಆರೋಪಿ ಪಂಕಜ ತ್ರಿಪಾಟಿಯನ್ನು ಪೊಲೀಸರು ಬಂಧಿಸಿದ್ಧಾರೆ ಇಷ್ಟೇ ಅಲ್ಲ ಇವನ ಮನೆಯನ್ನು ನೆಲಸಮಗೊಳಿಸಿದ್ದಾರೆ. ಪೂರ್ತಿ ನೆಲಸಮಗೊಳಿಸುವವರೆಗೂ ಜಿಲ್ಲಾ ಪೊಲೀಸರು ಹಾಜರಿದ್ದರು.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಅಲ್ಲದೆ ಡ್ರೈವರ್​ ವೃತ್ತಿಯಲ್ಲಿದ್ದ ಆರೋಪಿಯ ಡ್ರೈವಿಂಗ್ ಲೈಸನ್ಸ್ ಅನ್ನು ರದ್ದುಗೊಳಿಸಲಾಗಿದೆ. ಜೊತೆಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಸಮಯದಲ್ಲಿ ಸರಿಯಾದ ಕ್ರಮ ಕೈಗೊಳ್ಳದ ಸ್ಥಳೀಯ ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

ಆರೋಪಿಯು ಯುವತಿಯನ್ನು ಹೀಗೆ ಅಮಾನುಷವಾಗಿ ಹಲ್ಲೆ ಮಾಡುತ್ತಿದ್ದುದನ್ನು ಆತನ ಸ್ನೇಹಿತ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಕ್ಕೆ ಅಪ್​ಲೋಡ್ ಮಾಡಿದ್ದಾನೆ. ಯುವತಿಯು ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರೂ ಆಕೆಯನ್ನು ಎದ್ದುನಿಲ್ಲಿಸಲು ಪ್ರಯತ್ನಿಸುತ್ತಾನೆ ಆರೋಪಿ. ನಂತರ ಆಕೆಯನ್ನು ಅಲ್ಲಿಯೇ ಬಿಟ್ಟು ಪರಾರಿಯಾಗುತ್ತಾನೆ. ಗಂಟೆಗಟ್ಟಲೆ ಆ ಸ್ಥಳದಲ್ಲಿಯೇ ಆಕೆ ಪ್ರಜ್ಞಾಹೀನಳಾಗುತ್ತಾಳೆ. ಈಕೆಯನ್ನು ನೋಡಿದ ಸ್ಥಳೀಯರು ಆಸ್ಪತ್ರೆಗೆ ಸೇರಿಸುತ್ತಾರೆ.

ಈ ಎರಡೂ ವಿಡಿಯೋಗಳನ್ನು ನೋಡಿದ ನೆಟ್ಟಿಗರು, ‘ಆಕೆಯನ್ನು ಹೀಗೆ ಕ್ರೂರವಾಗಿ ಹಿಂಸಿಸಿದ ಅವನಿಗಿ ಕಠಿಣ ಶಿಕ್ಷೆಯಾಗಬೇಕು ಜೊತೆಗೆ ಈ ಕೃತ್ಯಕ್ಕೆ ಸಹಕರಿಸಿದ ಆತನ ಸಂಬಂಧಿ ಮತ್ತು ಸ್ನೇಹಿತರಿಗೂ. ಆದರೆ ಪೊಲೀಸರು ಮನೆಯನ್ನು ಏಕೆ ನೆಲಸಮ ಮಾಡಿದರು ಎನ್ನುವುದು ತಿಳಿಯಲಿಲ್ಲ ಎಂದಿದ್ದಾರೆ. ಈತನನ್ನು ಹೀಗೆ ಬೆಳೆಸಿದ ಪೋಷಕರಿಗೆ ಶಿಕ್ಷೆಯಾಬೇಕು ಎಂದಿದ್ದಾರೆ ಕೆಲವರು.

ಸೂಕ್ತ ರೀತಿಯಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು. ಇದು ಯಾಕೋ ಮನಬಂದಂತೆ ಕಾನೂನನ್ನು ಕೈಗೆತ್ತಿಕೊಂಡಂತೆ ಕಾಣುತ್ತಿದೆ ಎಂದಿದ್ದಾರೆ ಅನೇಕರು. ಜೈಲುಪಾಲಾದ ಆರೋಪಿಯನ್ನು ಸ್ಥಳೀಯ ರಾಜಕಾರಣಿಗಳು ರಕ್ಷಿಸುವ ಸಾಧ್ಯತೆ ಇದೆ ಎಂದೂ ಕೆಲವರು ಅನುಮಾನಿಸಿದ್ಧಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:16 am, Mon, 26 December 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ